ದಾವಣಗೆರೆಯಲ್ಲಿ ಹೊಸ ವರ್ಷಾಚರಣೆಗೆ ಗಡುವು: ಮಹತ್ವದ ಸೂಚನೆ ನೀಡಿದ SP ರಿಷ್ಯಂತ್
ದಾವಣಗೆರೆ, ಡಿಸೆಂಬರ್ 28: ಇನ್ನು ಕೆಲವೇ ದಿನಗಳಲ್ಲಿ ಹೊಸ ವರ್ಷ. 2022 ಮುಗಿದು 2023ಕ್ಕೆ ಕಾಲಿಡಲು ಸನ್ನದ್ಧವಾಗುತ್ತಿರುವ ಈ ವೇಳೆಯಲ್ಲಿ ಕೊರೊನಾ ಆತಂಕ ಮತ್ತೆ ಶುರುವಾಗಿದೆ. ಹೀಗಾಗಿ ಹೊಸ ವರ್ಷ ಆಚರಣೆಗೆ ರಾಜ್ಯ ಸರ್ಕಾರವು ಕೆಲವು ನಿಬಂಧನೆಗಳನ್ನು ಹಾಕಿದೆ.
ಹೊಸ ವರ್ಷ ಆಚರಣೆಗೆ ಷರತ್ತುಗಳನ್ವಯ ಅನುಮತಿ ನೀಡಿದ್ದರೂ ವರ್ಷಾಚರಣೆ ಸ್ವಲ್ಪ ಮಟ್ಟಿಗೆ ಕಳೆಗುಂದುವುದು ಸತ್ಯವಾಗಿದೆ.
ದಾವಣಗೆರೆ ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆಯನ್ನು ಡಿಸೆಂಬರ್ 31ರ ಮಧ್ಯರಾತ್ರಿ 1ಗಂಟೆವರೆಗೆ ಮಾತ್ರ ಆಚರಿಸಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಖಚಿತ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂತನ ವರ್ಷಾಚರಣೆ ವೇಳೆ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೆಡ್ಡಿಂಗ್ ಮಾಡುವುದು. ರಸ್ತೆಯಲ್ಲಿ ಕಿರುಚಾಟ, ಕೂಗಾಟ ಮಾಡಿ ಸಾರ್ವಜನಿಜ ನೆಮ್ಮದಿಗೆ ಭಂಗ ತರುವುದು. ರಸ್ತೆ ಮಧ್ಯದಲ್ಲಿ ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಕೊಡುವಂತಿಲ್ಲ. ಒಂದು ವೇಳೆ ಈ ರೀತಿ ವರ್ತಿಸಿದರೆ ಅಂತಹವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಹೊಸ ವರ್ಷಾಚರಣೆ ವೇಳೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆ ನಡೆಸಲಾಗಿದೆ. ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಸಂಜೆಯಿಂದಲೇ ಕಾರ್ಯಾಚರಣೆ ನಡೆಸಲಿವೆ. ಗುಂಪಾಗಿ ಹೋಗಿ ಗಲಾಟೆ ಮಾಡುವವರು ಕಂಡುಬಂದರೆ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದಿದ್ದಾರೆ.

ಈ ಬಗ್ಗೆ ಮಾತು ಮುಂದುವರಿಸಿದ ಸಿ.ಬಿ.ರಿಷ್ಯಂತ್, ಗೃಹ ರಕ್ಷಕ ದಳದ ಸಿಬ್ಬಂದಿ ಬಳಸಿಕೊಂಡು ಗಸ್ತು ಹೆಚ್ಚಿಸಲಾಗುವುದು. ಆದ್ದರಿಂದ ಸೀಮಿತ ಅವಧಿಯಲ್ಲಿಯೇ ಹೊಸ ವರ್ಷಾಚರಣೆಯನ್ನು ಮಾಡಬೇಕು. ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಮಾಸ್ಕ್ ಕಡ್ಡಾಯ. ಸೀಮಿತ ಜನರು ಇದ್ದರೆ ಮಾತ್ರ ಒಳಗೆ ಮನೆಯೊಳಗೆ ನೂತನ ವರ್ಷಾಚರಣೆ ಮಾಡಬೇಕು. ಹಿರಿಯ ನಾಗರಿಕರು ಹೊರಗೆ ಹೋಗಬಾರದು. ಕೊರೊನಾದ ಸಂಭವನೀಯ ಅಲೆ ಇರುವುದರಿಂದ ಹಿರಿಯ ನಾಗರಿಕರು ಎಚ್ಚರದಿಂದ ಇರಬೇಕು ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.
ಇನ್ನು ರೆಸ್ಟೋರೆಂಟ್ ಮಾಲೀಕರು, ಸಿಬ್ಬಂದಿ, ಅಡುಗೆ ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಹಾಕಿಸಿಕೊಂಡಿರಬೇಕು. ಚಲನ ಚಿತ್ರಮಂದಿರದಲ್ಲಿ ಎನ್ 95 ಮಾಸ್ಕ್ ಹಾಕಬೇಕು. ದೇಹದ ಉಷ್ಣಾಂಶವನ್ನು ಎಲ್ಲಾ ಕಡೆಗಳಲ್ಲಿ ಪರೀಕ್ಷೆ ಮಾಡಬೇಕು. ಕೊರೊನಾ ಲಕ್ಷಣಗಳು ಕಂಡು ಬಂದರೆ ಅಂತಹವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಸಿ.ಬಿ.ರಿಷ್ಯಂತ್ ಸೂಚನೆಗಳನ್ನು ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications