ದಾವಣಗೆರೆ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ಅಭಿಮಾನಿ
ದಾವಣಗೆರೆ, ಸೆಪ್ಟೆಂಬರ್ 21: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ. ಅಕಾಲಿಕ ಸಾವಿನ ಬಳಿಕೆ ರಾಜ್ ಕುಟುಂಬಸ್ಥರು ಅಪ್ಪು ಕಣ್ಣುಗಳನ್ನು ದಾನ ಮಾಡಿದ್ದರು. ಈ ಘಟನೆ ನಂತರ ನೇತ್ರದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ದಾವಣಗೆರೆಯಲ್ಲೂ ಯುವಕನೊಬ್ಬ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿ ಮಾರ್ಕೆಟ್ ರವಿ ಕೂಡ ನೋಂದಣಿ ನೇತ್ರದಾನ ಮಾಡಿಸಿಕೊಂಡಿದ್ದರು. ಅವರು ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಇದೀಗ ಕುಟುಂಬಸ್ಥರು ನೇತ್ರದಾನ ಮಾಡಿ ಮಾನವೀಯ ಕಾರ್ಯದ ಜೊತೆಗೆ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಎಸ್. ಎಂ. ಕೃಷ್ಣ ನಗರದ ನಿವಾಸಿಯಾಗಿದ್ದ ರವಿ ಬಡಕುಟುಂಬದಲ್ಲಿ ಜನಿಸಿದ್ದು, ತರಕಾರಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರಿಂದ 'ಮಾರ್ಕೆಟ್ ರವಿ' ಅಂತಾನೇ ಎಲ್ಲರೂ ಪ್ರೀತಿಯಿಂದ ಕರೆಯುತ್ತಿದ್ದರು. ಕನ್ನಡ ರಾಜ್ಯೋತ್ಸವ ಹಾಗೂ ಅಪ್ಪು ಜನುಮದಿನದಂದು ಜ್ಯೂನಿಯರ್ ರಾಜಕುಮಾರ್ ಅವರನ್ನು ಕರೆಯಿಸಿ ಕಾರ್ಯಕ್ರಮ ನಡೆಸುತ್ತಿದ್ದರು.
ಕೇವಲ 31 ವರ್ಷದ ರವಿ ಈ ಹಿಂದೆ ಯಾವುದೋ ಕಾರಣಕ್ಕೆ ಆತ್ಮಹತ್ಯೆಗೆ ಯತ್ನ ಮಾಡಿದ್ದರು. ಆಗ ಹಿರಿಯರು, ಸ್ನೇಹಿತರೆಲ್ಲರೂ ಕೂರಿಸಿಕೊಂಡು ಬುದ್ದಿವಾದ ಹೇಳಿದ್ದರು. ಮೊದಲಿನಿಂದಲೂ ಅಪ್ಪು ಅಂದರೆ ರವಿ ಪಂಚಪ್ರಾಣ. ಹುಟ್ಟುಹಬ್ಬ ಬಂದರೆ, ಸಿನಿಮಾ ಬಿಡುಗಡೆಯಾದರೆ ರವಿಗೆ ಎಲ್ಲಿಲ್ಲದ ಖುಷಿ. ಅಪ್ಪು ಬರ್ತ್ ಡೇ ಅನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದರು. ಮಾತ್ರವಲ್ಲ, ಅಪ್ಪು ಅಂದರೆ ತುಂಬಾನೇ ಇಷ್ಟ. ಹಾಗಾಗಿ ಅಪ್ಪು ಅವರು ಅಭಿಮಾನಿಗಳಿಗೆ ತೋರಿಸಿಕೊಟ್ಟ ದಾರಿಯಲ್ಲೇ ನಡೆಯುತ್ತೇನೆ ಎಂದು ಸ್ನೇಹಿತರಲ್ಲಿ ಹೇಳಿಕೊಳ್ಳುತ್ತಿದ್ದರು.

ಅಪ್ಪು ಎಲ್ಲರನ್ನೂ ಬಿಟ್ಟು, ತಮ್ಮ ನೇತ್ರದಾನ ಮಾಡಿದ ವಿಷಯ ತಿಳಿದಾಗಲೇ ಜಯದೇವ ಜಗದ್ಗುರು ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೇತ್ರದಾನ ಮಾಡಲು ತನ್ನ ಹೆಸರು ನೋಂದಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದ ಮಾರ್ಕೆಟ್ ರವಿ ಕಣ್ಣುಗಳನ್ನು ಕುಟುಂಬದವರು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಹಸ್ತಾಂತರ ಮಾಡಲಾಯಿತು.
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಸೇರಿದಂತೆ ಹಲವರು ಭೇಟಿ ನೀಡಿ ರವಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ರವಿ ತುಂಬಾ ಸ್ನೇಹ ಜೀವಿ. ಆತನ ಸಾವು ನಮಗೆಲ್ಲರಿಗೂ ದಿಗ್ಭ್ರಮೆ ತಂದಿದೆ. ಕೇವಲ 31 ವರ್ಷ. 9 ತಿಂಗಳ ಮಗು ಇದೆ. ಪತ್ನಿ ಮತ್ತು ಮಗುವಿನ ಪರಿಸ್ಥಿತಿ ನೆನೆದರೆ ಮನಸ್ಸಿಗೆ ತುಂಬಾನೇ ಬೇಸರವಾಗುತ್ತದೆ ಎಂದರು.

ಆತ ಪುನೀತ್ ರ ಅಪ್ಪಟ ಅಭಿಮಾನಿ. ಪುನೀತ್ ರಾಜಕುಮಾರ್ ಅವರು ನಿಧನ ಹೊಂದಿದಾಗ ನಾನು ಸಾಯುತ್ತೇನೆ ಎಂದು ಬಡಾಬಡಾಯಿಸುತ್ತಿದ್ದ. ನಾವೆಲ್ಲರೂ ಸಮಾಧಾನ ಮಾಡಿದ್ವಿ. ಪುನೀತ್ ರಂತೆ ಕಣ್ಣು ದಾನ ಮಾಡುವ ಸಂಕಲ್ಪ ತೊಟ್ಟಿದ್ದ. ದಾನಪತ್ರಕ್ಕೆ ಸಹಿ ಹಾಕಿದ್ದ. ಆತನ ಆಸೆ ಪ್ರಕಾರ ಕಣ್ಣು ದಾನ ಮಾಡಲಾಗಿದೆ. ಇಂಥ ಒಳ್ಳೆಯ ವ್ಯಕ್ತಿತ್ವ ಇರುವವರು ಸಿಗುವುದು ತುಂಬಾನೇ ವಿರಳ. ಯಾರೇ ಕಷ್ಟ ಅಂತಾ ಬಂದರೂ ಸಹಾಯ ಮಾಡುತ್ತಿದ್ದ. ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಯಾರಿಗೂ ನೋವು ಕೊಡದ ವ್ಯಕ್ತಿ. ಸಾವಿರಾರು ಸಂಖ್ಯೆಯ ಸ್ನೇಹಿತರನ್ನು ಅಗಲಿದ್ದು, ಆತ್ಮಕ್ಕೆ ಚಿರಶಾಂತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications