ದಾವಣಗೆರೆ; ಕ್ಯಾರಿಬ್ಯಾಗ್ಗೆ ಹಣ ಪಡೆದು 5 ಸಾವಿರ ದಂಡ ಕಟ್ಟಿದ ಅಂಗಡಿ!
ದಾವಣಗೆರೆ, ಜೂನ್ 5: ಎರಡು ಜೊತೆ ಶೂ ಹಾಗೂ ಬ್ಯಾಗ್ ಖರೀದಿಸಿದಾಗ ಅನುಮತಿ ಇಲ್ಲದೇ ಕ್ಯಾರಿಬ್ಯಾಗ್ನ ಶುಲ್ಕ ರೂ.7 ಅನ್ನು ಬಿಲ್ ಜೊತೆಗೆ ಸೇರಿಸಿ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಗ್ರಾಹಕರಿಗೆ 5 ಸಾವಿರ ರೂಪಾಯಿ ಹಾಗೂ 3 ಸಾವಿರ ರೂಪಾಯಿ ದಾವೆಯ ಖರ್ಚು ನೀಡುವಂತೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಆದಿತ್ಯ ಬಿರ್ಲಾ ಫ್ಯಾಷನ್ ಆ್ಯಂಡ್ ರಿಟೇಲ್ ಲಿಮಿಟೆಡ್ ಕಂಪನಿ 'ಪ್ಯಾಂಟಲೂನ್ಸ್' ಮಳಿಗೆಗೆ ನಿರ್ದೇಶನ ನೀಡಿದೆ.
ಹರಿಹರದ ವಕೀಲರಾದ ನೀತು ಎಚ್. ಬಿ. 2020ರ ಫೆಬ್ರುವರಿ 1 ರಂದು ಶಾಮನೂರು ರಸ್ತೆಯಲ್ಲಿರುವ ಆದಿತ್ಯ ಬಿರ್ಲಾ ಫ್ಯಾಷನ್ ಆಂಡ್ ರಿಟೇಲ್ ಲಿಮಿಟೆಡ್ ಕಂಪನಿ 'ಪ್ಯಾಂಟಲೂನ್ಸ್' ಮಳಿಗೆಯಲ್ಲಿ ಎರಡು ಶೂ ಹಾಗೂ ಬ್ಯಾಗ್ ಖರೀದಿಸಿದ್ದರು.
ರೂ.2,004 ಬಿಲ್ನಲ್ಲಿ ಕ್ಯಾರಿಬ್ಯಾಗ್ಗಾಗಿ ರೂ.7 ಅನ್ನು ಸೇರಿಸಲಾಗಿತ್ತು. ಕ್ಯಾರಿಬ್ಯಾಗ್ ಮೇಲೆ ಕಂಪನಿಯ ಹೆಸರು ನಮೂದಿಸಿರುವುದರಿಂದ ಬ್ಯಾಗ್ನ ಶುಲ್ಕವನ್ನು ಪಡೆಯದಂತೆ ಮಾಡಿದ್ದ ಮನವಿಗೆ ಮಳಿಗೆಯ ಅಧಿಕಾರಿಗಳು ಕಿವಿಗೊಡಲಿಲ್ಲ. ಬದಲಾಗಿ ಉಳಿದ ಗ್ರಾಹಕರ ಎದುರಿನಲ್ಲೇ ಅಪಹಾಸ್ಯ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನೀತು 2020ರ ಮೇ 20ರಂದು ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷೆ ಎಚ್. ಎನ್. ಮೀನಾ ಹಾಗೂ ಸದಸ್ಯ ತ್ಯಾಗರಾಜನ್ ಸಿ. ಎಸ್. ಅವರು ಕಂಪನಿಯು ಸೇವಾ ಲೋಪವೆಸಗಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರತಿವಾದಿಗಳಾದ ಮುಂಬೈನ ಆದಿತ್ಯ ಬಿರ್ಲಾ ಫ್ಯಾಷನ್ ಅಂಡ್ ರಿಟೇಲ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕಂಪನಿಯ ದಾವಣಗೆರೆಯ ಮಳಿಗೆಯ ಪ್ರಧಾನ ವ್ಯವಸ್ಥಾಪಕ ಅವರು ಕ್ಯಾರಿಬ್ಯಾಗ್ಗೆ ವಿಧಿಸಿದ್ದ ರೂ.7 ಅನ್ನು ವಾಪಸ್ ನೀಡಬೇಕು. ಜೊತೆಗೆ ದೈಹಿಕ ಹಾಗೂ ಮಾನಸಿಕ ತೊಂದರೆ ನೀಡಿರುವುದಕ್ಕೆ ರೂ.5 ಸಾವಿರ ಪರಿಹಾರ ಮತ್ತು ದಾವೆ ವೆಚ್ಚವಾಗಿ ರೂ.3 ಸಾವಿರವನ್ನು 30 ದಿನಗಳ ಒಳಗೆ ನೀಡಬೇಕು. ಸಕಾಲಕ್ಕೆ ಪಾವತಿಸದಿದ್ದರೆ ಶೇ.6ರಷ್ಟು ಬಡ್ಡಿ ಸಹಿತ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ಮಳಿಗೆಗೆ ಕಾಲ ಕಾಲಕ್ಕೆ ತೆರಳಿ ಕ್ಯಾರಿ ಬ್ಯಾಗ್ಗೆ ಶುಲ್ಕ ಪಡೆಯುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕ್ಯಾರಿ ಬ್ಯಾಗ್ಗೆ ಶುಲ್ಕ ಪಡೆಯುವುದಿಲ್ಲ ಎಂಬ ಫಲಕ ಹಾಕಬೇಕು ಎಂದು ಅದೇಶದಲ್ಲಿ ನಿರ್ದೇಶನ ನೀಡಲಾಗಿದೆ. ಗ್ರಾಹಕರ ಪರವಾಗಿ ವಕೀಲ ವಿಜಯೇಂದ್ರ ಎಂ. ಎನ್. ವಾದ ಮಂಡಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications