ದಾವಣಗೆರೆಯಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭ
ವಣಗೆರೆ, ಫೆಬ್ರವರಿ 23: ರಾಜ್ಯದ ಹೃದಯ ಭಾಗವಾದ ದಾವಣಗೆರೆಯಲ್ಲಿ ಪಾಸ್ ಪೋರ್ಟ್ ಸೇವಾಕೇಂದ್ರ ಪ್ರಾರಂಭದಿಂದ ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.
ನಗರದ ಗಡಿಯಾರ ಕಂಬದ ಬಳಿ ಇರುವ ಪ್ರಧಾನ ಅಂಚೆ ಕಚೇರಿಯಲ್ಲಿ ನೂತನ ಪಾಸ್ಪೋರ್ಟ್ ಸೇವಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯು ವಿದ್ಯಾ ಕೇಂದ್ರ ಮತ್ತು ವಾಣಿಜ್ಯ ನಗರಿ ಆಗಿರುವುದರಿಂದ ಹೊರದೇಶಕ್ಕೆ ಹೋಗುವ ಮತ್ತು ಬರುವ ವಿದ್ಯಾರ್ಥಿಗಳು ಹಾಗೂ ವಾಣಿಜ್ಯೋದ್ಯಮಿಗಳಿಗೆ ಅನುಕೂಲವಾಗಲಿದೆ.
ಇಲ್ಲಿನ ಉದ್ಯೋಗಸ್ಥರು ಹೊರದೇಶಗಳಿಗೆ ಹೆಚ್ಚಾಗಿ ಹೋಗುತ್ತಿದ್ದಾರೆ. ಹಾಗಾಗಿ ಇಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಯಾಗಬೇಕೆಂದು ಕ್ಷೇತ್ರದ ಜನತೆಯ ಒತ್ತಾಸೆಯಾಗಿತ್ತು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಜಿಲ್ಲೆಯಲ್ಲಿ ಪಾಸ್ಪೋರ್ಟ್ ಸೇವಾಕೇಂದ್ರದ ಅವಶ್ಯಕತೆಯಿದೆ ಎಂದು ಬೇಡಿಕೆ ಇಟ್ಟು ಅದನ್ನು ನೆರವೇರಿಸಿದ ಸಂತೃಪ್ತಿ ನನಗಿದೆ ಎಂದರು.

ಮಧ್ಯ ಕರ್ನಾಟಕ ಭಾಗದ ಜನತೆ ಪಾಸ್ಪೋರ್ಟ್ ಗಾಗಿ ಹುಬ್ಬಳ್ಳಿ ಇಲ್ಲವೇ ಬೆಂಗಳೂರು ಕಚೇರಿಗೆ ಹೋಗಬೇಕಿತ್ತು. ಇದೀಗ ದಾವಣಗೆರೆಯಲ್ಲಿ ಸೇವಾಕೇಂದ್ರ ಪ್ರಾರಂಭವಾಗಿರುವುದರಿಂದ ಹಾವೇರಿ, ಚಿತ್ರದುರ್ಗ ಭಾಗದ ಜನರಿಗೆ ಅನುಕೂಲವಾಗಿದೆ.
ದೇಶದ 56 ಕಡೆಗಳಲ್ಲಿ ಅಂಚೆ ಕಚೇರಿಯಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಈಗಾಗಲೇ ಮಂಗಳೂರು, ಬೆಳಗಾಂ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಈ ಸೇವಾಕೇಂದ್ರದಲ್ಲಿ ನಿಗದಿತ ಅವಧಿ ಯೊಳಗೆ ಪಾಸ್ಪೋರ್ಟ್ ವಿತರಣೆಯಾಗಲಿದೆ.
ದಾವಣಗೆರೆಯಲ್ಲಿ ಪ್ರಾರಂಭದ ದಿನವೇ 25-30 ಜನರು ಪಾಸ್ಪೋರ್ಟ್ ಗಾಗಿ ಅರ್ಜಿ ಸಲ್ಲಿಸುತ್ತಿರುವುದನ್ನು ನೋಡಿದರೇ ಇಲ್ಲಿನ ಜನರಿಗೆ ಅದರ ಅವಶ್ಯಕತೆ ಎಷ್ಟಿದೆ ಎಂದು ತಿಳಿಯುತ್ತದೆ ಎಂದರು.
ಬೆಂಗಳೂರು ವಿಭಾಗೀಯ ಪಾಸ್ಪೋರ್ಟ್ ಕಚೇರಿಯ ಐಎಫ್ ಎಸ್ ಅಧಿಕಾರಿ ಭರತ್ಕುಮಾರ್ ಕುತಟಿ ಮಾತನಾಡಿ, ದೇಶದ ಜನಸಂಖ್ಯೆಯ ಶೇಕಡ 5 ರಷ್ಟು ಜನರು ಮಾತ್ರ ಪಾಸ್ಪೋರ್ಟ್ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಬಹುಪಾಲು ಜನರು ಪಾಸ್ಪೋರ್ಟ್ ಸೌಲಭ್ಯ ಹೊಂದ ಬೇಕೆನ್ನುವುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದರು.
ದಾವಣಗೆರೆ ಜಿಲ್ಲೆಯಲ್ಲಿ ಪಾಸ್ಪೋರ್ಟ್ ಸೇವಾಕೇಂದ್ರದ ಅವಶ್ಯಕತೆ ಹೆಚ್ಚಾಗಿದ್ದು, ಇಲ್ಲಿನ ಜನರಿಗೆ ಅನುಕೂಲವಾಗಿದೆ. ಪಾಸ್ಪೋರ್ಟ್ ಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ ನಂತರದ 10 ದಿನಗಳ ಒಳಗಾಗಿ ಪಾಸ್ಪೋರ್ಟ್ ವಿತರಣೆ, ಒಂದು ವೇಳೆ ಅರ್ಜಿದಾರರಿಗೆ ಪೊಲೀಸ್ ಪರಿಶೀಲನೆಗೊಳಪಡಿಸಿದರೇ 30 ದಿನಗಳೊಗಾಗಿ ವಿತರಣೆ ಹಾಗೂ ತಾತ್ಕಾಲಿಕ ಪಾಸ್ಪೋರ್ಟ್ ಅನ್ನು ಗೆಜೆಟೆಡ್ ಅಧಿಕಾರಿಗಳ ಸಹಿಯೊಂದಿಗೆ 3-4 ದಿನಗಳೊಳಗಾಗಿ ವಿತರಣೆ ಮಾಡಲಾಗುವುದು. ಸಾರ್ವಜನಿಕರು ಸೇವೆಯನ್ನು ಪಡೆದುಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತ್ರಾವ್ ಜಾಧವ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications