ಹರಿಹರ: ಕಾಂಗ್ರೆಸ್ ಅಸಹಕಾರದ ನಡುವೆಯೂ ಹಠಬಿಡದೇ ರೈತರ ಸಾಲ ಮನ್ನಾ ಮಾಡಿದ್ದೆ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಸರ್ಕಾರವ ಅಧಿಕಾರಕ್ಕೆ ಬಂದರೆ ಜನಪರ ಯೋಜನೆಗಳನ್ನು ಜಾರಿಗೆ ತರಾಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಹಾಗಾದರೆ ಎಚ್.ಡಿ. ಕುಮಾರಸ್ವಾಮಿ ವಿವರಿಸಿದ ಯೋಜನೆಗಳ ವಿವರ ಇಲ್ಲಿದೆ.
ದಾವಣಗೆರೆ, ಜನವರಿ, 31: 2008ರಲ್ಲಿ ನಾನು ಸಿಎಂ ಆದೆ. ಕಾಂಗ್ರೆಸ್ ಅಸಹಕಾರದ ನಡುವೆಯೂ ಹಠಬಿಡದೇ ರೈತರ ಸಾಲ ಮನ್ನಾ ಮಾಡಿದ್ದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೊಂಡಜ್ಜಿಯಲ್ಲಿ ವಾಗ್ದಾಳಿ ನಡೆಸಿದರು. ಹರಿಹರ ವಿಧಾನಸಭೆ ಕ್ಷೇತ್ರದ ಕೊಂಡಜ್ಜಿ ಗ್ರಾಮದಲ್ಲಿ 59ನೇ ದಿನದ ಪಂಚರತ್ನ ರಥಯಾತ್ರೆ ಆಗಮಿಸಿದ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಅವರು, 2018ರಲ್ಲಿ ಅನಿವಾರ್ಯವಾಗಿ ಕಾಂಗ್ರೆಸ್ ಜೊತೆ ಜೆಡಿಎಸ್ ಅಧಿಕಾರಕ್ಕೆ ಬಂದಿತ್ತು. ಆಗ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ. ಸಾಲ ಮನ್ನಾ ಮಾಡಲು ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರ ಮಾಡಿದೆ. ಆದರೆ, ಕಾಂಗ್ರೆಸ್ ಪಕ್ಷ ಸಹಕಾರ ಕೊಡಲಿಲ್ಲ ಎಂದು ಆರೋಪಿಸಿದರು. ಹಾಗೆಯೇ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು. ಯೋಜನೆಗಳ ವಿವರ ಇಲ್ಲಿದೆ ನೋಡಿ.
ಹಠ ಬಿಡದೆ ರೈತರ ಸಾಲ ಮನ್ನಾ ಮಾಡಿದೆ
ಆದರೂ ಹಠ ಬಿಡದೆ ಸಾಲ ಮನ್ನಾ ಮಾಡಿದೆ. ಕೊಂಡಜ್ಜಿ ಗ್ರಾಮ ಒಂದರಲ್ಲೇ 85 ಲಕ್ಷ ರೂಪಾಯಿ ಸಾಲ ಮನ್ನಾ ಆಗಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ಎರಡು ಲಕ್ಷ ಕುಟುಂಬಗಳಿಗೆ ಸಾಲ ಮನ್ನಾ ಆಗಲು ಬಿಡಲಿಲ್ಲ. ಸುಮಾರು 7,000 ಕೋಟಿ ರೂಪಾಯಿಯನ್ನು ಬಿಜೆಪಿ ಸರ್ಕಾರ ಬೇರೆಡೆಗೆ ವರ್ಗಾಯಿಸಿಕೊಂಡಿತು. ಈ ಮೂಲಕ ಎರಡು ಲಕ್ಷ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಹಾಗೆಯೇ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ವಿಧವಾ ತಾಯಂದಿರ ಮಾಶಾಸನವನ್ನು 800 ರೂಪಾಯಿಗಳಿಂದ 2,000 ರೂಪಾಯಿಗಳಿಗೆ ಹೆಚ್ಚಳ ಮಾಡುವೆ. 60 ವರ್ಷ ಮೀರಿದ ಹಿರಿಯರಿಗೆ ಮಾಸಿಕ 5,000 ಮಾಸಾಶನ ಕೊಡುವೆ. ವಿಕಲಚೇತನರಿಗೆ ಮಾಸಿಕ 1,200 ಮಾಶಾಸನ ಇದ್ದು, ಅದನ್ನು 2,500ಕ್ಕೆ ಹೆಚ್ಚಿಸುತ್ತೇನೆ. ಹಾಗೆಯೇ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡುತ್ತೇನೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಈ ಸಾಲ ಮನ್ನಾ ಮಾಡುತ್ತೇನೆ ಎಂದು ಘೋಷಿಸಿದರು.

ಯೋಜನೆಗಳ ಬಗ್ಗೆ ವಿವರಿಸಿದ ಎಚ್ಡಿಕೆ
ತೆಲಂಗಾಣ ಮಾದರಿಯ ರೈತಬಂಧು ಕಾರ್ಯಕ್ರಮ ಜಾರಿ ಮಾಡುತ್ತೇನೆ. ಬಿತ್ತನೆ ಮಾಡುವ ಕಾಲಕ್ಕೆ ಸರಿಯಾಗಿ ಪ್ರತಿ ವರ್ಷ ಹೆಕ್ಟೇರ್ಗೆ 10,000 ರೂಪಾಯಿ ಕೊಡಲಾಗುವುದು. ಹತ್ತು ಹೆಕ್ಟೇರ್ ಇದ್ದರೆ ಹತ್ತು ಲಕ್ಷ ಕೊಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರಕ್ಕಾಗಿ ರೈತರು ಖಾಸಗಿ ಮಂದಿ ಬಳಿ ಸಾಲ ಮಾಡಬಾರದು. ಐದು ಲಕ್ಷ ರೂಪಾಯಿ ಮೊತ್ತದ ಉಚಿತ ಮನೆ, ಒಂದರಿಂದ ದ್ವಿತೀಯ ಪಿಯುಸಿವರೆಗೆ ಉಚಿತ ಶಿಕ್ಷಣ, ರೈತರಿಗೆ ನಿತ್ಯ 24 ಗಂಟೆಯೂ ಉಚಿತ ವಿದ್ಯುತ್ ನೀಡಲಾಗುವುದು. ಪಂಚರತ್ನ ಯೋಜನೆಗಳನ್ನು ಜಾರಿ ಮಾಡುವುದು ನನ್ನ ಗುರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹರಿಹರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಎಚ್. ಎಂ. ರಮೇಶ್ ಗೌಡ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications