ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ
ದಾವಣಗೆರೆ, ಆಗಸ್ಟ್ 28: ಗಣೇಶ ಹಬ್ಬ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ಸಿದ್ಧತೆಯೂ ಜೋರಾಗಿ ಸಾಗುತ್ತದೆ. ಆದರೆ ಈ ಬಾರಿ ಗಣೇಶನ ಹಬ್ಬಕ್ಕೆ ಹಲವು ಕಟ್ಟುನಿಟ್ಟಿನ ನಿಯಮಗಳೂ ಜೊತೆಯಾಗಿವೆ. ದಾವಣಗೆರೆಯಲ್ಲೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಲು ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗೌರಿ ಗಣೇಶ ಹಾಗೂ ಮೊಹರಂ ಹಬ್ಬಗಳ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ಹಲವು ವಿಷಯಗಳನ್ನು ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಈಗಾಗಲೇ ಸ್ಥಳ ನಿಗದಿಪಡಿಸಲಾಗಿದ್ದು, ಅಲ್ಲಿಯೇ ವಿಸರ್ಜನೆ ಮಾಡುವಂತೆ ಆಗ್ರಹಿಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಸಂಘಟನೆಗಳ ಮುಖಂಡರಿಗೆ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಸಲಹೆ ನೀಡಲಾಯಿತು. ಹಬ್ಬದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳ ಜೊತೆ ಜನರೂ ಸಹಕರಿಸಬೇಕು ಎಂದು ಸಹಕಾರ ಕೋರಲಾಯಿತು.

ಸರ್ಕಾರದ ಆದೇಶದಂತೆ ಗರಿಷ್ಠ ಐದು ಅಡಿಗಳಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸುವಂತಿಲ್ಲ ಎಂಬ ನಿಯಮ ಜಾರಿಯಾಗಿದೆ. ಅದರಂತೆ ಐದು ಅಡಿಗಿಂತ ಎತ್ತರದ ಗಣಪನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿಲ್ಲ. ಜೊತೆಗೆ ಜಿಲ್ಲೆಯಲ್ಲಿ ಪಿಒಪಿ ಗಣಪತಿ ಅಥವಾ ಪ್ಲಾಸ್ಟಿಕ್ ಗಣೇಶ ಮೂರ್ತಿಗಳನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಹಾಗೂ ಇತರೆ ಜಿಲ್ಲೆ, ರಾಜ್ಯಗಳಿಂದ ಬಂದ ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೆ ಮಾರಾಟ ಮಾಡುವುದು ಕಂಡುಬಂದಲ್ಲಿ, ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳ ಪರವಾನಗಿ ರದ್ದು ಮಾಡುವಂತೆ ಹಾಗೂ ಪರವಾನಗಿ ಇಲ್ಲದ ತಯಾರಕ ಮತ್ತು ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳನ್ನು ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು ಹಾಗೂ ವಿಸರ್ಜನೆ ಸಂದರ್ಭದಲ್ಲಿ ಹೂ ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿಗಳ ಸಮೇತ ಮೂರ್ತಿಗಳನ್ನು ವಿಸರ್ಜನೆ ಮಾಡದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ ತಿಳಿಸಿದ್ದಾರೆ.
ವಾರ್ಡ್ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿ ರಚಿಸಿಕೊಂಡು ಗಣೇಶ ಮೂರ್ತಿಗಳನ್ನು ಸೂಕ್ತವಾಗಿ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ. ಹಬ್ಬದ ಮುಂಚಿತವಾಗಿ ಶಾಲಾ ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರಸ್ನೇಹಿ ಗಣೇಶನ ಹಬ್ಬ ಆಚರಣೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಲೂ ಮುಂದಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications