Get Updates
Get notified of breaking news, exclusive insights, and must-see stories!

ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಸಿಗುವವರೆಗೆ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ, ಅಕ್ಟೋಬರ್‌, 03: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ನಾವೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ಕೂಡಲಸಂಗಮ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಹೇಳಿದರು.

ನಗರದ ಸದ್ಯೊಜಾತ ಮಠದಲ್ಲಿ ಕರೆಯಲಾಗಿದ್ದ ಜಿಲ್ಲೆಯ ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಪಾದಯಾತ್ರೆ ಮಾಡಿದ್ದೆವು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಭರವಸೆ ನೀಡಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಬಸವರಾಜ್ ಬೊಮ್ಮಾಯಿ ಅವರು ಕೊಟ್ಟ ಭರವಸೆ ಈಡೇರಲಿಲ್ಲ ಎಂದರು.

Protest till gets 2A reservation to panchamasali community says Basava Jaya Mruthyunjaya Swamiji

ಆಗ ಸರ್ಕಾರದ ಮಟ್ಟದಲ್ಲಿ ನಮ್ಮವರೂ ಇದ್ದರೂ ಕಾರ್ಯರೂಪಕ್ಕೆ ಬರಲಿಲ್ಲ. ಕೊನೆ ಗಳಿಗೆಯಲ್ಲಿ ಮೀಸಲಾತಿ ಘೋಷಿಸಿದರೂ ಉಪಯೋಗಕ್ಕೆ ಬರಲಿಲ್ಲ. ವಿಧಾನಸಭೆ ಚುನಾವಣೆ ಬಂದ ಕಾರಣ ಬೇಡಿಕೆ ಈಡೇರಲಿಲ್ಲ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ನಮ್ಮ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಹೇಳಿದರು.

ನಾವು ಸಂಘಟಿತರಾಗಿ ಹೋರಾಟ ಮಾಡಿದರೆ ಮಾತ್ರ ನಮ್ಮ ಹಕ್ಕು ಪಡೆಯಬಹುದು. ಆಗ ರಾಜ್ಯದ ಮೂಲೆ ಮೂಲೆಗಳಿಂದಲೂ ನಮ್ಮ ಹೋರಾಟಕ್ಕೆ ಬೆಂಬಲ ದೊರಕಿತ್ತು. ಈಗ ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡದಿದ್ದರೆ ಅನಿವಾರ್ಯವಾಗಿ ಹೋರಾಟಕ್ಕೆ ಇಳಿಯಲೇಬೇಕಾಗುತ್ತದೆ. ಈ ಹಿಂದೆ ನೀಡಿದಂತೆ ಈ ಬಾರಿಯೂ ಬೆಂಬಲಿಸಿ. ನಾವೆಲ್ಲರೂ ಒಟ್ಟಾದರೆ ನಮ್ಮ ಹಕ್ಕು ಪಡೆಯುವುದು ಕಷ್ಟಸಾಧ್ಯವಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

2 ಎ ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲದು. ಕೃಷಿಯನ್ನೇ ಹೆಚ್ಚಾಗಿ ಅವಲಂಬಿಸಿರುವ ಸಮಾಜ ನಮ್ಮದು. ಸಮಾಜಕ್ಕೆ ನ್ಯಾಯ ಸಿಗಲೇಬೇಕು. ಇದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾನು ಸಿದ್ಧನಿದ್ದೇನೆ. ಸಮಾಜಕ್ಕೆ 2 ಎ ಮೀಸಲಾತಿ ದೊರೆತರೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಬಲ ಸಿಗುತ್ತದೆ. ನಮ್ಮ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ನಾವೆಲ್ಲರೂ ಒಟ್ಟಾಗೋಣ, ಮೀಸಲಾತಿ ಪಡೆದೇ ತೀರುತ್ತೇವೆ ಎಂಬ ಶಪಥ ಮಾಡೋಣ ಎಂದು ಶ್ರೀಗಳು ಕರೆ ನೀಡಿದರು.

ದಾವಣಗೆರೆ ಜಿಲ್ಲಾ ಪಂಚಮಸಾಲಿ ಸಮಾಜ ಬಾಂಧವರ ಸಭೆಯಲ್ಲಿ ಸಮಾಜಕ್ಕೆ ಸಿಗಬೇಕಿರುವ ಸೌಲಭ್ಯ, ಮೀಸಲಾತಿ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಸಮಾಜದ ಸಂಘಟನೆ ಮತ್ತು ಆಗಬೇಕಾದ ಕೆಲಸ ಕಾರ್ಯಗಳ ಕುರಿತು ಸಲಹೆ ಸೂಚನೆಗಳನ್ನು ಇದೇ ವೇಳೆ ಪಡೆಯಲಾಯಿತು.

ಸಭೆಯಲ್ಲಿ ಹರಿಹರದ ಮಾಜಿ ಶಾಸಕ ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಹೆಚ್. ಎಸ್. ಶಿವಶಂಕರ್, ಕೂಡಲ ಸಂಗಮ ಪೀಠದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಅಜಯ್ ಕುಮಾರ್ ಮತ್ತು ಗೌರವಾಧ್ಯಕ್ಷ ಪರಮೇಶಪ್ಪ ಗೌಡ್ರು ಹೊಳೆಸಿರಿಗೇರೆ, ಜಿಲ್ಲಾಧ್ಯಕ್ಷ ಆರ್.ವಿ.ಅಶೋಕ್ ಗೋಪನಾಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+