ಶುಗರ್ ಮಾತ್ರೆಯಲ್ಲಿ ಪ್ಲಾಸ್ಟಿಕ್ ಪತ್ತೆ: ತರಾಟೆಗೆ ತೆಗೆದುಕೊಂಡ ದಾವಣಗೆರೆ ಜನರು
Recommended Video
ದಾವಣಗೆರೆ, ಜನವರಿ 13: ದಾವಣಗೆರೆಯ ವಿದ್ಯಾನಗರದ ಬಸ್ ನಿಲ್ದಾಣ ಬಳಿಯ ಮೆಡ್ ಪ್ಲಸ್ ಸ್ಟೋರ್ ನ ಶುಗರ್ ಮಾತ್ರೆಯಲ್ಲಿ ಪ್ಲಾಸ್ಟಿಕ್ ಪತ್ತೆಯಾಗಿರುವುದು ಕೇಳಿಬಂದಿದ್ದು, ಗ್ರಾಹಕರು ಮೆಡ್ ಪ್ಲಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿದ್ಯಾನಗರ ನಿವಾಸಿ ಜ್ಯೋತಿಗೌಡ ಎನ್ನುವವರು ಸಕ್ಕರೆ ಕಾಯಿಲೆಗೆ ಸಂಬಂಧಿಸಿದ ಮೆಟ್ಪಾರ್ಮಿನ್ ಎಚ್.ಸಿ.ಐ ಮಾತ್ರೆಗಳನ್ನು ತೆಗೆದುಕೊಂಡಿದ್ದರು. ಮನೆಗೆ ಹೋಗಿ ಒಂದು ಮಾತ್ರೆಯನ್ನು ನೀರಿನಲ್ಲಿ ಹಾಕಿದ ತಕ್ಷಣ ಅದು ರಬ್ಬರ್ ನಂತಾಗಿದೆ, ಇದು ಜ್ಯೋತಿಗೌಡ ಅವರು ಗಾಬರಿಗೊಂಡಿದ್ದರು.
ತಕ್ಷಣ ಮೆಡ್ ಪ್ಲಸ್ ಸ್ಟೋರ್ ಬಳಿ ಬಂದ ಗ್ರಾಹಕರು ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡಿದ್ದಾರೆ. ನಕಲಿ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದೀರಾ? ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಮೆಡ್ ಪ್ಲಸ್ ನಲ್ಲಿ ಡಿಸ್ಕೌಂಟ್ ಸಿಗುತ್ತೆ ಎನ್ನುವ ಉದ್ದೇಶದಿಂದ ಸಾಮಾನ್ಯ ಜನರು ಮುಗಿಬಿದ್ದು ಕೊಂಡುಕೊಳ್ಳುತ್ತಾರೆ. ಅದರಲ್ಲೂ ಬಡವರ ಸಂಖ್ಯೆ ಹೆಚ್ಚಿರುತ್ತೆ. ಈ ರೀತಿ ಪ್ಲಾಸ್ಟಿಕ್ ಮಿಶ್ರಿತ ಮಾತ್ರೆಗಳನ್ನು ಮಾರಾಟ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
ಮೆಡಿ ಪ್ಲಸ್ ನ ಸಿಬ್ಬಂದಿಗಳು ಮಾತ್ರ ಗ್ರಾಹಕರನ್ನು ಸಮಾಧಾನ ಪಡಿಸುತ್ತಿದ್ದು, ಈ ಮಾತ್ರೆ ಹೀಗೆಯೇ ಇರುತ್ತದೆ ಎನ್ನುತ್ತಿದ್ದಂತೆ ಆಕ್ರೋಶಗೊಂಡ ವೃದ್ದ ರೋಗಿಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮಾತ್ರೆಗಳ ಬಗ್ಗೆ ದೂರು ಬಂದಿದ್ದು ಇವುಗಳನ್ನು ಮಾರಾಟ ಮಾಡುವುದನ್ನೇ ನಿಲ್ಲಿಸಿದ್ದೇವೆ ಹಾಗೂ ಇವುಗಳನ್ನು ಪರೀಕ್ಷೆ ಮಾಡಲು ಲ್ಯಾಬ್ ಗೆ ಕಳಿಸುತ್ತೇವೆ ಎಂದಿದ್ದು, ಗ್ರಾಹಕರಿಗೆ ನೀಡಿದ ಮಾತ್ರೆಗಳು ನಕಲಿ ಎಂದು ಪರೋಕ್ಷವಾಗಿಯೇ ಮೆಡ್ ಪ್ಲಸ್ ಸಿಬ್ಬಂದಿ ಒಪ್ಪಿಕೊಂಡಿದ್ದಾರೆ. ಹಣಕ್ಕಾಗಿ ಜನರ ಆರೋಗ್ಯದ ಜೊತೆ ಆಟವಾಡುತ್ತಿರುವರಿಗೆ ಕಠಿಣ ಶಿಕ್ಷೆ ನೀಡಬೇಕು. ಜೊತೆಗೆ ಈ ಮೆಡ್ ಪ್ಲಸ್ ಮೇಲೆ ಬಂದಿರುವ ಆರೋಪವನ್ನು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications