MP Renukacharya: ಹೊನ್ನಾಳಿ:ಸಹೋದರನ ಪುತ್ರ ನಾಪತ್ತೆ, ಕಣ್ಣೀರಿಟ್ಟ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ, ನವೆಂಬರ್, 02: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ಕಾಣೆಯಾಗಿದ್ದು, ಇದೀಗ ಚಂದ್ರಶೇಖರ್ ಪತ್ತೆಗೆ ಶೋಧ ತೀವ್ರಗೊಂಡಿದೆ. ಮನೆಗೆ ಮರಳುವಂತೆ ಕಣ್ಣೀರಿಟ್ಟು ರೇಣುಕಾಚಾರ್ಯ ಕೋರಿದ್ದಾರೆ

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹೋದರ ಎಂ. ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಭಾನುವಾರದಿಂದ ನಾಪತ್ತೆ ಆಗಿದ್ದು, ಇದುವರೆಗೆ ಮನೆಗೆ ಹಿಂದಿರುಗಿ ಬಂದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಕಳೆದ ಭಾನುವಾರ ಶಿವಮೊಗ್ಗಕ್ಕೆ ವಿನಯ್ ಗುರೂಜಿ ಭೇಟಿಯಾಗಲು ತೆರಳಿದ್ದ. ವಿನಯ್ ಗುರೂಜಿ ಭೇಟಿಯಾದ ನಂತರ ಶಿವಮೊಗ್ಗದಿಂದ ಹೊನ್ನಾಳಿಗೆ ಚಂದ್ರಶೇಖರ್ ಬಂದಿದ್ದ. ಆದರೂ ಕೂಡ ಮನೆಗೆ ಹೋಗಿರಲಿಲ್ಲ. ಸ್ನೇಹಿತರ ಜೊತೆ ಇರಬಹುದು ಎಂದುಕೊಂಡಿದ್ದ ಮನೆಯವರು, ಸ್ವಲ್ಪ ಸಮಯದ ನಂತರ ಫೋಸ್ ಮಾಡಿದ್ದಾರೆ. ಆಗ ಆತನ ಫೋನ್ ಸ್ವಿಚ್ ಆಫ್ ಆಗಿರುವುದು ತಿಳಿದುಬಂದಿದೆ. ಹೊನ್ನಾಳಿಯಲ್ಲಿನ ಸ್ನೇಹಿತರು, ಆಪ್ತರು, ಸಂಬಂಧಿಕರನ್ನು ವಿಚಾರಿಸಿದರೂ ಕೂಡ ಇನ್ನು ಚಂದ್ರಶೇಖರ್ ಪತ್ತೆಯಾಗಿಲ್ಲ.

ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ
ಹೊನ್ನಾಳಿಯಲ್ಲಿ ಚಂದ್ರಶೇಖರ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಫೋನ್ ಸ್ವಿಚ್ ಆಫ್ ಆಗಿರುವ ಬಗ್ಗೆಯೂ ಮಾಹಿತಿ ಇಲ್ಲದಂತಾಗಿದೆ. ಚಂದ್ರಶೇಖರ್ ಶಿವಮೊಗ್ಗದಿಂದ ಹೊನ್ನಾಳಿಗೆ ಬಂದರೂ ಮನೆಗೆ ಯಾಕೆ ಬರಲಿಲ್ಲ? ಫೋನ್ ಯಾಕೆ ಸ್ವಿಚ್ ಆಫ್ ಆಗಿದೆ? ಆತ ಎಲ್ಲಿದ್ದಾನೆ? ಏನಾಗಿರಬಹುದು ಎಂಬ ಪ್ರಶ್ನೆಗಳ ಮೇಲೆ ಪ್ರಶ್ನೆ ಎದ್ದಿವೆ. ಹೊನ್ನಾಳಿ ಪಟ್ಟಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಸಕ ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ತೆರಳಿದ್ದಾರೆ. ಇದೀಗ ಶಾಸಕರ ತಮ್ಮನ ಮಗನ ಪತ್ತೆಗೆ ಪೊಲೀಸರು ಶೋಧಕಾರ್ಯವನ್ನು ತೀವ್ರಗೊಳಿಸಿದ್ದಾರೆ.
3
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications