Power Cut: ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Power Cut: ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇಂದು (ಮಾರ್ಚ್ 19) ದಾವಣಗೆರೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
220ಕೆವಿ/ ವಿ.ವಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 19ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ, ಪಲ್ಲಾಗಟ್ಟೆ ಮತ್ತು ಬಿಳಿಚೋಡು ಹಾಗೂ ಎಲ್ಲಾ ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಸಲಹೆಗಾರರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಒಪ್ಪಂದದ ಆಧಾರದ ಮೇಲೆ ರಾಜಸ್ವ ವಿಷಯಗಳ ಸಲಹೆಗಾರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಮಾರ್ಚ್ 27ರಂದು ನೇರ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ನೌಕರಿಯಿಂದ ನಿವೃತ್ತರಾಗಿರಬೇಕು ಹಾಗೂ ಸಹಾಯಕ ಆಯುಕ್ತ ಅಥವಾ ಅದಕ್ಕಿಂತ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸಿರಬೇಕೆಂವ ನಿಯಮವಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು kptcl.karnataka.gov.inಗೆ ಭೇಟಿ ನೀಡಬಹುದಾಗಿದೆ.
ನೇಮಕಾತಿ ಬಳಿಕ ಸಲಹೆಗಾರಿಗೆ ರಾಜಸ್ವ ಇಲಾಖೆ, ಬಿಡಿಎ, ಕೆಐಎಡಿಬಿ, ಕೆಎಚ್ಬಿ, ಬಿಡಬ್ಲ್ಯೂಎಸ್ ಎಸ್ಬಿ ಮತ್ತು ಇತರೆ ಸಂಸ್ಥೆಗಳೊಂದಿಗೆ ಸಹಕಾರ ಮತ್ತು ಸಮನ್ವಯ ಸಾಧಿಸಿ, ಕೆಪಿಟಿಸಿಎಲ್ ಹಕ್ಕಿನಲ್ಲಿರುವ ಆಸ್ತಿ ದಾಖಲೆಗಳನ್ನು ನವೀಕರಿಸುವ ಜವಾಬ್ದಾರಿ ನೀಡಲಾಗುತ್ತದೆ.
ಯಾವ ದಾಖಲೆ ತರಬೇಕು?
ಸಂದರ್ಶನ ದಿನಾಂಕ: ಮಾರ್ಚ್ 27, 2025
ಸಂದರ್ಶನ ಸ್ಥಳ: ನಿಗಮದ ಕಚೇರಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕಾವೇರಿ ಭವನ, ಬೆಂಗಳೂರು-560009
ಸಂದರ್ಶನ ಸಮಯ: ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಇತ್ತೀಚೆಗಷ್ಟೇ ಬೆಳಗಾವಿಯ 110 ಕೆವಿ ರಬಕವಿ ವಿದ್ಯುತ್ ವಿತರಣಾ ಕೇಂದ್ರ, 33 ಕೆವಿ ಸತ್ತಿ ವಿದ್ಯುತ್ ವಿತರಣಾ ಕೇಂದ್ರ ಎಪ್1 ಜನವಾಡ, ಎಪ್2 ಮಹಿಷವಾಡಗಿ, ಎಪ್4. ನಂದೆಶ್ವರ,/ ಮಹಿಷವಾಡಗಿ ಎನಜೆವೈ 110/11 ಕೆವಿ ಸತ್ತಿ ವಿದ್ಯುತ್ ವಿತರಣಾ ಕೇಂದ್ರ ಎಪ್1 ಲಕ್ಷ್ಮಿ ಗುಡಿ, ಎಪ್2 ಸವದಿ.
ಎಪ್3 ನಂದೇಶ್ವರ, ಎಪ್4 ಸತ್ತಿ ಐಪಿ, ಎಪ್5 ನಾಗನೂರ ಪಿ.ಕೆ., ಎಪ್6 ಸತ್ತಿ ವಿಲೇಜ್, ಎಪ್7 ಸತ್ತಿ ಐಪಿ, ಎಪ್8 ಶೇಗುಣಸಿ, ಎಪ್9 ಅಂಬಿ ತೋಟ, ಎಪ್10 ದೊಡವಾಡ, ಎಪ್11 ಯಕ್ಸಂಬಿ ತೋಟ, ಎಪ್12, ಘಟನಟ್ಟಿ, ಎಪ್13 ಘಟನಟ್ಟಿ ಎನಜೆವೈ, ಎಪ್17 ಸತ್ತಿ ಗಾರ್ಡನ್, ಎಪ್18 ರಡ್ಡೇರಹಟ್ಟಿ, ಎಪ್19 ಗಾಯಕವಾಡ ತೋಟ.
110/11ಕೆವಿ ಘಟನಟ್ಟಿ ವಿದ್ಯುತ್ ವಿತರಣಾ ಕೇಂದ್ರ ಎಪ್1ಡಿಎಸ್ಪಿ ತೋಟ ಐಪಿ, ಎಪ್2 ಚಿಕ್ಕಟ್ಟಿ ಐಪಿ, ಎಪ್3 ಮುಳ್ಳಟ್ಟಿ ಐಪಿ, ಎಪ್4ಸಂಕೋನಟ್ಟಿ ಐಪಿ, ಎಪ್9 ಇಂಡಸ್ಟ್ರಿಯಲ್ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅಥಣಿ ಹೆಸ್ಕಾಂ ವಿಭಾಗಿಯ ಅಧಿಕಾರಿಗಳು ಮಾಹಿತಿ ನೀಡಿದ್ದರು
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications