ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಮೈತ್ರಿ ಸರ್ಕಾರವಿದ್ದಾಗ ನನ್ನ ಫೋನನ್ನೂ ಟ್ರ್ಯಾಪ್ ಮಾಡಿದ್ದರು": ಎಂ.ಪಿ. ರೇಣುಕಾಚಾರ್ಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

Recommended Video

ಫೋನ್ ಕದ್ದಾಲಿಕೆ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು? | Oneindia Kannada

ದಾವಣಗೆರೆ, ಆಗಸ್ಟ್ 14: "ಮೈತ್ರಿ ಸರ್ಕಾರದ ಆಡಳಿತವಿದ್ದಾಗ ನನ್ನ ಫೋನನ್ನೂ ಟ್ರ್ಯಾಪ್ ಮಾಡಿದ್ದರು" ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸ್ಫೋಟಿಸಿದ್ದಾರೆ.‌

 ಆಡಿಯೋ ಟ್ರ್ಯಾಪ್ ನಲ್ಲಿ ಬಿಜೆಪಿ: ಸಿದ್ದು ಔತಣಕೂಟದಲ್ಲಿ ಸಂಭ್ರಮಾಚರಣೆ? ಆಡಿಯೋ ಟ್ರ್ಯಾಪ್ ನಲ್ಲಿ ಬಿಜೆಪಿ: ಸಿದ್ದು ಔತಣಕೂಟದಲ್ಲಿ ಸಂಭ್ರಮಾಚರಣೆ?

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ, "ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಧಿಕಾರ ಉಳಿಸಿಕೊಳ್ಳಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ ಹಲವರ ಫೋನ್ ಟ್ರ್ಯಾಪ್ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.

My Phone Was Also Trapped Said MP Renukacharya

ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ರೇಣುಕಾಚಾರ್ಯ ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ: ಮಾಜಿ ಸಚಿವ ರೇಣುಕಾಚಾರ್ಯ

"ನಾವು ಆಪರೇಶನ್ ಕಮಲ ಮಾಡಿಲ್ಲ, ಬಿಜೆಪಿಯ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಿದ್ದವರ ಹಾಗೂ ಬಿಜೆಪಿಯ ಪ್ರಮುಖರ ಫೋನ್ ಟ್ರ್ಯಾಕ್ ಮಾಡಿದ್ದಾರೆ. ಈ ಕುರಿತು ಸಿಬಿಐ ತನಿಖೆ ನಡೆಯಬೇಕು" ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. "ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆದರೆ ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ" ಎಂದು ಹೇಳಿಕೊಂಡಿದ್ದಾರೆ.

English summary
"My phone was also trapped during the administration of the coalition government" said MP Renukacharya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X