ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ಅಭಿಮಾನಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಸೆಪ್ಟೆಂಬರ್ 21: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ. ಅಕಾಲಿಕ ಸಾವಿನ ಬಳಿಕೆ ರಾಜ್ ಕುಟುಂಬಸ್ಥರು ಅಪ್ಪು ಕಣ್ಣುಗಳನ್ನು ದಾನ ಮಾಡಿದ್ದರು. ಈ ಘಟನೆ ನಂತರ ನೇತ್ರದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ದಾವಣಗೆರೆಯಲ್ಲೂ ಯುವಕನೊಬ್ಬ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿ ಮಾರ್ಕೆಟ್ ರವಿ ಕೂಡ ನೋಂದಣಿ ನೇತ್ರದಾನ ಮಾಡಿಸಿಕೊಂಡಿದ್ದರು. ಅವರು ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಇದೀಗ ಕುಟುಂಬಸ್ಥರು ನೇತ್ರದಾನ ಮಾಡಿ ಮಾನವೀಯ ಕಾರ್ಯದ ಜೊತೆಗೆ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಎಸ್. ಎಂ. ಕೃಷ್ಣ ನಗರದ ನಿವಾಸಿಯಾಗಿದ್ದ ರವಿ ಬಡಕುಟುಂಬದಲ್ಲಿ ಜನಿಸಿದ್ದು, ತರಕಾರಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರಿಂದ 'ಮಾರ್ಕೆಟ್ ರವಿ' ಅಂತಾನೇ ಎಲ್ಲರೂ ಪ್ರೀತಿಯಿಂದ ಕರೆಯುತ್ತಿದ್ದರು. ಕನ್ನಡ ರಾಜ್ಯೋತ್ಸವ ಹಾಗೂ ಅಪ್ಪು ಜನುಮದಿನದಂದು ಜ್ಯೂನಿಯರ್ ರಾಜಕುಮಾರ್ ಅವರನ್ನು ಕರೆಯಿಸಿ ಕಾರ್ಯಕ್ರಮ ನಡೆಸುತ್ತಿದ್ದರು.

ದಾವಣಗೆರೆ: ಡಿಸಿಸಿ ಅಧ್ಯಕ್ಷ ಸ್ಥಾನದಿಂದ ಹೆಚ್. ಬಿ. ಮಂಜಪ್ಪನನ್ನು ವಜಾಗೊಳಿಸಿ; ಕಾಂಗ್ರೆಸ್ ಮುಖಂಡರ ಆಗ್ರಹ ದಾವಣಗೆರೆ: ಡಿಸಿಸಿ ಅಧ್ಯಕ್ಷ ಸ್ಥಾನದಿಂದ ಹೆಚ್. ಬಿ. ಮಂಜಪ್ಪನನ್ನು ವಜಾಗೊಳಿಸಿ; ಕಾಂಗ್ರೆಸ್ ಮುಖಂಡರ ಆಗ್ರಹ

ಕೇವಲ 31 ವರ್ಷದ ರವಿ ಈ ಹಿಂದೆ ಯಾವುದೋ ಕಾರಣಕ್ಕೆ ಆತ್ಮಹತ್ಯೆಗೆ ಯತ್ನ ಮಾಡಿದ್ದರು. ಆಗ ಹಿರಿಯರು, ಸ್ನೇಹಿತರೆಲ್ಲರೂ ಕೂರಿಸಿಕೊಂಡು ಬುದ್ದಿವಾದ ಹೇಳಿದ್ದರು. ಮೊದಲಿನಿಂದಲೂ ಅಪ್ಪು ಅಂದರೆ ರವಿ ಪಂಚಪ್ರಾಣ. ಹುಟ್ಟುಹಬ್ಬ ಬಂದರೆ, ಸಿನಿಮಾ ಬಿಡುಗಡೆಯಾದರೆ ರವಿಗೆ ಎಲ್ಲಿಲ್ಲದ ಖುಷಿ. ಅಪ್ಪು ಬರ್ತ್ ಡೇ ಅನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದರು. ಮಾತ್ರವಲ್ಲ, ಅಪ್ಪು ಅಂದರೆ ತುಂಬಾನೇ ಇಷ್ಟ. ಹಾಗಾಗಿ ಅಪ್ಪು ಅವರು ಅಭಿಮಾನಿಗಳಿಗೆ ತೋರಿಸಿಕೊಟ್ಟ ದಾರಿಯಲ್ಲೇ ನಡೆಯುತ್ತೇನೆ ಎಂದು ಸ್ನೇಹಿತರಲ್ಲಿ ಹೇಳಿಕೊಳ್ಳುತ್ತಿದ್ದರು.

Puneeth Rajkumars fan Donate eyes after Died from Heart Attack in Davangere

ಅಪ್ಪು ಎಲ್ಲರನ್ನೂ ಬಿಟ್ಟು, ತಮ್ಮ ನೇತ್ರದಾನ ಮಾಡಿದ ವಿಷಯ ತಿಳಿದಾಗಲೇ ಜಯದೇವ ಜಗದ್ಗುರು ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೇತ್ರದಾನ ಮಾಡಲು ತನ್ನ ಹೆಸರು ನೋಂದಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದ ಮಾರ್ಕೆಟ್ ರವಿ ಕಣ್ಣುಗಳನ್ನು ಕುಟುಂಬದವರು ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಹಸ್ತಾಂತರ ಮಾಡಲಾಯಿತು.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಸೇರಿದಂತೆ ಹಲವರು ಭೇಟಿ ನೀಡಿ ರವಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ರವಿ ತುಂಬಾ ಸ್ನೇಹ ಜೀವಿ. ಆತನ ಸಾವು ನಮಗೆಲ್ಲರಿಗೂ ದಿಗ್ಭ್ರಮೆ ತಂದಿದೆ. ಕೇವಲ 31 ವರ್ಷ. 9 ತಿಂಗಳ ಮಗು ಇದೆ. ಪತ್ನಿ ಮತ್ತು ಮಗುವಿನ ಪರಿಸ್ಥಿತಿ ನೆನೆದರೆ ಮನಸ್ಸಿಗೆ ತುಂಬಾನೇ ಬೇಸರವಾಗುತ್ತದೆ ಎಂದರು.

Puneeth Rajkumars fan Donate eyes after Died from Heart Attack in Davangere

ಆತ ಪುನೀತ್ ರ ಅಪ್ಪಟ ಅಭಿಮಾನಿ. ಪುನೀತ್ ರಾಜಕುಮಾರ್ ಅವರು ನಿಧನ ಹೊಂದಿದಾಗ ನಾನು ಸಾಯುತ್ತೇನೆ ಎಂದು ಬಡಾಬಡಾಯಿಸುತ್ತಿದ್ದ. ನಾವೆಲ್ಲರೂ ಸಮಾಧಾನ ಮಾಡಿದ್ವಿ. ಪುನೀತ್ ರಂತೆ ಕಣ್ಣು ದಾನ ಮಾಡುವ ಸಂಕಲ್ಪ ತೊಟ್ಟಿದ್ದ. ದಾನಪತ್ರಕ್ಕೆ ಸಹಿ ಹಾಕಿದ್ದ. ಆತನ ಆಸೆ ಪ್ರಕಾರ ಕಣ್ಣು ದಾನ ಮಾಡಲಾಗಿದೆ. ಇಂಥ ಒಳ್ಳೆಯ ವ್ಯಕ್ತಿತ್ವ ಇರುವವರು ಸಿಗುವುದು ತುಂಬಾನೇ ವಿರಳ. ಯಾರೇ ಕಷ್ಟ ಅಂತಾ ಬಂದರೂ ಸಹಾಯ ಮಾಡುತ್ತಿದ್ದ. ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಯಾರಿಗೂ ನೋವು ಕೊಡದ ವ್ಯಕ್ತಿ. ಸಾವಿರಾರು ಸಂಖ್ಯೆಯ ಸ್ನೇಹಿತರನ್ನು ಅಗಲಿದ್ದು, ಆತ್ಮಕ್ಕೆ ಚಿರಶಾಂತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

English summary
Puneeth Rajkumar fan Market Ravi passed away due to heart attack in Davangere and his family has donated his eyes as per his wish
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X