'ಅವ್ನಿಗೆ ಬುದ್ದಿ ಇಲ್ಲ': ಎಂಟಿಬಿ ನಾಗರಾಜ್ ಹೇಳಿಕೆಗೆ ಭೈರತಿ ಬಸವರಾಜ್ ಗರಂ!
ದಾವಣಗೆರೆ, ಮೇ21: 'ಬಿಜೆಪಿಗೆ ಬಂದು ತಪ್ಪು ಮಾಡಿದ್ವಿ' ಎಂಬ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು "ಅವ್ನಿಗೆ ಬುದ್ದಿ ಇಲ್ಲ'' ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಚನ್ನಗಿರಿಯಲ್ಲಿ ನೆರೆ ಹಾನಿ ವೀಕ್ಷಣೆಗೆ ಬಂದ ವೇಳೆ ಎಂಟಿಬಿ ನಾಗರಾಜ್ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, ಆ ರೀತಿಯಲ್ಲಾ ಮಾತನಾಡಬಾರದಿತ್ತು. ನಾನು ಇಷ್ಟೇ ಹೇಳೋದು ಎಂದು ಬೈರತಿ ಹೇಳಿದರು.
ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ
ಸಚಿವ ಸಂಪುಟದಲ್ಲಿ ವಲಸಿಗ ಸಚಿವರನ್ನ ಕೈಬಿಡುವ ಆತಂಕದ ಕುರಿತು ಕೇಳಿದ ಪ್ರಶ್ನೆಗೆ, "ನಮ್ಮನ್ನು ಸಂಪುಟದಿಂದ ಕೈಬಿಡಲ್ಲ ಅನ್ನೋ ವಿಶ್ವಾಸ ಇದೆ. ವಲಸೆ ಬಂದವರನ್ನ ಪಕ್ಷ ಆ ರೀತಿ ನಡೆಸಿಕೊಳ್ಳಲ್ಲ ಅನ್ನೋ ಭರವಸೆ ಇದೆ. ಪಕ್ಷ ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೆ ಅನ್ನೋ ವಿಶ್ವಾಸ ಇದೆ," ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವೇಳೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರಮಾಧಿಕಾರ. ಯಾರೂ ಪ್ರಶ್ನೆ ಮಾಡಲು ಆಗದು. ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಿದ್ದೇವೆ ಎಂದು ಭೈರತಿ ಬಸವರಾಜ್ ತಿಳಿಸಿದರು.
ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ ಮಾಡಾಳು ವಿರೂಪಾಕ್ಷಪ್ಪ...!
ಪಕ್ಷ ನನ್ನನ್ನು ಗುರುತಿಸಿ ಸಚಿವ ಸ್ಥಾನ ನೀಡಿದ್ರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ. ಚನ್ನಗಿರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಮಾತು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.
ಸಿಎಂ ದೆಹಲಿಗೆ ಹೋಗುತಿದ್ದಂತೆ ಸಚಿವ ಸ್ಥಾನ ಆಸೆ ಬಿಚ್ಚಿಟ್ಟಿರುವ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು, ಬಿಜೆಪಿ ಪಕ್ಷವು ನನ್ನನ್ನು ಶಾಸಕನಾಗಿ ಮಾಡಿದೆ. ಸಾಬೂನು ಮಾರ್ಜಕ ಮಂಡಳಿ ಅಧ್ಯಕ್ಷರನ್ನಾಗಿಸಿದೆ. ನಾನೊಬ್ಬ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷಕ್ಕೆ, ಸಿಎಂಗೆ ಮುಜುಗರ ಆಗುವಂತ ಕೆಲಸ ಮಾಡಲ್ಲ. ಒಂದು ವೇಳೆ ಪಕ್ಷವು ಸಚಿವ ಸ್ಥಾನ ನೀಡಿದ್ರೆ ಉತ್ತಮ ಕೆಲಸ ಮಾಡುತ್ತೇನೆ ಎಂದು ಹೇಳಿದರು.

-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications