ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಶಾಸಕರ ಮನೆ ಮೇಲಿನ ದಾಳಿಗೆ ಸಂಸದ ಸಿದ್ದೇಶ್ವರ್ ಖಂಡನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಆಗಸ್ಟ್ 13: ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ದುರಾದೃಷ್ಟಕರ, ಶಾಸಕರ ಮನೆ ಮೇಲೆಯೇ ದಾಳಿ ನಡೆಸಿರುವುದು ಮನುಷ್ಯತ್ವವೇ ಅಲ್ಲ. ಯಾರೇ ಎಷ್ಟೇ ದೊಡ್ಡವರಾಗಿರಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ತಿಳಿಸಿದರು.

Recommended Video

DJ halli , KG Halliಯಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ Zameer Ahmed | Oneindia Kannada

ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿಂದು ಸಂಸದ ಜಿ.ಎಂ. ಸಿದ್ದೇಶ್ವರ್ ತರಳಬಾಳು ವೃತ್ತ, ಆರೂಢ ದಾಸೋಹಿ ಮಾಗನೂರು ಬಸಪ್ಪ ರಸ್ತೆ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.

ಕಾಂಗ್ರೆಸ್ ನಾಯಕರಿಂದ ಥರ್ಡ್ ಕ್ಲಾಸ್ ರಾಜಕೀಯ: ಶಾಸಕ ರಾಮದಾಸ್ಕಾಂಗ್ರೆಸ್ ನಾಯಕರಿಂದ ಥರ್ಡ್ ಕ್ಲಾಸ್ ರಾಜಕೀಯ: ಶಾಸಕ ರಾಮದಾಸ್

ಬಹಳ ದಿನಗಳಿಂದ ತರಳಬಾಳು ವೃತ್ತ, ಮಾಗನೂರು ಬಸಪ್ಪ ರಸ್ತೆ ಹೆಸರಿಡಲು ತೀರ್ಮಾನಿಸಲಾಗಿತ್ತು. ಏಳು ವರ್ಷದ ಮಹಾನಗರ ಪಾಲಿಕೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಅನುಮತಿಯೂ ದೊರೆತಿತ್ತು. ಕಾರಣಾಂತರದಿಂದ ಅನಾವರಣ ಆಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನಾವರಣಗೊಳಿಸಲಾಗಿದೆ ಎಂದು ತಿಳಿಸಿದರು.

Davanagere: MP G M Siddeshwar Condemns Attack On Pulakeshinagara MLAs House

ಸಿರಿಗೆರೆಯ ಶಿವಕುಮಾರ ಹಾಗೂ ಡಾ.ಶಿವಮೂರ್ತಿ ಸ್ವಾಮೀಜಿಯವರ ಹೆಸರಿಟ್ಟಿರುವುದು ದಾವಣಗೆರೆಯ ಜನತೆಗೆ ಸಂತೋಷ ತಂದಿದೆ ಎಂದರು. ಶಾಸಕ ಎಸ್.ಎ ರವೀಂದ್ರನಾಥ್, ಮೇಯರ್ ಬಿ.ಜಿ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಶಿವಯೋಗಿ ಸ್ವಾಮಿ ಇತರರು ಇದ್ದರು.

English summary
Davangere MP GM Siddheshwara said the riots in Bengaluru's DJ Halli and KG Halli were unfortunate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X