ತಾವೇ ಬೆಳೆಸಿದ್ದ ಮರದಲ್ಲೆ ನೇಣಿಗೆ ಶರಣಾದ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ!
ದಾವಣಗೆರೆ, ಸೆಪ್ಟೆಂಬರ್ 20: ಸಾವಿರಾರು ಮರಗಳನ್ನು ನೆಟ್ಟು ಪೋಷಿಸಿ ಸಾಲುಮರದ ವೀರಾಚಾರಿ ಸೋಮವಾರ ರಾತ್ರಿ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ತಾವೇ ಬೆಳೆಸಿದ್ದ ಮರದಲ್ಲೇ ನೇಣಿಗೆ ಶರಣಾಗಿದ್ದಾರೆ. ನ್ಯಾಯಬೆಲೆ ಅಂಗಡಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ವೀರಾಚಾರಿ ತಮ್ಮ ಹೋರಾಟಕ್ಕೆ ನ್ಯಾಯ ಸಿಗದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪರಿಸರ ಪ್ರೇಮಿ ಸಾಲುಮರದ ಮಿಟ್ಲಕಟ್ಟೆಯ ವೀರಾಚಾರಿ ಆತ್ಮಹತ್ಯೆಗೆ ಪಡಿತರ ವಿತರಣೆಯಲ್ಲಿ ಅಕ್ರಮ ನಡೆಸಲಾಗುತ್ತಿದೆ ಎಂದು ಹೋರಾಟ ಮಾಡಿದ್ದೇ ಕಾರಣ ಎನ್ನಲಾಗಿದೆ. ಅವರು ಗ್ರಾಮದ ನ್ಯಾಯಬೆಲೆ ಅಂಗಡಿಯೊಂದರ ಅವ್ಯವಹಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಮ್ಮ ಹೋರಾಟಕ್ಕೆ ನ್ಯಾಯ ಸಿಗದೇ ನೊಂದು ಪ್ರಾಣತ್ಯಾಗ ಮಾಡಿಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪಡಿತರ ವಿತರಣೆಯಲ್ಲಿ ಜನರಿಗೆ ಕಡಿಮೆ ನೀಡಿ ಮೋಸ ಮಾಡಲಾಗುತ್ತಿದೆ ಎಂದು ವೀರಾಚಾರಿ ಅವರು ಆರೋಪಿಸಿದ್ದರು. ನಿನ್ನೆಯಷ್ಟೆ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದ್ದರು. ಕಳೆದ ಎರಡ್ಮೂರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದ ವೀರಾಚಾರಿ ಅವರು, ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ಬೆಳೆಸಿದ್ದರು. ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು.

ಶಾಮನೂರಿನಿಂದ ಮಿಟ್ಲಕಟ್ಟೆಯವರೆಗೂ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು. ಪರಿಸರ ಪ್ರೇಮಿಯಾಗಿದ್ದ ಅವರು ಯಾರೇ ಹೋಗಿ ಗಿಡಗಳನ್ನು ಕೇಳಿದರೂ ಇಲ್ಲ ಎನ್ನದೇ ಕೊಡುತ್ತಿದ್ದರು. ಶಾಲೆಗಳಲ್ಲಿ, ಸಭೆ ಸಮಾರಂಭಗಳಲ್ಲೂ ಉಡುಗೊರೆಯಾಗಿ ನೀಡುತ್ತಿದ್ದರು. ಇವರ ಪರಿಸರ ಪ್ರೇಮಕ್ಕೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
ಇನ್ನು ಮಿಟ್ಲಕಟ್ಟೆ ಗ್ರಾಮದ ಮಂದಿ ಯಾರು ಕೂಡ ಊರಿಗೆ ಬರದಂತೆ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ಜಿಲ್ಲಾಧಿಕಾರಿ ಆಹಾರ ಇಲಾಖೆ ಅಧಿಕಾರಿಗಳು ಬರುವವರೆಗೂ ಶವವನ್ನು ಕುಣಿಕೆಯಿಂದ ಕೆಳಗಿಸುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಜೊತೆಗೆ ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದರಾಮಪ್ಪ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications