ತಡರಾತ್ರಿ ರೇಣುಕಾಚಾರ್ಯ ತೋರಿದ ಸಮಯ ಪ್ರಜ್ಞೆ: ಉಳಿಯಿತು 20 ಜನರ ಪ್ರಾಣ
ದಾವಣಗೆರೆ, ಮೇ 13: ಇನ್ನೇನು ಕೇವಲ ಮೂರು ಗಂಟೆಗೆ ಬೇಕಾಗುವಷ್ಟು ಮಾತ್ರ ಆಕ್ಸಿಜನ್ ಆಸ್ಪತ್ರೆಯಲ್ಲಿ ಉಳಿದಿತ್ತು. ಸಕಾಲದಲ್ಲಿ ಆಮ್ಲಜನಕ ಸಪ್ಲೈ ಆಗದೇ ಇದ್ದಲ್ಲಿ ಇಪ್ಪತ್ತು ಕೊರೊನಾ ಸೋಂಕಿತ ರೋಗಿಗಳ ಪ್ರಾಣಕ್ಕೆ ತೊಂದರೆಯಾಗುತ್ತಿತ್ತು.
Recommended Video
ಆ ವೇಳೆ, ಪಿಪಿಇ ಕಿಟ್ ಧರಿಸಿ ಹೊನ್ನಾಳಿ ಆಸ್ಪತ್ರೆಯ ವಾರ್ಡ್ ಭೇಟಿಗೆ ಬಂದಿದ್ದ ಎಂ.ಪಿ.ರೇಣುಕಾಚಾರ್ಯ ಅವರಿಗೆ ಆಕ್ಸಿಜನ್ ಕೊರತೆಯ ಮಾಹಿತಿ ಲಭ್ಯವಾಗಿದೆ. ವೈದ್ಯರ ಜೊತೆ ಚರ್ಚಿಸಿದ ರೇಣುಕಾಚಾರ್ಯ ಆಕ್ಸಿಜನ್ ವ್ಯವಸ್ಥೆ ಮಾಡಲು ತಾವೇ ಖುದ್ದಾಗಿ ಹೊರಟಿದ್ದಾರೆ.
ತಡರಾತಿ ಎರಡು ಗಂಟೆಗೆ ತಮ್ಮದೇ ಕಾರಿನಲ್ಲಿ ಹರಿಹರಕ್ಕೆ ಹೊರಟ ರೇಣುಕಾಚಾರ್ಯ, ಹರಿಹರದ ಸದರನ್ ಗ್ಯಾಸ್ ಲಿಮಿಟೆಡ್ ಮಾಲೀಕರ ಜೊತೆ ಮಾತುಕತೆ ನಡೆಸಿ, ತಮ್ಮದೇ ಕಾರಿನಲ್ಲಿ ಆಕ್ಸಿಜನ್ ಸಿಲಿಂಡರ್ ಹಾಕಿಕೊಂಡು ಆಸ್ಪತ್ರೆಗೆ ತಂದು ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೇ, ಮತ್ತೆ ಪಿಪಿಇ ಕಿಟ್ ಹಾಕಿಕೊಂಡು ಆಸ್ಪತ್ರೆಯ ವಾರ್ಡಿಗೆ ಭೇಟಿ ನೀಡಿ, ಎಲ್ಲಾ ಇಪ್ಪತ್ತು ರೋಗಿಗಳು ಮತ್ತು ಅವರ ಸಂಬಂಧಿಕರ ಜೊತೆ ಮಾತನಾಡಿ, ಧೈರ್ಯ ತುಂಬುವ ಕೆಲಸವನ್ನು ರೇಣುಕಾಚಾರ್ಯ ಮಾಡಿದ್ದಾರೆ.
ಶಾಸಕರ ಸಮಯ ಪ್ರಜ್ಞೆ ವ್ಯಾಪಕ ಪ್ರಶಂಶೆಗೊಳಗಾಗಿದೆ. ಒಂದು ವೇಳೆ, ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಆಗದೇ ಇದ್ದಲ್ಲಿ, ಚಾಮರಾಜನಗರದಲ್ಲಿ ನಡೆದಂತಹ ದುರಂತ ಎದುರಾಗುವ ಸಾಧ್ಯತೆಯಿತ್ತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಎಂ.ಪಿ.ರೇಣುಕಾಚಾರ್ಯ, ಹೊನ್ನಾಳಿ ಕ್ಷೇತ್ರದ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನೂ ಮಾಡುತ್ತಿದ್ದಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications