ಶುಗರ್ ಮಾತ್ರೆಯಲ್ಲಿ ಪ್ಲಾಸ್ಟಿಕ್ ಪತ್ತೆ: ತರಾಟೆಗೆ ತೆಗೆದುಕೊಂಡ ದಾವಣಗೆರೆ ಜನರು
Recommended Video
ದಾವಣಗೆರೆ, ಜನವರಿ 13: ದಾವಣಗೆರೆಯ ವಿದ್ಯಾನಗರದ ಬಸ್ ನಿಲ್ದಾಣ ಬಳಿಯ ಮೆಡ್ ಪ್ಲಸ್ ಸ್ಟೋರ್ ನ ಶುಗರ್ ಮಾತ್ರೆಯಲ್ಲಿ ಪ್ಲಾಸ್ಟಿಕ್ ಪತ್ತೆಯಾಗಿರುವುದು ಕೇಳಿಬಂದಿದ್ದು, ಗ್ರಾಹಕರು ಮೆಡ್ ಪ್ಲಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿದ್ಯಾನಗರ ನಿವಾಸಿ ಜ್ಯೋತಿಗೌಡ ಎನ್ನುವವರು ಸಕ್ಕರೆ ಕಾಯಿಲೆಗೆ ಸಂಬಂಧಿಸಿದ ಮೆಟ್ಪಾರ್ಮಿನ್ ಎಚ್.ಸಿ.ಐ ಮಾತ್ರೆಗಳನ್ನು ತೆಗೆದುಕೊಂಡಿದ್ದರು. ಮನೆಗೆ ಹೋಗಿ ಒಂದು ಮಾತ್ರೆಯನ್ನು ನೀರಿನಲ್ಲಿ ಹಾಕಿದ ತಕ್ಷಣ ಅದು ರಬ್ಬರ್ ನಂತಾಗಿದೆ, ಇದು ಜ್ಯೋತಿಗೌಡ ಅವರು ಗಾಬರಿಗೊಂಡಿದ್ದರು.
ತಕ್ಷಣ ಮೆಡ್ ಪ್ಲಸ್ ಸ್ಟೋರ್ ಬಳಿ ಬಂದ ಗ್ರಾಹಕರು ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡಿದ್ದಾರೆ. ನಕಲಿ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದೀರಾ? ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಮೆಡ್ ಪ್ಲಸ್ ನಲ್ಲಿ ಡಿಸ್ಕೌಂಟ್ ಸಿಗುತ್ತೆ ಎನ್ನುವ ಉದ್ದೇಶದಿಂದ ಸಾಮಾನ್ಯ ಜನರು ಮುಗಿಬಿದ್ದು ಕೊಂಡುಕೊಳ್ಳುತ್ತಾರೆ. ಅದರಲ್ಲೂ ಬಡವರ ಸಂಖ್ಯೆ ಹೆಚ್ಚಿರುತ್ತೆ. ಈ ರೀತಿ ಪ್ಲಾಸ್ಟಿಕ್ ಮಿಶ್ರಿತ ಮಾತ್ರೆಗಳನ್ನು ಮಾರಾಟ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಮೆಡಿ ಪ್ಲಸ್ ನ ಸಿಬ್ಬಂದಿಗಳು ಮಾತ್ರ ಗ್ರಾಹಕರನ್ನು ಸಮಾಧಾನ ಪಡಿಸುತ್ತಿದ್ದು, ಈ ಮಾತ್ರೆ ಹೀಗೆಯೇ ಇರುತ್ತದೆ ಎನ್ನುತ್ತಿದ್ದಂತೆ ಆಕ್ರೋಶಗೊಂಡ ವೃದ್ದ ರೋಗಿಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮಾತ್ರೆಗಳ ಬಗ್ಗೆ ದೂರು ಬಂದಿದ್ದು ಇವುಗಳನ್ನು ಮಾರಾಟ ಮಾಡುವುದನ್ನೇ ನಿಲ್ಲಿಸಿದ್ದೇವೆ ಹಾಗೂ ಇವುಗಳನ್ನು ಪರೀಕ್ಷೆ ಮಾಡಲು ಲ್ಯಾಬ್ ಗೆ ಕಳಿಸುತ್ತೇವೆ ಎಂದಿದ್ದು, ಗ್ರಾಹಕರಿಗೆ ನೀಡಿದ ಮಾತ್ರೆಗಳು ನಕಲಿ ಎಂದು ಪರೋಕ್ಷವಾಗಿಯೇ ಮೆಡ್ ಪ್ಲಸ್ ಸಿಬ್ಬಂದಿ ಒಪ್ಪಿಕೊಂಡಿದ್ದಾರೆ. ಹಣಕ್ಕಾಗಿ ಜನರ ಆರೋಗ್ಯದ ಜೊತೆ ಆಟವಾಡುತ್ತಿರುವರಿಗೆ ಕಠಿಣ ಶಿಕ್ಷೆ ನೀಡಬೇಕು. ಜೊತೆಗೆ ಈ ಮೆಡ್ ಪ್ಲಸ್ ಮೇಲೆ ಬಂದಿರುವ ಆರೋಪವನ್ನು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications