ದಾವಣಗೆರೆ: ಕಳಪೆ ಗುಣಮಟ್ಟದ ಆಹಾರ ಪದಾರ್ಥ ಸಂಗ್ರಹ: ಶಾಸಕರಿಂದ ಅಂಗನವಾಡಿ ಕಾರ್ಯಕರ್ತೆಗೆ ಹಿಗ್ಗಾಮುಗ್ಗಾ ತರಾಟೆ
ದಾವಣಗೆರೆ, ಜೂನ್, 06: ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಬಡಿಸಿದರೆ ಮಕ್ಕಳ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು.
ತಾಲೂಕಿನ ಕೊಗ್ಗನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೂಸ್ಟ್ ಹಿಡಿದ ಬೆಲ್ಲ, ಕಳಪೆ ಸಾಂಬಾರ್ ಪುಡಿ, ರವೆ ಸೇರಿದಂತೆ ವಿತರಣೆಯಾದ ಎಲ್ಲಾ ರೀತಿಯ ಆಹಾರ ಪದಾರ್ಥಗಳು ಕಳಪೆಯಾಗಿರುವುದನ್ನು ಕಂಡು ಕೆಂಡಾಮಂಡಲರಾದರು.

ಅಂಗನವಾಡಿ ಕೇಂದ್ರದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಸಲು ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಇಲ್ಲಿ ಕಳಪೆ ಗುಣಮಟ್ಟದ ಆಹಾರ
ನೀಡಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಹಾರ ತಯಾರಿಸಲಾಗುತ್ತಿದೆ. ಏನಾದರೂ ಸಂಭವಿಸಿದರೆ ಯಾರು ಹೊಣೆ ಎಂದು ಅಂಗನವಾಡಿ ಕೇಂದ್ರದ ಸಿಬ್ಬಂದಿ, ಕಾರ್ಯಕರ್ತೆಯನ್ನು ಪ್ರಶ್ನಿಸಿದರು.
ಮಧ್ಯಾಹ್ನವಾದರೂ ಮಕ್ಕಳ ಹಾಜರಿ ಪುಸ್ತಕದಲ್ಲಿ ಮಕ್ಕಳ ಹಾಜರಿ ಹಾಕಿಲ್ಲ. ಕೇವಲ ಇಬ್ಬರು ಮಕ್ಕಳು ಇದ್ದಾರೆ. ಸಂಜೆ ವೇಳೆಗೆ ಅವರಿಗೆ ಇಷ್ಟ ಬಂದಷ್ಟು ಮಕ್ಕಳ ಹಾಜರಿ ಹಾಕಲಾಗುತ್ತಿದೆ. ಸ್ಟಾಕ್ ಪುಸ್ತಕ ಅಂಗನವಾಡಿ ಕೇಂದ್ರದಲ್ಲಿ ಇಟ್ಟಿಲ್ಲ, ಮನೆಯಲ್ಲಿ ಇಟ್ಟಿರುವುದಾಗಿ ಹೇಳುತ್ತಾರೆ. ರಿಮಾರ್ಕ್ ಪುಸ್ತಕದಲ್ಲಿ ಇಲ್ಲಿನ ಸಮಸ್ಯೆಗಳ ದಾಖಲು ಮಾಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ಮಾಯಕೊಂಡ ಕ್ಷೇತ್ರದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದೇ ರೀತಿಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಲಾಗುತ್ತಿದೆ ಎಂದು ಪೋಷಕರಿಂದ ದೂರುಗಳು ಬರುತ್ತಿವೆ. ಸಂಬಂಧಪಟ್ಟ
ಅಧಿಕಾರಿಗಳು ಕೂಡಲೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಳಪೆ ಗುಣಮಟ್ಟದ ಆಹಾರ ಪೂರೈಸುವ ಏಜೆನ್ಸಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಅಲ್ಲದೆ, ಕಳಪೆ ಗುಣಮಟ್ಟದ ಆಹಾರ ಸೇವಿಸಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಯವುದು ಎಂದು ಎಚ್ಚರಿಕೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶದಿಂದ ಕೂಡಿದ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ. ಇದೇ ರೀತಿ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಅಷ್ಟೇ ಅಲ್ಲದೆ, ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿವೆ. ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಇಂತಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವಾರದಲ್ಲಿ ಒಂದು ಬಾರಿ ಅಂಗನವಾಡಿ ಕೇಂದ್ರಗಳಿಗೆ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡಬೇಕೆಂದು ತಾಕೀತು ಮಾಡಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications