ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದರಪ್ಪ ಶಾಮನೂರು ಶಿವಶಂಕರಪ್ಪ
Recommended Video

ದಾವಣಗೆರೆ, ಸೆಪ್ಟೆಂಬರ್ 15: "ಕೇವಲ ಜಗದ್ಗುರುಗಳ ಪೋನ್ ಅಷ್ಟೇ ಅಲ್ಲ, ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ" ಎಂದು ದಾವಣಗೆರೆಯಲ್ಲಿ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದ ಹಂದರಗಂಬ ಪೂಜೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ರಂಭಾಪುರಿ ಜಗದ್ಗುರುಗಳ ಪೋನ್ ಕದ್ದಾಲಿಕೆಯಾಗಿದೆ ಎನ್ನುತ್ತಿದ್ದಾರೆ. ಅವರ ಫೋನ್ ಮಾತ್ರ ಅಲ್ಲ, ನನ್ನ ಪೋನ್ ಕದ್ದಾಲಿಕೆ ಕೂಡ ಆಗಿದೆ. ಅಷ್ಟೇ ಏಕೆ ಐ. ಟಿ. ದಾಳಿ ಕೂಡ ಆಗಿದೆ ಎಂದಿದ್ದಾರೆ.
ಅಲ್ಲದೆ ಒಕ್ಕಲಿಗರ ಸ್ವಾಮೀಜಿ ಫೋನ್ ಕದ್ದಾಲಿಕೆಯಾಗಿದೆ ಎನ್ನುತ್ತಿದ್ದಾರೆ. ಎಲ್ಲರ ಫೋನ್ ಕದ್ದಾಲಿಕೆ ಆಗುತ್ತದೆ. ಅದೆಲ್ಲ ಸಾಮಾನ್ಯ ಎನ್ನುವ ಮೂಲಕ ಹೊಸ ಬಾಂಬ್ ಸ್ಫೋಟಿಸಿದ್ದಾರೆ.

ದಸರಾ ಧರ್ಮ ಸಮ್ಮೇಳನ
ದಾವಣಗೆರೆಯಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ವರೆಗೆ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಸ್ವಾಮೀಜಿ ದಸರಾ ಧರ್ಮ ಸಮ್ಮೇಳನ ನಡೆಯಲಿದೆ. ನಗರದ ಹೈಸ್ಕೂಲು ಮೈದಾನದಲ್ಲಿ ನಡೆಯುವ ಧರ್ಮ ಸಮ್ಮೇಳನಕ್ಕೆ ವೇದಿಕೆ ನಿರ್ಮಾಣಕ್ಕಾಗಿ ಭಾನುವಾರ ಹಂದರಗಂಬ ಪೂಜೆ ನೆರವೇರಿಸಲಾಯಿತು.
ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹಂದರಗಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಇದೇ ವೇಳೆ ವಿವಿಧ ಮಠಗಳ ಮಠಾಧೀಶರು, ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
1986ರಲ್ಲಿ ದಾವಣಗೆರೆ ನಗರದಲ್ಲಿ ದಸರಾ ಧರ್ಮ ಸಮ್ಮೇಳನ ನಡೆದಿದ್ದು, 32 ವರ್ಷಗಳ ನಂತರ ಮತ್ತೊಮ್ಮೆ ರಂಭಾಪುರಿ ಶ್ರೀಗಳ ದಸರಾ ಧಾರ್ಮಿಕ ಸಮ್ಮೇಳನ ದಾವಣಗೆರೆಯಲ್ಲಿ ನಡೆಯಲಿದ್ದು, ಸರ್ವಧರ್ಮೀಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ರಂಭಾಪುರಿ ಶ್ರೀಗಳ ಪೀಠಾರೋಹಣದ ನಂತರ 28ನೇ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಕಾರ್ಯಕ್ರಮ ಇದಾಗಿದ್ದು, ರಂಭಾಪುರಿ ಶ್ರೀಗಳು ದಸರಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ನಿತ್ಯ ಬೆಳಗ್ಗೆ ಇಷ್ಟಲಿಂಗ ಪೂಜೆ ಹಾಗೂ ಸಂಜೆ ಧರ್ಮ ಜಾಗೃತಿ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮದ ಸ್ವರೂಪದ ಬಗ್ಗೆ ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಮಾಹಿತಿ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications