Get Updates
Get notified of breaking news, exclusive insights, and must-see stories!

ಆಹಾರ ಕಿಟ್ ಅನ್ನೂ ಮಾರುತ್ತಿದ್ದಾರಾ? ದಾವಣಗೆರೆಯಲ್ಲಿ ಹೀಗೊಂದು ಜಾಲ

ದಾವಣಗೆರೆ ,ಮೇ 11: ಇಲ್ಲಿನ ಕೆ.ಆರ್‌.ರಸ್ತೆಯ ಮುದ್ದೇಗೌಡರ ಶಾಲೆಯ ಎದುರು ಇರುವ ಗೋದಾಮಿನಲ್ಲಿ ಸಂಗ್ರಹಿಸಿದ್ದ 250 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ ದಾಳಿ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

Recommended Video

      ಸತ್ತ ಕೋತಿಯ ಮುಂದೆ ಕಣ್ಣೀರಿಟ್ಟು ಅಂತಿಮ ವಿದಾಯ ಹೇಳಿದ ಗೂಳಿ | Oneindia Kannada

      ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ದಾಳಿಯಲ್ಲಿ ಪಾಲ್ಗೊಂಡಿದ್ದರು. ಆಜಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಆಹಾರ ಕಿಟ್‌ಗಳ ಮಾರಾಟ ಶಂಕೆ: ಲಾಕ್‌ಡೌನ್‌ನಿಂದಾಗಿ ವಿತರಿಸಿರುವ ಕಿಟ್‌ಗಳ ಆಹಾರ ಧಾನ್ಯಗಳನ್ನೂ ಮಾರಾಟ ಮಾಡಿರುವ ಶಂಕೆ ಇದೇ ವೇಳೆ ವ್ಯಕ್ತವಾಗಿದೆ. ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ವೇಳೆ ಈ ಕಿಟ್‌ಗಳು ಪತ್ತೆಯಾಗಿವೆ. ಬಡವರು, ಕೂಲಿ ಕಾರ್ಮಿಕರು ಊಟವಿಲ್ಲದೇ ಕಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಡಳಿತ, ದಾನಿಗಳು ಹಾಗೂ ನಗರಪಾಲಿಕೆ ಸದಸ್ಯರು ಆಹಾರದ ಕಿಟ್‌ಗಳನ್ನು ವಿತರಿಸಿದ್ದು, ಕೆಲವರು ಅವುಗಳನ್ನು ಮಾರಾಟ ಮಾಡಿದ್ದಾರೆ. ಬಡವರಿಂದ ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದಂಧೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

      People Selling Food Kits Given By Donaters In Davanagere

      'ಆಟೋಗಳ ಮೂಲಕ ಒಬ್ಬೊಬ್ಬ ಚಾಲಕನಿಗೆ ₹5 ಸಾವಿರ ನೀಡಿ ಆ ಹಣದಿಂದ ಧಾನ್ಯಗಳನ್ನು ಖರೀದಿ ಮಾಡಲಾಗುತ್ತಿದೆ. ಆ ಚಾಲಕನಿಗೆ ₹300 ಕೂಲಿ ನೀಡಿ ಕಳುಹಿಸುವ ಜಾಲವೊಂದು ಕೆಲಸ ಮಾಡುತ್ತಿದೆ. ಇದರಿಂದಾಗಿ ಅರ್ಹ ಬಡವರಿಗೆ ಧಾನ್ಯಗಳು ಸಿಗದಂತಾಗಿದೆ. ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಿದ್ದು, ಅವುಗಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ' ಎಂದು ಹೇಳುತ್ತಾರೆ ತಹಶೀಲ್ದಾರ್ ಗಿರೀಶ್.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+