ದಾವಣಗೆರೆ: ಪೊಲೀಸ್ ಕಾನ್ಸ್ಟೇಬಲ್ಗೆ ಗುಂಡೇಟು, ಎಸ್ಪಿ ಹೇಳಿದ್ದೇನು?
ದಾವಣಗೆರೆ, ಫೆಬ್ರವರಿ, 15: ನಗರದ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾಸ್ಸ್ಟೆೇಬಲ್ ಗುರುಮೂರ್ತಿ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂಬ ಕುರಿತಂತೆ ತನಿಖೆ ನಡೆಯುತ್ತಿದೆ. ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಯಲ್ಲಿ ಗುರುಮೂರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ. ಯಾವುದೇ ರೀತಿಯಲ್ಲಿಯೂ ಪ್ರಾಣಕ್ಕೆ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆಗೆ ಐಜಿಪಿ ತ್ಯಾಗರಾಜನ್ ಅವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ ಉಮಾ ಪ್ರಶಾಂತ್ ಅವರು, ಗುರುಮೂರ್ತಿ ಕುಟುಂಬದವರು ಹಾಗೂ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಗುರುಮೂರ್ತಿ ಅವರ ಭುಜಕ್ಕೆ ಗುಂಡು ತಗುಲಿದೆ ಎಂದು ತಿಳಿಸಿದರು.
ಘಟನೆ ನಡೆದ ಕೂಡಲೇ ಆ್ಯಂಬುಲೆನ್ಸ್ ಅವರಿಗೆ ಕರೆ ಮಾಡಲಾಗಿದೆ. ಆದರೆ ಅರ್ಧ ಗಂಟೆಯಾದರೂ ಆ್ಯಂಬುಲೆನ್ಸ್ ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳದಲ್ಲಿದ್ದವರು ಆಕ್ರೋಶ ವ್ಯಕ್ತಪಡಿಸಿದರು. ಅರ್ಧ ಗಂಟೆಯಾದರೂ ಆ್ಯಂಬುಲೆನ್ಸ್ ಬಾರದ ಕಾರಣಕ್ಕ ಕೊನೆಗೆ ಪೊಲೀಸ್ ಜೀಪಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದರು.
ಗುರುಮೂರ್ತಿ ಅವರು ಪತ್ನಿ ಜೊತೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ಸದ್ದು ಕೇಳಿದೆ. ಪತ್ನಿ ಹಾಗೂ ಅವರ ಗುರುಮೂರ್ತಿ ಅವರ ತಂದೆ ಕೂಡಲೇ ಘಟನಾ ಸ್ಥಳಕ್ಕೆ ಓಡೋಡಿ ಬಂದಿದ್ದಾರೆ. ಬಳಿಕ ಪೊಲೀಸರೊಂದಿಗೆ ಗುರುಮೂರ್ತಿ ಅವರನ್ನು ಆಸ್ಪತ್ರೆ ಸೇರಿಸಲಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ವಾಸಿಯಾದ ಗುರುಮೂರ್ತಿ (34) ಎಂದು ಗುರುತಿಸಲಾಗಿದೆ. 2011-12ರ ಬ್ಯಾಚ್ ನವರಾಗಿದ್ದ ಗುರುಮೂರ್ತಿ 21ನೇ ವಯಸ್ಸಿಗೆ ಕೆಲಸಕ್ಕೆ ಸೇರಿದ್ದರು.
ಗುಂಡು ಹಾರಿಸಿಕೊಂಡು ಕೆಳಗಡೆ ಬಿದ್ದ ಗುರುಮೂರ್ತಿ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ರಕ್ತದ ಮಡುವಿನಲ್ಲಿದ್ದ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಯಂತ್ರಗಳ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications