Narendra Modi: ಮೋದಿ ಚುನಾವಣಾ ರ್ಯಾಲಿ, ಸಂಚಾರಿ ಮಾರ್ಗಗಳಲ್ಲಿ ಭಾರಿ ಬದಲಾವಣೆ
ದಾವಣಗೆರೆ, ಏಪ್ರಿಲ್. 27: ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 27, 28 ರಂದು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
ಹೈಸ್ಕೂಲ್ ಮೈದಾನದಲ್ಲಿದ್ದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಖಾಸಗಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಜಗಳೂರು ಕಡೆಯಿಂದ ಬರುವ ಬಸ್ಗಳು ಜಗಳೂರು ಬಸ್ ನಿಲ್ದಾಣ, ಹದಡಿ ರಸ್ತೆಯಿಂದ ಬರುವ ಖಾಸಗಿ ಬಸ್ ಮಾಗನೂರು ಬಸಪ್ಪ ಮೈದಾನ, ಚಿತ್ರದುರ್ಗದ ಕಡೆಯಿಂದ ಬರುವ ಬಸ್ ಗಳು ಎಪಿಎಂಸಿ ದನದ ಮಾರುಕಟ್ಟೆಯಲ್ಲಿ ನಿಲುಗಡೆ ಮಾಡಿ ಅಲ್ಲಿಂದಲೇ ಹೊರಡಬೇಕು.

ವಾಹನ ಸಂಚಾರ ಮಾರ್ಗಗಳ ಬದಲಾವಣೆ:
ಹರಿಹರ ಕಡೆಯಿಂದ ಬರುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳು ಹೆದ್ದಾರಿ ಬೈಪಾಸ್ ಮೂಲಕ ಬಾಡಾ ಕ್ರಾಸ್ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬರುವುದು ಮತ್ತು ಇದೇ ಮಾರ್ಗದಲ್ಲಿ ವಾಪಸ್ ಸಂಚರಿಸಬೇಕು. ಚಿತ್ರದುರ್ಗದಿಂದ ಬರುವ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಬಾಡಾ ಕ್ರಾಸ್ ನಿಂದ ಮಾರ್ಗ ಬದಲಿಸಬೇಕು. ಹರಪನಹಳ್ಳಿ, ಬೆಂಡಿಕೆರೆ, ಜಗಳೂರಿನಿಂದ ಬರುವ ಬಸ್ ಗಳು ಬೇತೂರು ರಸ್ತೆ ಹೊಸ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ವಾಪಸ್ ಹೋಗಬೇಕು.
ಕೊಂಡಜ್ಜಿ ಮಾರ್ಗವಾಗಿ ದಾವಣಗೆರೆ ಬರುವ ಬಸ್ಗಳು ಹರಿಹರ ಮಾರ್ಗವಾಗಿ ಹೆದ್ದಾರಿ ಮೂಲಕ ಬಾಡಾ ಕ್ರಾಸ್ ಮೂಲಕ ಹೊಸ ಬಸ್ ಸ್ಟ್ಯಾಂಡ್ ಗೆ ಬರಬೇಕು. ಆದರೆ ಕೊಂಡಜ್ಜಿ ರಸ್ತೆ, ಶಿಬಾರ ರಸ್ತೆಯಲ್ಲಿ ಓಡಾಡುವ ವಾಹನಗಳು ಆರ್.ಟಿ.ಓ ಸರ್ಕಲ್ ನಿಂದ ಫ್ಲೈಓವರ್ ಮೂಲಕ ಸಂಗೊಳ್ಳಿ ರಾಯಣ್ಣ ಸರ್ಕಲ್ ಗೆ ಬರುವುದನ್ನು ನಿಷೇಧಿಸಿದೆ. ಶಾಮನೂರು ಕ್ರಾಸ್ ನಿಂದ ಶಾರದಾಂಭ ಸರ್ಕಲ್ ವರೆಗೆ ವಾಹನಗಳು ಬರುವುದು, ನಂತರ ಸಂಗೊಳ್ಳಿ ರಾಯಣ್ಣ ಸರ್ಕಲ್ ಗೆ ಬಸ್ ಮತ್ತು ಲಾರಿ ಓಡಾಟ ನಿಷೇಧಿಸಿದೆ.
ಹದಡಿ ರಸ್ತೆ ಮಾರ್ಗವಾಗಿ ಬರುವ ವಾಹನಗಳು ಸ್ಟೇಡಿಯಂ ಎಆರ್ ಜಿ ಕಾಲೇಜ್ ಕ್ರಾಸ್ವರೆಗೆ ಬಂದು ವಾಪಸ್ ಹೋಗುವುದು. ಹಳೇ ಕೋರ್ಟ್ ರಸ್ತೆಯಲ್ಲಿರುವ ಆಟೋ ನಿಲ್ದಾಣವನ್ನು ಈ ಎರಡು ದಿನ ಬೇರೆ ಕಡೆ ಸ್ಥಳಾಂತರಿಸಿ ಕೊಳ್ಳಬೇಕು. ಇಲ್ಲಿ ಆಟೋ ನಿಲುಗಡೆ ಸ್ಥಗಿತಗೊಳಿಸಿದೆ.
ಈ ಮಾರ್ಗಗಳಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತ
ಹಳೆ ಪಿಬಿ ರಸ್ತೆಯಲ್ಲಿ ಬಾತಿ ಕೆರೆಯಿಂದ ಎಪಿಎಂಸಿ ಫ್ಲೈ ಓವರ್, ಎವಿಕೆ ರಸ್ತೆ ಪಿ.ಜೆ.ಕ್ರಾಸ್ ನಿಂದ ವಿಜಯಾ ಹೋಟೆಲ್ ಆಟೋ ಸ್ಟ್ಯಾಂಡ್, ಹಳೇ ಕೋರ್ಟ್ ರಸ್ತೆಯ ಎಸಿ ಸರ್ಕಲ್ ನಿಂದ ಅಂಬೇಡ್ಕರ್ ಸರ್ಕಲ್, ವಿದ್ಯಾರ್ಥಿ ಭವನದವರೆಗೆ, ಹಳೆ ಐಬಿ ರಸ್ತೆಯ ಅರಸು ಸರ್ಕಲ್ ನಿಂದ ಜಯದೇವ ವೃತ್ತದವರೆಗೆ, ಅಶೋಕ್ ರಸ್ತೆಯಲ್ಲಿ ಗಾಂಧಿ ಸರ್ಕಲ್ ನಿಂದ ಜಯದೇವ ಸರ್ಕಲ್ ವರೆಗೆ, ಅರುಣಾ ಸರ್ಕಲ್ ನಿಂದ ರಾಂ ಅಂಡ್ ಕೋ ಸರ್ಕಲ್-ಸಿಜೆ ಆಸ್ಪತ್ರೆ ರಸ್ತೆ ಸ್ಪಂದನಾ ಜ್ಯೂಸ್ ಸ್ಟಾಲ್-ಸಿಜಿ ಆಸ್ಪತ್ರೆ ರಸ್ತೆ ಬ್ಲಡ್ ಬ್ಯಾಂಕ್ ರಸ್ತೆ ಈ ಮಾರ್ಗಗಳಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದೆ.
ಪರ್ಯಾಯ ಮಾರ್ಗ ಬದಲಿಸಿ
ಬಾತಿ ಕಡೆಯಿಂದ ಗಾಂಧಿ ವೃತ್ತ, ಶಾಮನೂರು, ಲಕ್ಷ್ಮೀ ಮಿಲ್, ಗುಂಡಿ ಸರ್ಕಲ್, ವಿದ್ಯಾರ್ಥಿಭವನ, ಅಂಬೇಡ್ಕರ್ ಸರ್ಕಲ್, ಜಯದೇವ ಸರ್ಕಲ್, ಗಾಂಧಿ ಸರ್ಕಲ್, ಹಳೆ ಪಿಬಿ ರಸ್ತೆ, ಹಳೆ ಕೋರ್ಟ್ ರಸ್ತೆ, ಎವಿಕೆ ರಸ್ತೆ ಮಾರ್ಗವಾಗಿ ಬಾರದೆ ಇತರೆ ಮಾರ್ಗ ಅನುಸರಿಸಿ. ಹಾವೇರಿ, ಹರಿಹರ ಕಡೆಯಿಂದ ಬರುವ ಲಾರಿ ಮತ್ತು ಇತರೆ ವಾಹನಗಳು ಬಾತಿಯಿಂದ ಹೆದ್ದಾರಿಗೆ ಮಾರ್ಗವಾಗಿ ಮುಂದೆ ಹೋಗಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications