ಯಾರೂ ಕಿಡ್ನಾಪ್ ಮಾಡಿಲ್ಲ, ಹಣನೂ ಕೊಟ್ಟಿಲ್ಲ: ದಾವಣಗೆರೆ ಕಾರ್ಪೊರೇಟರ್
ದಾವಣಗೆರೆ, ಫೆಬ್ರವರಿ 20: ನನ್ನನ್ನು ಯಾರು ಕಿಡ್ನಾಪ್ ಮಾಡಿಲ್ಲ, ನನಗೆ ಯಾವ ಬಿಜೆಪಿ ನಾಯಕರೂ ಸಂಪರ್ಕಿಸಿಲ್ಲ, ಹಣವನ್ನೂ ನೀಡಿಲ್ಲ. ನಾನು ಮೇಯರ್ ಆಂಕಾಕ್ಷಿಯಾಗಿದ್ದೆ, ಆದರೆ ಅದು ಆಗಲಿಲ್ಲ. ಹಾಗಾಗಿ ನನ್ನ ಮನಸ್ಸಿಗೆ ನೋವಾದ ಕಾರಣ ನಾನು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಹೋಗಿಲ್ಲ ಎಂದು ಪಾಲಿಕೆ ಚುನಾವಣೆಗೆ ಹಾಜರಾಗದ ಕಾಂಗ್ರೆಸ್ನ ಪಾಲಿಕೆ ಸದಸ್ಯ ಜೆ.ಎನ್.ಶ್ರೀನಿವಾಸ್ ಸ್ಪಷ್ಟಪಡಿಸಿದರು.
ದಾವಣಗೆರೆಯ ಕೆಟಿಜೆ ನಗರದಲ್ಲಿ ಮಾತನಾಡಿದ ಸದಸ್ಯ ಶ್ರೀನಿವಾಸ್ ಅವರು, ""ನಾನು ಎರಡು ಬಾರಿ ಗೆದ್ದಿದ್ದೇನೆ. ಈ ಬಾರಿ ಮೇಯರ್ ಜನರಲ್ ಕೋಟಾಗೆ ಇತ್ತು. ನನ್ನ ಮೇಲೆ ಗುರುತರ ಆರೋಪಗಳಿದ್ದರೆ, ನನ್ನ ಪತ್ನಿಗೆ ಮೇಯರ್ ಪಟ್ಟ ನೀಡಬೇಕಿತ್ತು. ಆದರೆ ನನ್ನ ಮಾತನ್ನು ನಮ್ಮ ಕಾಂಗ್ರೆಸ್ ಮುಖಂಡರು ಕಿವಿಗೆ ಹಾಕಿಕೊಳ್ಳಲಿಲ್ಲ. ಯಾರು ಕೂಡ ನನ್ನನ್ನು ಸಂಪರ್ಕಿಸಲಿಲ್ಲ. ಈ ಕಾರಣದಿಂದ ನಾನು ಮತ್ತು ನನ್ನ ಪತ್ನಿ ಶ್ವೇತಾ, ಯಶೋಧಮ್ಮ ಪಾಲಿಕೆ ಚುನಾವಣೆಯಿಂದ ದೂರ ಉಳಿಯಬೇಕಾಯಿತು'' ಎಂದು ಸ್ವಪಕ್ಷದ ವಿರುದ್ಧ ಹರಿಹಾಯ್ದರು.
""ಇಲ್ಲಿನ ಜನರು ನನ್ನ ಮೇಲೆ ಸಾಕಷ್ಟು ನಂಬಿಕೆ ಇಟ್ಟುಕೊಂಡಿದ್ದಾರೆ. ಈ ನಂಬಿಕೆ ಉಳಿಸಿಕೊಳ್ಳುವುದು ನನ್ನ ಮೊದಲ ಆದ್ಯತೆ ಆಗಿತ್ತು. ನನ್ನ ಮನಸ್ಸಿಗೆ ನೋವಾದ ಕಾರಣ, ಎಲ್ಲಿಗೂ ಹೋಗಲಿಲ್ಲ. ನನಗೆ ಯಾರು ವಿಪ್ ನೀಡಿಲ್ಲ, ಒಂದು ವೇಳೆ ಕ್ರಮ ಕೈಗೊಳ್ಳುವುದಾದರೆ, ಕೈಗೊಳ್ಳಲಿ ನೋಡೋಣ ಎಂದರು.

ಕಾನೂನು ಕ್ರಮ ಕೈಗೊಂಡರೆ ಕಾನೂನು ಮೊರೆ ಹೋಗುತ್ತೇನೆ. ನನಗೆ ಜನ ಮುಖ್ಯ, ಜನರೇ ಅದನ್ನು ತೀರ್ಮಾನ ಮಾಡುತ್ತಾರೆ. ಇನ್ನು ಶಾಮನೂರು ಶಿವಶಂಕರಪ್ಪ ತಂದೆ ನನ್ನ ಇದ್ದ ಹಾಗೆ, ಮಕ್ಕಳಿಗೆ ಜೋರು ಮಾಡದೇ ಇನ್ಯಾರಿಗೆ ಮಾಡುತ್ತಾರೆ'' ಎಂದು ವಿವರಣೆ ನೀಡಿದರು.
ನನ್ನ ವಾರ್ಡ್ ಈಗಲೂ ಅಭಿವೃದ್ಧಿಯಾಗಿಲ್ಲ. ಇಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ರಾಜಕಾಲುವೆ ಗಬ್ಬು ನಾರುತ್ತಿದ್ದು, ಜನ ವಾಸ ಮಾಡಲಾಗುತ್ತಿಲ್ಲ. ಈ ಕಾರಣದಿಂದ ನಾನು ಮೇಯರ್ ಆಕಾಂಕ್ಷಿ ಎಂದು ತಿಳಿಸಿದ್ದು, ಮೇಯರ್ ಆಗಿದ್ದರೆ ಅನುದಾನ ತಂದು ಇಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೆ ಎಂದು ತಿಳಿಸಿದರು.
ದಾವಣಗೆರೆ ನಗರದಲ್ಲಿ ಸಾಕಷ್ಟು ಪಾರ್ಕ್ಗಳಿದ್ದು, ಅವುಗಳೆಲ್ಲ ಅಭಿವೃದ್ಧಿಯಾಗಿದೆ. ಆದರೆ ನಾನು ಪ್ರತಿನಿಧಿಸುವ ಕ್ಷೇತ್ರದ ಡಾಂಗೆ ಪಾರ್ಕ್ ಮಾತ್ರ ಇನ್ನೂ ಅಭಿವೃದ್ದಿಯಾಗಿಲ್ಲ. ಪಾಲಿಕೆಯಿಂದ ಅನುದಾನ ತರುವುದು ಸಾಕಷ್ಟು ಕಷ್ಟವಾಗಿದೆ. ಮೇಯರ್ ಪಟ್ಟ ಸಿಕ್ಕಿದ್ದರೆ ಇಲ್ಲಿನ ಡಾಂಗೆ ಪಾರ್ಕ್ನ್ನು ಹೈಟೆಕ್ ಮಾಡುತ್ತಿದ್ದೆ ಎಂದು ಜೆ.ಎನ್.ಶ್ರೀನಿವಾಸ ಹೇಳಿದರು.
ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ ನಾನು ಅಪ್ಪಟ ಕಾಂಗ್ರೆಸ್ಸಿಗ, ಕಾಂಗ್ರೆಸ್ನಿಂದಲೇ ಗೆದ್ದಿರುವುದು. ಬಿಜೆಪಿ ಹೋಗುವುದು ಸುಳ್ಳು. ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ. ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications