ದಾವಣಗೆರೆಯಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಸಿದ್ಧತೆ ಶುರು
ದಾವಣಗೆರೆ, ನವೆಂಬರ್ 11: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಪಟಾಕಿ ವ್ಯಾಪಾರಕ್ಕಾಗಿ ದಾವಣಗೆರೆಯ ನಗರದ ಹೈಸ್ಕೂಲ್ ಮೈದಾನ ಸಿದ್ಧಗೊಳ್ಳುತ್ತಿದೆ.
"ಮೊದಲೇ ಲೈಸೆನ್ಸ್ ಪಡೆದು ಕೋವಿಡ್ ಮಾರ್ಗಸೂಚಿ ಅನ್ವಯ ಈ ಬಾರಿ ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಮಾಲಿನ್ಯ ರಹಿತವಾಗಿ ಆಚರಿಸಬೇಕು' ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದ್ದಾರೆ.
'ಪ್ರತಿ ವರ್ಷ ಪಟಾಕಿಗಳನ್ನು ಸಿಡಿಸಿ ವಿಜೃಂಭಣೆಯಿಂದ ಹಬ್ಬ ಆಚರಿಸಲಾಗುತ್ತಿತ್ತು. ಆದರೆ ಜನರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಸೋಂಕನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯವಿದೆ. ಆದ್ದರಿಂದ ಹಸಿರು ಹೊರತುಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಅಥವಾ ಬಳಕೆ ಮಾಡುವಂತಿಲ್ಲ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ನ.13ರಿಂದ ನ.17ರತನಕ ಪಟಾಕಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಲೈಸೆನ್ಸ್ ನೀಡಲಾಗಿದೆ. ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು. ಸಾರ್ವಜನಿಕರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು' ಎಂದು ಸೂಚಿಸಿದ್ದಾರೆ.
ಈ ಬಾರಿ 52 ಅಂಗಡಿಗಳು: ನಗರದ ಹೈಸ್ಕೂಲ್ ಮೈದಾನದಲ್ಲಿ ಈ ಬಾರಿ 52 ಪಟಾಕಿ ಅಂಗಡಿಗಳಲ್ಲಿ ವ್ಯಾಪಾರ ನಡೆಯಲಿದೆ. ಕಳೆದ ಬಾರಿ ವ್ಯಾಪಾರಿಗಳ ಸಂಖ್ಯೆ 82 ಇತ್ತು. ತಾಲೂಕುಗಳಿಂದ 32 ಅರ್ಜಿಗಳು ಬಂದಿವೆ.
ಯಾವುದು ಹಸಿರು ಪಟಾಕಿ: 125 ಡೆಸಿಬಲ್ ಗಿಂತ ಕಡಿಮೆ ಶಬ್ದ ಇರುವ ಪಟಾಕಿ, ಹೂವಿನಕುಂಡ, ಆನೆಪಟಾಕಿ, ಸೂಸರು ಬತ್ತಿ ಸೇರಿದಂತೆ ಇನ್ನಿತರ ಸಣ್ಣ ಶಬ್ದವನ್ನು ಹೊಂದಿರುವ ಪಟಾಕಿಗಳನ್ನೇ ಹಸಿರು ಪಟಾಕಿ ಎನ್ನುತ್ತಾರೆ. "ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆಯಾ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕು' ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರೂ ಆಗಿರುವ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications