ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ವಾರಿಯರ್ಸ್ ಗಾಗಿ ದಾವಣಗೆರೆಯಲ್ಲಿ ಮೃತ್ಯುಂಜಯ ಹೋಮ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 1: ಕಳೆದ 2 ತಿಂಗಳಿನಿಂದಲೂ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳು, ವೈದ್ಯರು, ದಾದಿಯರಿಗೆ ಹೊನ್ನಾಳಿಯಲ್ಲಿ ಇಂದು ಪುಷ್ಪವೃಷ್ಟಿಯೊಂದಿಗೆ ಸನ್ಮಾನಿಸಲಾಯಿತು.

Recommended Video

Train services start today , Dos and Don'ts during the journey | Railways Resumed | Oneindia Kannada

ಹೊನ್ನಾಳಿ ಮತ್ತು ನ್ಯಾಮತಿಯ ಅವಳಿ ತಾಲ್ಲೂಕಿನಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಇಂದು ಹೊನ್ನಾಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪುಷ್ಪವೃಷ್ಟಿ ಹಾಗೂ ಮಾಲಾರ್ಪಣೆಯ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ದಾವಣಗೆರೆ: ಕಂಟೈನ್ಮೆಂಟ್ ವಲಯದಲ್ಲಿ ಹೆಚ್ಚಿದ ಕೊರೊನಾ ಸೋಂಕಿತರುದಾವಣಗೆರೆ: ಕಂಟೈನ್ಮೆಂಟ್ ವಲಯದಲ್ಲಿ ಹೆಚ್ಚಿದ ಕೊರೊನಾ ಸೋಂಕಿತರು

ನಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ತೆರಳಿ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಯಿತು. ಇಂದು ಬೆಳಿಗ್ಗೆ ಶ್ರೀಮಠದಲ್ಲಿ ಕೊರೊನಾ ವಾರಿಯರ್ಸ್ ಗೆ ಒಳ್ಳೆಯದಾಗಲಿ ಹಾಗೂ ಕೊರೊನಾ ವೈರಸ್ ನಿವಾರಣೆಗೆ ಪ್ರಾರ್ಥಿಸಿ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿತ್ತು.

Mrityunjaya Homa In Davanagere For Coronavirus Troubleshooting

ಸರ್ವರಿಗೂ ಒಳ್ಳೆಯದಾಗಲಿ, ಕಾಲಕಾಲಕ್ಕೆ ಮಳೆ-ಬೆಳೆ ಉತ್ತಮವಾಗಲಿ ಎಂದು ಪ್ರಾರ್ಥಿಸಲಾಯಿತು. ಈ ವೇಳೆ ಹಿರೇಕಲ್ಮಠದ ಶ್ರೀಗಳು, ಶಾಸಕರಾದ ರೇಣುಕಾಚಾರ್ಯ ದಂಪತಿ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಘವೇಂದ್ರ, ಅವಳಿ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಇದ್ದರು.

English summary
Honnalli Taluk Officials, doctors and nurses who served as Corona Warriors for the past 2 months were honored today in Honnali.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X