ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ರೈಲ್ವೆ ಪ್ಲಾಟ್‌ಫಾರ್ಮ್ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 6: ದಾವಣಗೆರೆ ಸೇರಿದಂತೆ ರಾಜ್ಯದಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿನ ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ ಮಾಡಿದ್ದಕ್ಕಾಗಿ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆ ಮಾರ್ಗವಾಗಿ ಪ್ರತಿದಿನ ಹುಬ್ಬಳ್ಳಿಯಿಂದ ಬೆಂಗಳೂರು, ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಎಕ್ಸ್‌ಪ್ರೆಸ್ ಆಗಿ ಮಾಡಿರುವುದನ್ನು ಖಂಡಿಸಿ ರೈಲ್ವೇ ಖಾಸಗೀಕರಣ ವಿರೋಧಿ ಅಭಿಯಾನ - ಕರ್ನಾಟಕದ ದಾವಣಗೆರೆ ಘಟಕದ ಕಾರ್ಯಕರ್ತರು ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.

 ದಾವಣಗೆರೆಯಲ್ಲಿ ಮಾಟ‌ ಮಂತ್ರ: ಬಿಜೆಪಿ ಮುಖಂಡನ ಕುಟುಂಬಕ್ಕೆ ಆಘಾತ ದಾವಣಗೆರೆಯಲ್ಲಿ ಮಾಟ‌ ಮಂತ್ರ: ಬಿಜೆಪಿ ಮುಖಂಡನ ಕುಟುಂಬಕ್ಕೆ ಆಘಾತ

ಪ್ರತಿಭಟನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಕಾರ್ಯಕರ್ತರಾದ ತಿಪ್ಪೇಸ್ವಾಮಿ ಅಣಬೇರು ಅವರು ಮಾತನಾಡುತ್ತಾ, "ಕೋವಿಡ್ -19 ಸಾಂಕ್ರಾಮಿಕ ರೋಗವು ಸಾಮಾನ್ಯ ಜನರ ಜೀವನವನ್ನು ಶೋಚನೀಯಗೊಳಿಸಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಬಹುಪಾಲು ಸಾಮಾನ್ಯ ಜನರು ರೈಲ್ವೆಯ ಮೇಲೆ ಅವಲಂಬಿತರಾಗಿದ್ದಾರೆ. ಇಂತಹ ಕಷ್ಟಕರ ಪರಿಸ್ಥಿಯಲ್ಲೂ ಸಹ ದಾವಣಗೆರೆಯ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕವನ್ನು 50 ರುಪಾಯಿಗೆ ಹೆಚ್ಚಿಸುವ ಈ ನಿರ್ಧಾರವು ಸ್ವೀಕಾರ್ಹವಲ್ಲವೆಂದರು.

Davanagere: Protest Against Railway Platform Price Hike

ಅಲ್ಲದೇ ಪ್ರತಿದಿನ ಹುಬ್ಬಳ್ಳಿಯಿಂದ ಬೆಂಗಳೂರಿಗೆ, ದಾವಣಗೆರೆ ಮಾರ್ಗವಾಗಿ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿರುವುದರಿಂದ ಇದೇ ದಾವಣಗೆರೆ ಸುತ್ತಮುತ್ತ ಇರುವ ಕೊಡಗನೂರು, ತೋಳಹುಣಸೆ, ಹನುಮನಹಳ್ಳಿ, ಮಾಯಕೊಂಡ, ಸಾಸಲು ಈ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ, ಆಗ ಈ ಭಾಗದ ಜನಸಾಮಾನ್ಯರು, ಅಂಗವಿಕಲರು, ಉದ್ಯೋಗಿಗಳು, ವಿದ್ಯಾರ್ಥಿಗಳು, ವೃದ್ಧರು ರೈಲು ಸೌಲಭ್ಯದಿಂದ ವಂಚಿತರಾಗುತ್ತಾರೆ ಎಂದು ಕಿಡಿಕಾರಿದರು.

ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಕ್ರಮವು ಜನ ವಿರೋಧಿ, ಏಕೆಂದರೆ ರೈಲ್ವೆಯ ಮೇಲೆ ಅವಲಂಬಿತವಾಗಿರುವ ಟೀ-ಕಾಫಿ, ಮಂಡಕ್ಕಿ, ಚಿಪ್ಸ್, ಹಣ್ಣುಗಳು ಇನ್ನಿತರೆ ತಿನಿಸು-ಪಾನೀಯಗಳ ಚಿಲ್ಲರೆ ವ್ಯಾಪಾರಸ್ಥರು, ಬಡವರು ಬೀದಿಪಾಲಾಗುತ್ತಾರೆ ಎಂದು ಹೇಳಿದರು.

Davanagere: Protest Against Railway Platform Price Hike

ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕವನ್ನು 50 ರಿಂದ ಮತ್ತೆ ಹಳೆಯ ಶುಲ್ಕ 10 ರುಪಾಯಿಗೆ ಈ ಕೂಡಲೇ ಇಳಿಸಿ, ಈ ಮೊದಲು ಪ್ಯಾಸೆಂಜರ್ ರೈಲುಗಳು ಸಂಚರಿಸುವಂತೆ ಮುದುವರೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾರತಿ, ಡಾ. ಸುನೀತ್ ಕುಮಾರ್, ಮಂಜುನಾಥ್ ಕೈದಾಳೆ, ಹಿರೇಮಠ್ ಎಂ.ಆರ್, ಮಂಜುನಾಥ್ ಕುಕ್ಕುವಾಡ, ಭಾರತಿ, ನಾಗಜ್ಯೋತಿ, ಕಾವ್ಯ, ಪುಷ್ಪ, ಜ್ಯೋತಿ ಕುಕ್ಕುವಾಡ, ಟಿ.ವಿ.ಎಸ್ ರಾಜು, ಮಧು ತೊಗಲೇರಿ, ಸ್ಮಿತಾ, ಲಕ್ಷ್ಮಣ್ ಢಾಂಗೆ ಇನ್ನಿತರರು ಭಾಗವಹಿಸಿದ್ದರು. ನಾಗರೀಕರು, ವಿವಿಧ ಸಂಘ ಸಂಸ್ಥೆಗಳು, ರೈತ, ಕಾರ್ಮಿಕ, ದಲಿತ ಸಂಘಟನೆಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

English summary
Protests were held near the railway station for increasing platform ticket fare at railway stations across the state, including Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X