ದಾವಣಗೆರೆಯಲ್ಲಿ ಮಾವ Vs ಅಳಿಯ: ನಮ್ಮ ಎಸ್ಪಿ ಕೂಡ ಒಬ್ಬ ಮಹಿಳೆ ಎಂದು ಜಿ.ಎಂ.ಸಿದ್ದೇಶ್ವರ ಹೇಳಿದ್ಯಾರಿಗೆ ಹಾಗೂ ಯಾಕೆ?
ದಾವಣಗೆರೆ, ಏಪ್ರಿಲ್, 01: ನಮ್ಮ ಮನೆಯಲ್ಲೂ, ನಿಮ್ಮ ಮನೆಯಲ್ಲೂ, ಎಲ್ಲರ ಮನೆಯಲ್ಲೂ ಹೆಣ್ಣು ಮಕ್ಕಳೇ ಅಡುಗೆ ಮಾಡುವುದು. ಹಾಗೆಂದ ಮಾತ್ರಕ್ಕೆ ಮಹಿಳೆ ಅಡುಗೆ ಮಾಡುವುದಕ್ಕೆ ಮಾತ್ರ ಲಾಯಕ್ಕು ಅಂದರೆ ಹೇಗೆ ಎಂದು ಲೋಕಸಭಾ ಸದಸ್ಯ ಡಾ.ಜಿ.ಎಂ.ಸಿದ್ದೇಶ್ವರ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ತಿರುಗೇಟು ನೀಡಿದರು.
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ಪ್ರಚಾರದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಹಿಳೆಯರು ರಾಕೇಟು ಉಡಾವಣೆನೂ ಮಾಡುತ್ತಾರೆ, ಆಕಾಶದಲ್ಲೂ ಹಾರಾಡ್ತಾರೆ. ಐಎಎಸ್, ಐಪಿಎಸ್ ಕೂಡ ಆಗ್ತಾರೆ. ನಮ್ಮ ಎಸ್ಪಿ ಅವರು ಕೂಡ ಒಬ್ಬ ಮಹಿಳೆ ಎನ್ನುವ ಮೂಲಕ ಟಾಂಗ್ ನೀಡಿದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಜನರನ್ನು ಮರಳು ಮಾಡುವ ಗ್ಯಾರಂಟಿಗಳು. ಮನೆಯಲ್ಲಿ ಗಂಡನಿಂದ ಕಿತ್ತು, ಹೆಂಡ್ತಿಗೆ ಕೊಡುವ ಗ್ಯಾರಂಟಿ ಸ್ಕೀಂ. ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿಯನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಬಿಜೆಪಿ ಅಭಿವೃದ್ಧಿ, ದೂರದೃಷ್ಟಿ, ದೇಶದ ಭದ್ರತೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹೆಸರಿನಲ್ಲಿ ಚುನಾವಣೆ ಮಾಡುತ್ತಿದ್ದೇವೆ ಎಂದರು,
ದೇಶದ ಅಭಿವೃದ್ಧಿ ದೃಷ್ಟಿಯಿಂದ ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ದಾವಣಗೆರೆ ನಗರದ ಬಿ.ಐ.ಇ.ಟಿ. ರಸ್ತೆಯ ವಸಂತ ಬೆಣ್ಣೆದೋಸೆ ಹೋಟೆಲ್, ಇಂಡಿಯನ್ ಕಾಫಿ ಬಾರ್, ಹೈಸ್ಕೂಲ್ ಮೈದಾನ, ಪಿ.ಬಿ. ರಸ್ತೆಯ ಹೂವಿನ ಮಾರುಕಟ್ಟೆ, ಜಗಳೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ಗಾಯತ್ರಿ ಸಿದ್ದೇಶ್ವರ್ ಪರ ಮತಯಾಚನೆ ಮಾಡಿದರು.
ಈ ವೇಳೆ ಮಾಜಿ ಸಚಿವರಾದ ಮರುಗೇಶ್ ನಿರಾಣಿ, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ದೇವರಮನೆ ಶಿವಕುಮಾರ್, ಮುಖಂಡರಾದ ಜಯಪ್ರಕಾಶ್ ಕೊಂಡಜ್ಜಿ, ಮುರುಗೇಶ್ ಆರಾಧ್ಯ, ಕೊಳೆನಹಳ್ಳಿ ಸತೀಶ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.
ಪ್ರಭಾ ಮಲ್ಲಿಕಾರ್ಜುನ್ಗೆ ಪ್ರಶ್ನೆ: ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮತಯಾಚನೆ ಮಾಡುವಾಗ ಕಳೆದ 25 ವರ್ಷಳಿಂದ ಒಂದೇ ಅಭ್ಯರ್ಥಿಗೆ ಮತ ಹಾಕುತ್ತಿದ್ದೀರಿ, ಅವರು ಜಿಲ್ಲೆ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ಕೇಳಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂದು ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ರಾಜಶೇಖರ್ ನಾಗಪ್ಪ ಅವರು, ದಾವಣಗೆರೆ ಜಿಲ್ಲೆಗೆ ನಿಮ್ಮ ಕುಟುಂಬದವರ ಕುರಿತು ಕೇಳುತ್ತಿದ್ದೇವೆ. ಕಳೆದ 20 ವರ್ಷಗಳಿಂದ ದಾವಣಗೆರೆ ನಗರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಿಮ್ಮ ಮಾವ ಶಾಮನೂರು ಶಿವಶಂಕರಪ್ಪನವರಿಗೆ ಈ ಕ್ಷೇತ್ರದ ಮತದಾರರು ಮತ ನೀಡಿದ್ದಾರೆ. ದಾವಣಗೆರೆಗೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಿಮ್ಮ ಕುಟುಂಬದ ಕೊಡುಗೆ ಏನು? ಪ್ರತಿ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಬಹಿರಂಗವಾಗಿ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಮೊದಲು ಅವರ ಪ್ರಶ್ನೆಗೆ ಉತ್ತರ ಕೊಡಿ ಎಂದು ಹೇಳಿದರು.
ಪ್ರಭಾ ಮಲ್ಲಿಕಾರ್ಜುನ್ ಅವರ ಪತಿ ಈ ಬಾರಿ ಒಂದು ವರ್ಷ ಸೇರಿ ಒಟ್ಟು 8 ವರ್ಷ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು. ದಾವಣಗೆರೆ ಜಿಲ್ಲೆಯ ಎಷ್ಟು ಹಳ್ಳಿಗಳಿಗೆ ಭೇಟಿ ನೀಡಿದ್ದಾರೆ? ಮೊದಲು ಪಟ್ಟಿ ಕೊಡಿ. ಗ್ರಾಮಾಂತರ ಭಾಗದಲ್ಲಿ ಯಾವ ಹಳ್ಳಿಗಳಿಗೆ ಅನುದಾನ ನೀಡಿದ್ದಾರೆ ಎನ್ನುವುದನ್ನು ಮೊದಲು ಲೆಕ್ಕ ಕೊಡಿ ಎಂದರು.
8 ವರ್ಷ ಉಸ್ತುವಾರಿ ಸಚಿವರಾಗಿ ಯಾವ ಹಳ್ಳಿಗೆ ಹೋಗಿದ್ದಾರೆ ಎಂಬುದನ್ನು ಮೊದಲು ತಿಳಿಸಿ. ಸಂಸದರಾಗಿ ಕಳೆದ 20 ವರ್ಷಗಳಲ್ಲಿ ಜಿ.ಎಂ.ಸಿದ್ದೇಶ್ವರ ಅವರು 1,300 ಹಳ್ಳಿಗಳಿಗೆ ಎಷ್ಟು ಬಾರಿ ಭೇಟಿ ನೀಡಿದ್ದಾರೆ ಅನ್ನೋದನ್ನು ನಾವು ಪಟ್ಟಿ ಕೊಡ್ತೀವಿ. ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನುವ ಲೆಕ್ಕ ಕೊಡ್ತೀವಿ ಎಂದು ಸವಾಲು ಹಾಕಿದರು.
ಪ್ರಭಾ ಮಲ್ಲಿಕಾರ್ಜುನ್ ಅವರು ಲೆಕ್ಕ ಕೊಡಲು ಸಿದ್ಧರಿದ್ದೀರಾ? ನಿಮ್ಮ ಶಾಸಕರ ಪರವಾಗಿ ವಿಧಾನಸಭಾ ಚುನಾವಣೆಗಳಲ್ಲಿ ಎಲ್ಲೆಲ್ಲಿ ಪ್ರಚಾರ ಮಾಡಿದ್ದಾರೆ ಅನ್ನೋದರ ಬಗ್ಗೆ ಮಾತನಾಡಿ. ದಾವಣಗೆರೆ ಈ ದಿನ ಸುಂದರವಾಗಿ ಕಾಣುತ್ತಿರುವುದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಹಾನಗರ ಪಾಲಿಕೆಗೆ ಪ್ರತಿ ವರ್ಷ 100 ಕೋಟಿಯಂತೆ ಮೂರು ವರ್ಷದಂತೆ ಒಟ್ಟು 300 ಕೋಟಿ ರೂಪಾಯಿ ಅನುದಾನ ಬಂದಿತ್ತು ಎಂದರು.
ಕೇಂದ್ರ ಸರ್ಕಾರದಿಂದ ಬಂದ ಯುಐಡಿಎಸ್ಎಸ್ಎಂಟಿ ಯೋಜನೆಯಿಂದ ಬಂದ 88 ಕೋಟಿ ಅನುದಾನದಿಂದ. ಸ್ಮಾರ್ಟ್ ಸಿಟಿ ಯೋಜನೆಯಡಿ ಬಂದ 1,070 ಕೋಟಿ ರೂಪಾಯಿ ಅನುದಾನದಿಂದ. ದಾವಣಗೆರೆ ನಗರಕ್ಕೆ ನಿಮ್ಮ ಕೊಡುಗೆ ಏನು ಎಂಬುದನ್ನು ಮೊದಲು ದಾವಣಗೆರೆ ನಗರದ ಜನತೆಗೆ ತಿಳಿಸಿ ಎಂದು ಹೇಳಿದರು.
ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಕೊಡುಗೆ ಶೂನ್ಯ. ಇನ್ನು ವಿಮಾನ ನಿಲ್ದಾಣದ ಬಗ್ಗೆ ಪ್ರಸ್ತಾಪ ಮಾಡಿದ್ದೀರಿ. ನಾವು ಈಗಾಗಲೇ ಸರ್ವೆ ಮಾಡಿಸಿ, ಅಗತ್ಯ ಜಮೀನು ಗುರುತಿಸಿ ಏರ್ಪೋರ್ಟ್ ಅಥಾರಿಟಿಯಿಂದ ಅನುಮತಿ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅಗತ್ಯ ಜಮೀನು ಭೂಸ್ವಾಧೀನಕ್ಕಾಗಿ 142 ಕೋಟಿ ರೂಪಾಯಿ ಬೇಕಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ವರದಿಯನ್ನೂ ಸಹ ನೀಡಿದ್ದೇವೆ ಎಂದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications