ಬೆಣ್ಣೆನಗರಿಯಲ್ಲಿ "ಗಂಧದಗುಡಿ" ಸಿನಿಮಾದ ಸಂಭ್ರಮಾಚರಣೆಗೆ ಸಿದ್ಧತೆ, ಇಲ್ಲಿದೆ ವಿವರ
ದಾವಣಗೆರೆ, ಅಕ್ಟೋಬರ್, 23: ಅಖಿಲ ಕರ್ನಾಟಕ ಯುವರಾಜ್ ಕುಮಾರ್ ಸೇನೆ ವತಿಯಿಂದ ಅಕ್ಟೋಬರ್ 28ರಂದು ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಬಹುನಿರೀಕ್ಷಿತ "ಗಂಧದಗುಡಿ'' ಚಿತ್ರದ ಸಂಭ್ರಮಾಚರಣೆಯನ್ನು ಮಾಡಲು ನಿರ್ಧರಿಸಲಾಗಿದೆ. ನಗರದ ವಸಂತ ಚಿತ್ರಮಂದಿರದ ಮುಂಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಪುನೀತ್ ಹಂಪನಗೌಡ್ರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ಹಾಗೂ "ಪುನೀತ್ಗಾಗಿ ಒಂದು ಸಸಿ ನೆಡಿ' ಎಂಬ ಘೋಷಣೆಯೊಂದಿಗೆ ಸಸಿಗಳನ್ನು ಕೂಡ ವಿತರಿಸಲಾಗುವುದು ಎಂದು ತಿಳಿಸಿದರು.
ತಯಾರಾಗ್ತಿದೆ ಬೃಹತ್ ಕಟೌಟ್
ಅಕ್ಟೋಬರ್ 28ರಂದು ಬೆಳಗ್ಗೆ 10:30ಕ್ಕೆ ಚಿತ್ರ ಪ್ರದರ್ಶನ ಆಗುತ್ತಿದ್ದು, ವಸಂತ್ ಚಿತ್ರ ಮಂದಿರದ ಮುಂದೆ ಅಪ್ಪು ಕಟೌಟ್ಗೆ 17 ಅಡಿಯ ಭಾರೀ ಗಾತ್ರದ ಬೃಹತ್ ಹೂವಿನ ಹಾರವನ್ನು ಜೆಸಿಬಿ ಮೂಲಕ ಹಾಕಲಾಗುತ್ತದೆ. ಕಟೌಟ್ಗೆ 17 ಲೀಟರ್ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಹಾಗೂ 17 ಕೆ.ಜಿ. ಸಿಹಿ ಹಂಚಲಾಗುತ್ತದೆ. ಅಕ್ಟೋಬರ್ 27ರ ಗುರುವಾರರಂದು 17 ಆಟೋಗಳಿಂದ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ವಸಂತ ಚಿತ್ರಮಂದಿರದಲ್ಲಿ ರಕ್ತದಾನ ಶಿಬಿವರನ್ನು ಸಹ ಆಯೋಜಿಸಲಾಗಿದೆ. ಈ ಮೂಲಕ ಅಪ್ಪು ಅವರನ್ನು ಸ್ಮರಣೀಯವಾಗಿ ಸ್ಮರಿಸುವ ಉದ್ದೇಶ ಹೊಂದಿದ್ದೇವೆ ಎಂದು ವಿವರಿಸಿದರು.

40 ಜನರಿಗೆ ಉಚಿತ ಚಿತ್ರ ಪ್ರದರ್ಶನ
ಜಿಲ್ಲಾ ಗೌರವಾಧ್ಯಕ್ಷ ವಿನಯ್ ಉಪ್ಪಾರ್ ಮಾತನಾಡಿ, ವಿ.ಬಿ.ಪಿ. ಫೌಂಡೇಶನ್ನ ಎಚ್.ಐ.ವಿ. ಪೀಡಿತ ಮಕ್ಕಳು ಹಾಗೂ ಅಲ್ಲಿನ ಸಿಬ್ಬಂದಿ ವರ್ಗದವರು ಸೇರಿ 40 ಜನರಿಗೆ ಉಚಿತ ಚಿತ್ರ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ. ವಸಂತ ಚಿತ್ರಮಂದಿರದಲ್ಲಿ ಚಪ್ಪರ ಹಾಕಿ, ನಾಸಿಕ್ ಡೋಲಿನ ವ್ಯವಸ್ಥೆಯೊಂದಿಗೆ ಪಟಾಕಿಗಳನ್ನು ಸಿಡಿಸಲಾಗುವುದು. "ಗಂಧದಗುಡಿ" ಚಿತ್ರದ ಮೊದಲ ದಿನದ ಮೊದಲ ಶೋನಲ್ಲಿ ಡಿ.ಜೆ, ಲೈಟ್ಸ್ ಅಳವಡಿಸಿ, ಪೇಪರ್ ಶಾಟ್ಸ್ ಹೊಡೆಯಲಾಗುವುದು.
ಸುದ್ದಿಗೋಷ್ಠಿಯಲ್ಲಿ, ಕೆ.ಎಸ್. ಮನು, ರಾಕೇಶ್, ಹೆಚ್. ಮಾರುತಿ, ಅನಿಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications