ದಾವಣಗೆರೆ ಜಯಚಾಮರಾಜೇಂದ್ರ ಎಕ್ಸ್ ಟೆನ್ಷನ್ ನಲ್ಲಿ ರಾಯರ ಆರಾಧನೆ

ದಾವಣಗೆರೆ, ಆಗಸ್ಟ್ 8: ಇಲ್ಲಿನ ಜಯಚಾಮರಾಜೇಂದ್ರ ಎಕ್ಸ್ ಟೆನ್ಷನ್ ನಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 8ರ ಮಂಗಳವಾರ ರಾಯರ ಪೂರ್ವಾರಾಧನೆ ಶ್ರದ್ಧಾ- ಭಕ್ತಿಯಿಂದ ನೆರವೇರಿತು. ಆರು ನೂರಕ್ಕೂ ಹೆಚ್ಚು ಭಕ್ತರು ತೀರ್ಥ-ಪ್ರಸಾದವನ್ನು ಸ್ವೀಕಾರ ಮಾಡಿದರು.

ಬೆಳಗ್ಗೆ ಹಾಗೂ ಸಂಜೆ ಪುರಾಣ ಪ್ರವಚನವನ್ನು ಏರ್ಪಡಿಸಲಾಗಿತ್ತು. ಇನ್ನು ಬುಧವಾರದಂದು ರಥೋತ್ಸವವನ್ನು ಆಯೋಜಿಸಲಾಗಿದ್ದು, ಉಪನಯನ ಮಾಡಲು ಬಯಸುವವರು ಮುಂಚಿತವಾಗಿ ತಿಳಿಸಿದ್ದರೆ ಅದಕ್ಕೂ ವ್ಯವಸ್ಥೆ ಮಾಡಲಾಗಿದೆ. ಇನ್ನು ಗುರುವಾರದಂದು ಮಠದ ಆವರಣದಲ್ಲಿ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಲಾಗಿದೆ.

Davanagere Brindavana

ಅಂದು ರಾಯರಿಗೆ ಪಾದಪೂಜೆ ಮಾಡಲು ಇಚ್ಛಿಸುವವರು ಸ್ವತಃ ಪೂಜೆಗೆ ಹಾಗೂ ಮಂಗಳಾರತಿ ಮಾಡಲು ಅನುಕೂಲ ಕಲ್ಪಿಸಲಾಗಿದೆ. ಇನ್ನು ಶ್ರಾವಣ ಮಾಸದ ಪ್ರಯುಕ್ತ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಪ್ರವಚನ ಕಾರ್ಯಕ್ರಮವನ್ನು ಪುರಂದರಾಚಾರ್ಯ ಹಯಗ್ರೀವ, ಪಾಂಡುರಂಗಾಚಾರ್ಯ, ಗೋಪಾಲಾಚಾರ್ಯರಿಂದ ಆಯೋಜಿಸಲಾಗಿದೆ.

ರಾಯರ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ತಮ್ಮ ಸೇವೆಯನ್ನು ನೀಡಲು ಬಯಸುವವರು ನೇರವಾಗಿ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ಸೇವೆಯ ವಿವರಗಳನ್ನು ತಿಳಿಯಬಹುದು ಎಂದು ಮಠದ ವ್ಯವಸ್ಥಾಪಕರಾದ ಕೆ.ಸುತೀರ್ಥ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+