Get Updates
Get notified of breaking news, exclusive insights, and must-see stories!

ಕೊರೊನಾ ವಾರಿಯರ್ಸ್ ಗಾಗಿ ದಾವಣಗೆರೆಯಲ್ಲಿ ಮೃತ್ಯುಂಜಯ ಹೋಮ

ದಾವಣಗೆರೆ, ಜೂನ್ 1: ಕಳೆದ 2 ತಿಂಗಳಿನಿಂದಲೂ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳು, ವೈದ್ಯರು, ದಾದಿಯರಿಗೆ ಹೊನ್ನಾಳಿಯಲ್ಲಿ ಇಂದು ಪುಷ್ಪವೃಷ್ಟಿಯೊಂದಿಗೆ ಸನ್ಮಾನಿಸಲಾಯಿತು.

Recommended Video

      Train services start today , Dos and Don'ts during the journey | Railways Resumed | Oneindia Kannada

      ಹೊನ್ನಾಳಿ ಮತ್ತು ನ್ಯಾಮತಿಯ ಅವಳಿ ತಾಲ್ಲೂಕಿನಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಇಂದು ಹೊನ್ನಾಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪುಷ್ಪವೃಷ್ಟಿ ಹಾಗೂ ಮಾಲಾರ್ಪಣೆಯ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

      ನಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ತೆರಳಿ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಯಿತು. ಇಂದು ಬೆಳಿಗ್ಗೆ ಶ್ರೀಮಠದಲ್ಲಿ ಕೊರೊನಾ ವಾರಿಯರ್ಸ್ ಗೆ ಒಳ್ಳೆಯದಾಗಲಿ ಹಾಗೂ ಕೊರೊನಾ ವೈರಸ್ ನಿವಾರಣೆಗೆ ಪ್ರಾರ್ಥಿಸಿ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿತ್ತು.

      Mrityunjaya Homa In Davanagere For Coronavirus Troubleshooting

      ಸರ್ವರಿಗೂ ಒಳ್ಳೆಯದಾಗಲಿ, ಕಾಲಕಾಲಕ್ಕೆ ಮಳೆ-ಬೆಳೆ ಉತ್ತಮವಾಗಲಿ ಎಂದು ಪ್ರಾರ್ಥಿಸಲಾಯಿತು. ಈ ವೇಳೆ ಹಿರೇಕಲ್ಮಠದ ಶ್ರೀಗಳು, ಶಾಸಕರಾದ ರೇಣುಕಾಚಾರ್ಯ ದಂಪತಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಘವೇಂದ್ರ, ಅವಳಿ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಇದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+