370ನೇ ವಿಧಿ ರದ್ದು ಮಾಡಿದ ಮೋದಿ ನಿರ್ಧಾರವನ್ನು ಹಾಡಿ ಹೊಗಳಿದ ಭಗವಾನ್
ಹರಿಹರ (ದಾವಣಗೆರೆ), ಆಗಸ್ಟ್ 18: "ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿ ರದ್ದು ಮಾಡಿರುವುದನ್ನು ನಾನು ಈಗಲೂ ಸ್ವಾಗತಿಸುತ್ತೇನೆ. ಅದು ಮೋದಿಯವರ ಒಳ್ಳೆ ಕೆಲಸ. ಅದರಿಂದ ಇಡೀ ಭಾರತದಲ್ಲಿ ಎಲ್ಲ ರಾಜ್ಯಗಳು ಸಮಾನ ಎಂದು ಸಾರಿದೆ" ಎಂದು ಚಿಂತಕ ಪ್ರೊ ಭಗವಾನ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭಾನುವಾರ ಮತ್ತೊಮ್ಮೆ ಹೊಗಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಗುರುಭವನದಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತತ್ವ- ಸಿದ್ಧಾಂತಗಳು ಏನೇ ಇದ್ದರೂ ಒಳ್ಳೆಯದನ್ನು ಮಾಡಿದಾಗ ಮೆಚ್ಚಬೇಕು, ಸ್ವಾಗತಿಸಬೇಕು. ಈ ಹಿಂದೆಯೂ ಮೋದಿಯವರು ಸಂವಿಧಾನವನ್ನು ರಾಷ್ಟ್ರದ ಧರ್ಮ ಗ್ರಂಥ ಎಂದು ಹೇಳಿದ್ದರು. ಅದನ್ನು ಮೆಚ್ಚಿ ಲೇಖನ ಬರೆದಿದ್ದೇನೆ ಎಂದು ಹೇಳಿದರು.
ವಿರೋಧ ಮಾಡುತ್ತೇವೆಂದು ಎಂದು ಎಲ್ಲವನ್ನೂ ವಿರೋಧಿಸಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ದಿ. ಪ್ರೊ ಬಿ ಕೃಷ್ಣಪ್ಪನವರ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರನ್ನು ಬೆಳಸಿದವರು ಅವರು. ಬಾಬಾ ಸಾಹೇಬ್ ಅಂಬೇಡ್ಕರ್ ರ ಚಿಂತನೆಗಳನ್ನು ಪಾಲನೆ ಮಾಡಿದವರು ಕೃಷ್ಣಪ್ಪ ಎಂದರು.

ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಮೇಲು- ಕೀಳು ಎಂಬುದು ಹೋಗಿಲ್ಲ. ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ಹೇಳಲಾಗುತ್ತದೆ. ಸಂವಿಧಾನದಲ್ಲಿ ಇದ್ದರೂ ಯಾರು ಕೂಡ ಪಾಲನೆ ಮಾಡುತ್ತಿಲ್ಲ. ಯಾರು ಅಂತರ್ಜಾತಿ ವಿವಾಹ ಆಗುತ್ತಾರೋ ಅವರಿಗೆ ಸರಕಾರಿ ನೌಕರಿ ಸಿಗಬೇಕು, ಅಂತಹವರಿಗೆ ಚುನಾವಣೆಗೆ ನಿಲ್ಲುವಂಥ ಕಾನೂನು ಬರಬೇಕು ಎಂದು ಅಭಿಪ್ರಾಯಪಟ್ಟರು.
ಈಗಿನ ಭಾರತದಲ್ಲಿ ಜಾತಿಯೇ ಮುಖ್ಯ ಹೊರತು ಜ್ಞಾನಕ್ಕೆ ಬೆಲೆ ಇಲ್ಲ. ಎಲ್ಲರೂ ಮೊದಲು ಒಂದೇ ಜಾತಿಯವರು. ಕಾಲದ ನಂತರ ಜಾತಿಗಳಾಗಿವೆ. ಪುಸ್ತಕಗಳನ್ನು ಓದುವುದರಿಂದ ತಿಳಿವಳಿಕೆ ಬರುತ್ತದೆ. ಅದನ್ನು ಬಿಟ್ಟು ದೇವಸ್ಥಾನ, ಮಸೀಧಿಗಳಿಗೆ ಹೋಗುವುದರಿಂದ ಬುದ್ಧಿವಂತರಾಗುವುದಿಲ್ಲ. ಓದಿ, ಬುದ್ಧಿಶಕ್ತಿ ಬೆಳೆಸಿಕೊಂಡಾಗ ಮಾತ್ರ ಬುದ್ಧಿವಂತರಾಗುತ್ತಾರೆ ಎಂದರು.
ಸಂಶೋಧಕ ಎಂ. ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಭಗವಾನ್, ಈಗಾಗಲೇ ಎರಡು- ಮೂರು ಕೇಸ್ ಆಗಿದೆ. ನಾನೇನಾದರೂ ಮಾತನಾಡಿದರೆ ಮತ್ತೊಂದು ಕೇಸ್ ಬಿದ್ದು, ಓಡಾಡುವ ಕೆಲಸ ಆಗುತ್ತದೆ. ಬೇಕಾದರೆ ಮೈಸೂರಲ್ಲಿ ಮಾತನಾಡುತ್ತೇನೆ ಎಂದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications