ಅಕ್ಕ ಸಮ್ಮೇಳನ, ದಲಿತ ಕಲಾವಿದರ ಬಗ್ಗೆ ಸಚಿವ ಆಂಜನೇಯ
ಬೆಂಗಳೂರು, ಸೆಪ್ಟೆಂಬರ್ 02: ಅಮೆರಿಕದ ಅಟ್ಲಾಂಟಿಕ್ ಸಿಟಿಯಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ದಲಿತ ಕಲಾವಿದರಿಗೆ ಪಾಲ್ಗೊಳ್ಳಲು ಅವಕಾಶ ಸಿಗದೇ ಇರುವ ಹಿನ್ನೆಲೆಯಲ್ಲಿ ತಾವು ಕೂಡಾ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.
ದಲಿತ ಕಲಾವಿದರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಾಗದೇ ಇರುವುದರಿಂದ ತಾವು ಅಕ್ಕ ಸಮ್ಮೇಳನದಲ್ಲಿ ಭಾಗವಹಿಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಆಂಜನೇಯ ಸಮ್ಮೇಳನದ ಪದಾಧಿಕಾರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ. [ಅಕ್ಕ ಸಮ್ಮೇಳನ ಕುರಿತ ಸಮಗ್ರ ಸುದ್ದಿಗಳು]

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ದಲಿತ ಕಲಾವಿದರು ಅಕ್ಕ ಸಮ್ಮೇಳನದಲ್ಲ ಭಾಗವಹಿಸಲು ಅನುಕೂಲ ಮಾಡಿಕೊಡಬೇಕಿತ್ತು.
ಆದರೆ,ಅದು ಮಾಡಿದ ವಿಳಂಬದಿಂದಾಗಿ ದಲಿತ ಕಲಾವಿದರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕಾಗಿ ಮುಂದಿನ ವರ್ಷ ದಲಿತ ಕಲಾವಿದರಿಗೆ ತಾವೇ ಮುಂದಾಗಿ ನಿಂತು ವೀಸಾ ಸಿಗುವ ವ್ಯವಸ್ಥೆ ಮಾಡುತ್ತೇನೆ. ಆದ್ದರಿಂದ ಅಮೆರಿಕದಲ್ಲಿ ನಡೆಯುವ ಅಕ್ಕ ಸಮ್ಮೇಳನಕ್ಕೆ ಈ ವರ್ಷ ಹೋಗದೆ ಮುಂದಿನ ವರ್ಷವೇ ಬರುವುದಾಗಿ ತಿಳಿಸಿದ್ದಾರೆ.
ಅಕ್ಕ ಸಮ್ಮೇಳನ: ಅಮೆರಿಕದ ನ್ಯೂಜೆರ್ಸಿಯ ಅಟ್ಲಾಂಟಿಕ್ ಸಿಟಿಯಲ್ಲಿ ಸೆಪ್ಟೆಂಬರ್ 02ರಿಂದ ಮೂರು ದಿನಗಳ ಅಸೋಸಿಯೇಷನ್ಸ್ ಆಫ್ ಕನ್ನಡ ಕೂಟಾಸ್ ಆಫ್ ಅಮೆರಿಕ(AKKA) ಸಮ್ಮೇಳನ ನಡೆಯಲಿದೆ. ಇದು 9ನೇ ಅಕ್ಕ ಸಮ್ಮೇಳನವಾಗಿದ್ದು, ಈ ಬಾರಿ 90ಕ್ಕೂ ಅಧಿಕ ದಲಿತ ಕಲಾವಿದರನ್ನು ಅಮೆರಿಕಕ್ಕೆ ಕಳಿಸಲು ಸಮಾಜ ಕಲ್ಯಾಣ ಇಲಾಖೆ ಸೂಚಿಸಿತ್ತು. ಆದರೆ, ಕೊನೆಕ್ಷಣದಲ್ಲಿ ವೀಸಾ ಸಮಸ್ಯೆಯಾಗಿದ್ದರಿಂದ ಅನೇಕ ಕಲಾವಿದರು ವಿಮಾನಯಾನ ಮಿಸ್ ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications