ಈ ಅರಣ್ಯ ಪ್ರದೇಶದಲ್ಲಿದೆ ಚಿಪ್... ಯಾಮಾರಿಸಿ ಕಳ್ಳತನ ಮಾಡಲು ಪ್ರಯತ್ನಿಸಿದರೆ ಹುಷಾರ್..!
ದಾವಣಗೆರೆ, ಜೂನ್ 6: ಜಿಲ್ಲೆಯಲ್ಲಿ ಬೃಹತ್ ಅರಣ್ಯ ಹೊಂದಿರುವುದು ಚನ್ನಗಿರಿ ತಾಲೂಕು. ಇಲ್ಲಿನ ಕಾನನ ನೋಡಲು ಬಲು ಸುಂದರ. ಇಲ್ಲಿನ ಪ್ರಕೃತಿದತ್ತ ಗಿಡಗಳನ್ನು ನೋಡುವುದೇ ಒಂದು ಸೌಭಾಗ್ಯ. ಈ ಕಾನನದಲ್ಲಿನ ಮರಗಳು ಒಂದಕ್ಕಿಂತ ಮತ್ತೊಂದು ಡಿಫರೆಂಟ್. ನೋಡಲಷ್ಟೇ ಅಲ್ಲ, ಸಂಪತ್ಬರಿತ ತಾಣ. ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಅರಣ್ಯ ಪ್ರದೇಶ ಪ್ರಕೃತಿ ಸೊಬಗು ಒಡಲಲ್ಲಿ ಇಟ್ಟುಕೊಂಡಿದೆ. ಶ್ರೀಗಂಧದ ಮರಗಳು ಹೆಚ್ಚಾಗಿ ಈ ಕಾನನದಲ್ಲಿ ಕಾಣಸಿಗುತ್ತವೆ. ಇಂತ ಸಂಪದ್ಬರಿತ ಮರಗಳ ಮೇಲೆ ಕಳ್ಳರ ವಕ್ರದೃಷ್ಟಿ ಬಿದ್ದಿತ್ತು. ಆದ್ರೆ, ಇದೀಗ ಅರಣ್ಯ ಇಲಾಖೆಯ ಅಧಿಕಾರಿಗಳ ಜಾಣ ನಡೆಯಿಂದ ಇದಕ್ಕೆ ಬ್ರೇಕ್ ಬಿದ್ದಿದೆ.
ಹಚ್ಚ ಹಸಿರಿನಿಂದ ಕಂಗೊಳಿಸುವ ದಟ್ಟ ಕಾನನದಲ್ಲಿ ಕಣ್ಣು ಹಾಯಿಸಿದ ಕಡೆಯೆಲ್ಲಾ ಶ್ರೀಗಂಧದ ಮರಗಳು ಕಾಣ ಸಿಗುತ್ತವೆ. ಚನ್ನಗಿರಿ ತಾಲೂಕಿನಾದ್ಯಂತ ಶ್ರೀಗಂಧ ಮರಗಳು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿವೆ. ಆದ್ರೆ, ಶ್ರೀಗಂಧದ ಮರಗಳನ್ನು ಕಳ್ಳರು ಕಳವು ಮಾಡುವ ಪ್ರಕರಣಗಳೂ ಹೆಚ್ಚಾಗಿದ್ದವು. ಅರಣ್ಯ ಪ್ರದೇಶದಲ್ಲಿ ಹುಲುಸಾಗಿ ಬೆಳೆದ ಮರಗಳನ್ನ ನೋಡಿದರೆ, ಕಳ್ಳರು ಕ್ಷಣಾರ್ಧದಲ್ಲಿ ಕಳುವು ಮಾಡುತ್ತಿದ್ದರು. ಇದು ಅರಣ್ಯ ಇಲಾಖೆಗೆ ತಲೆನೋವು ತಂದಿತ್ತು.
ಏನಾದರೂ ಮಾಡಿ ಶ್ರೀಗಂಧದ ಮರಗಳ ಕಳುವಿಗೆ ಬ್ರೇಕ್ ಹಾಕಬೇಕು ಅಂತ ಚಿಂತನೆ ನಡೆಸಿದ ಅರಣ್ಯ ಇಲಾಖೆ ತಂತ್ರಜ್ಞಾನದ ಮೊರೆ ಹೋಯಿತು. ವೀರೇಶ್ ನಾಯ್ಕ್ ಅವರು ಇಲ್ಲಿಗೆ ವಲಯ ಅರಣ್ಯಾಧಿಕಾರಿಯಾಗಿ ಬಂದ ಬಳಿಕ ಇದು ಸಾಕಾರಗೊಂಡಿದೆ.

ಎಂಜಿನಿಯರಿಂಗ್ ಹಿನ್ನೆಲೆಯಿಂದ ವೀರೇಶ್ ಅವರು ಬಂದವರಾಗಿದ್ದ ಕಾರಣ ಕಾನನದಲ್ಲಿ ಹಲವು ಶ್ರೀಗಂಧ ಮರಗಳನ್ನು ಗುರುತಿಸಿ ಮೈಕ್ರೋ ಚಿಪ್ ಅಳವಡಿಸಿದ್ದಾರೆ. ಇನ್ನು ಕೆಲವು ಮರಗಳು ಇದ್ದು ಕಾಡಿನೊಳಗೆ ಹುಡುಕಿ ಚಿಪ್ ಅಳವಡಿಸುವ ಕಾರ್ಯ ಮುಂದುವರಿದಿದೆ. ವೀರೇಶ್ ಅವರ ಯೋಜನೆ ಈಗಲೂ ಕೈಹಿಡಿದಿದ್ದು, ಕಾನನದಲ್ಲಿ ಶ್ರೀಗಂಧ ಮರಗಳನ್ನು ಗುರುತಿಸುವ ಕಾರ್ಯ ಈಗಲೂ ಮುಂದುವರಿದಿದೆ.

ಚಿಪ್ ಅಳವಡಿಕೆ ಹೇಗೆ...? ಕಾರ್ಯನಿರ್ವಹಿಸುವುದೇಗೆ...?
ಪ್ರಾಯೋಗಿಕವಾಗಿ ಶ್ರೀಗಂಧದ ಮರವೊಂದಕ್ಕೆ ಮೈಕ್ರೋ ಚಿಪ್ ಅಳವಡಿಸಲಾಗುತ್ತದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಸ್ಮಾರ್ಟ್ ಫೋನ್ ಗಳಿಗೆ ಸಪೋರ್ಟೆಂಡ್ ಆ್ಯಪ್ ಗಳನ್ನು ಹಾಕಿಕೊಳ್ಳುವ ಮೂಲಕ ಪರಿಶೀಲನೆ ಮಾಡಲಾಗುತ್ತದೆ. ಮೈಕ್ರೋ ಚಿಪ್ ಅಳವಡಿಸಿದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಯೇ ಕಡಿದು ಸಾಗಣೆ ಮಾಡುವ ಮೂಲಕ ಯಾವ ರೀತಿ ಕಾರ್ಯ ನಿರ್ವಹಣೆ ಆಗುತ್ತದೆ ಎಂಬುದನ್ನು ಖಚಿತಪಡಿಸಿಕೊಂಡಿದ್ದಾರೆ. ಕಾನನದಲ್ಲಿರುವ ಬೆಲೆಬಾಳುವ ಎಲ್ಲಾ ಮರಗಳಿಗೂ ಅಳವಡಿಸುವ ಕಾರ್ಯ ಮುಂದುವರಿದಿದೆ. ಒಟ್ಟಿನಲ್ಲಿ ಚಿಪ್ ಅಳವಡಿಕೆಯ ಈ ತಂತ್ರಜ್ಞಾನದಿಂದ ಮಾವಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಮರಗಳ್ಳತನಕ್ಕೆ ಕಡಿವಾಣ ಬಿದ್ದಿದೆ.
-
LPG ಕೊರತೆಯಿಂದ ಮರಗಳಿಗೆ ಕೊಡಲಿ ಭೀತಿ: ಅಕ್ರಮ ಮರ ಕಡಿತ ತಡೆಯಲು ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಖಡಕ್ ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion












Click it and Unblock the Notifications