ದಾವಣಗೆರೆ: ಮ್ಯಾರಥಾನ್ ಓಟ ಸ್ಪರ್ಧೆಗೆ ಕ್ಯೂಆರ್ ಕೋಡ್ ಲಿಂಕ್ ಬಳಸಿ ನೋಂದಣಿ ಆಗಿ, ವಿಜೇತರಿಗೆ ನಗದು ಬಹುಮಾನ ಎಷ್ಟು?
ದಾವಣಗೆರೆ, ಮಾರ್ಚ್, 07: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆ ಹಾಗೂ ಡ್ರಗ್ಸ್, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಆಶಯದೊಂದಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 10ಕೆ ನಗರದಲ್ಲಿ ಮ್ಯಾರಾಥಾನ್ ಹಾಗೂ 5ಕೆ ಮ್ಯಾರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆ ಆಯೋಜಿಸಲಾಗಿದೆ.
ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಈ ಜಾಥಾ ಜರುಗಲಿದೆ. ಈ ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಪೊಲೀಸರೊಂದಿಗೆ ಜಿಲ್ಲೆಯ ನಾಗರೀಕರು ಸಹ ಸ್ವ-ಹಿತಾಸಕ್ತಿಯಿಂದ ಪಾಲ್ಗೊಳಲು ಅವಕಾಶ ಕಲ್ಪಿಸಲಾಗಿದೆ. ಈ ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರು ಇಲ್ಲಿ ನೀಡಲಾಗಿರುವ ಕ್ಯೂಆರ್ ಕೋಡ್ ಲಿಂಕ್ನಲ್ಲಿ ಮಾರ್ಚ್ 9ರಂದು ಸಂಜೆ 4 ಗಂಟೆಯೊಳಗೆ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ನಗರದಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಾರ್ಚ್ 10ಕ್ಕೆ ಬೆಳಗ್ಗೆ 6 ಗಂಟೆಗೆ ಮ್ಯಾರಾಥಾನ್ ಹಾಗೂ 5ಕೆ ಮ್ಯಾರಾಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆಗೆ ಚಾಲನೆ ನೀಡಲಾಗುವುದು.
ವಿಜೇತರಿಗೆ ಬಹುಮಾನ: 10,000 ಮೀಟರ್ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮೊದಲ 3 ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಅಂದರೆ- ಮೊದಲ ಬಹುಮಾನ 10,000 ರೂಪಾಯಿ, ಎರಡನೇ ಬಹುಮಾನ 5,000, 3,000 ರೂಪಾಯಿ ಮೂರನೇ ಬಹುಮಾನ ನೀಡಲಾಗುತ್ತದೆ.
5,000 ಮೀಟರ್ ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮೊದಲ 3 ಸ್ಪರ್ದೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಅಂದರೆ ಮೊದಲ ಬಹುಮಾನ 5,000 ರೂಪಾಯಿ, ಎರಡನೇ ಬಹುಮಾನ 3,000 ರೂಪಾಯಿ, ಮೂರನೇ ಬಹುಮಾನ 2,000 ರೂಪಾಯಿ ಕೊಡಲಾಗುತ್ತದೆ.
ಮ್ಯಾರಾಥಾನ್ ಓಟದಲ್ಲಿ ಸ್ಪರ್ಧಿಸುವವರ ಗಮನಕ್ಕೆ: 10ಕೆ ಮ್ಯಾರಥಾನ್ ಹಾಗೂ 5ಕೆ ಮ್ಯಾರಥಾನ್ ಪೊಲೀಸರೊಂದಿಗೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟ ವಯಸ್ಕರಾಗಿರಬೇಕು, ಯಾವುದೇ ಆರೋಗ್ಯದ ಸಮಸ್ಯೆಗಳು ಹೊಂದಿರಬಾರದು.
ಮ್ಯಾರಾಥಾನ್ ಓಟದ ಮಾರ್ಗ: ಮಾರ್ಚ್ 10ಕ್ಕೆ ಜಿಲ್ಲಾ ಕ್ರೀಡಾಂಗಣದಿಂದ-ಡೆಂಟಲ್ ಕಾಲೇಜ್ ರಸ್ತೆ -ಗುಂಡಿ ವೃತ್ತ - ಶಾಮನೂರು ರಸ್ತೆ - ಲಕ್ಷ್ಮೀ ಫ್ಲೋರ್ ಮಿಲ್ ವೃತ್ತ ಮೂಲಕ ಬಾಪೂಜಿ ಬ್ಯಾಂಕ್ ಸಮುದಾಯ ವೃತ್ತ-ಶಾರದಾಂಭ ವೃತ್ತ ಮೂಲಕ ಸಾಗಿ ಕರ್ನಲ್ ರವೀಂದ್ರನಾಥ್ (ಕ್ಲಾಕ್ ಟವರ್ ವೃತ್ತ) ವೃತ್ತದ ಮೂಲಕ ನೇರವಾಗಿ ಸಂಗೋಳ್ಳಿ ರಾಯಣ್ಣ ವೃತ್ತ ತಲುಪಲಾಗುತ್ತದೆ.
ಅಲ್ಲಿಂದ ಬಲ ತಿರುವು ಪಡೆದು ನೇರವಾಗಿ ಹಳೆ ಪಿಬಿ ರಸ್ತೆಯಲ್ಲಿ ಅರುಣ ವೃತ್ತ(ಚೆನ್ನಮ್ಮ ವೃತ್ತ) ಮೂಲಕ ಸಾಗಿ ಎಂ.ಜಿ ವೃತ್ತದಿಂದ ಬಲ ತಿರುವು ಪಡೆದುಕೊಂಡು ಜಯದೇವ ವೃತ್ತ ಮೂಲಕ ಸಾಗಿ ವಿದ್ಯಾರ್ಥಿ ಭವನ ಜಂಕ್ಷನ್ ಮೂಲಕ ಸಾಗಿ - ಕೆಟಿಜೆ ನಗರ 16ನೇ ಕ್ರಾಸ್ ಮುಂಭಾಗ ಬಾಪೂಜಿ ಆಸ್ಪತ್ರೆ ರಸ್ತೆ ಬಳಿ ಬಲ ತಿರುವ ಪಡೆದುಕೊಂಡು ಜಿಲ್ಲಾ ಕ್ರೀಡಾಂಗಣದ ಮುಖ್ಯದ್ವಾರದ ಒಳಗಡೆ ಬರುವುದು.
5ಕೆ ಮ್ಯಾರಥಾನ್ ಓಟದ ಮಾರ್ಗ: ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಿ ಹದಡಿ ರಸ್ತೆಯ ಮುಖ್ಯದ್ವಾರದ ಮೂಲಕ ಸಾಗಿ ಡಿಆರ್ಆರ್ ಕಾಲೇಜ್ ವೃತ್ತ ಮೂಲಕ ಸಾಗಿ ಶಾಮನೂರು ಪಾರ್ವತಮ್ಮ ಕಲ್ಯಾಣ ಮಂಟಪದ ಬಳಿ ಬಲಗಡೆ ತಿರುವು ಪಡೆದುಕೊಂಡು ನೇರವಾಗಿ ಸಾಗಿ ಕಾಫಿ ಡೇ ವೃತ್ತ ಮೂಲಕ ನೂತನ್ ಕಾಲೇಜ್ ರಸ್ತೆ ಮಾರ್ಗವಾಗಿ ನೂತನ್ ಕಾಲೇಜ್ ಬಳಿ ಮುಂಭಾಗ ಬಲ ತಿರುವು ಪಡೆಯಲಾಗುತ್ತದೆ.
ಆಂಜನೇಯ ಬಡಾವಣೆಯ 15ನೇ ಕ್ರಾಸ್ ಎಡ ತಿರುವು ಪಡೆದು ನೇರವಾಗಿ ಸಂಜೀವಿನಿ ನರ್ಸಿಂಗ್ ಕಾಲೇಜ್ ಬಳಿ ಬಲ ತಿರುವು ಪಡೆದು ಆಂಜನೇಯ ದೇವಸ್ಥಾನ ಮಾರ್ಗವಾಗಿ ಸಾಗಿ ಮೆಡಿಕಲ್ ಬಾಯ್ಸ್ ಹಾಸ್ಟೆಲ್ ರಸ್ತೆ ಮೂಲಕ ಸಾಗಿ ಡೆಂಟಲ್ ಕಾಲೇಜ್ ರಸ್ತೆ ತಲುಪಲಾಗುತ್ತದೆ. ಅಲ್ಲಿಂದ ಎಡ ತಿರುವು ಪಡೆದುಕೊಂಡು ಯುಬಿಡಿಟಿ ಕಾಲೇಜ್ ಬಳಿ ಬಲ ತಿರುವು ಪಡೆದುಕೊಂಡು ಎಆರ್ಜಿ ಕಾಲೇಜ್ ರಸ್ತೆ ಮಾರ್ಗವಾಗಿ ಸಾಗಿ ನೇರವಾಗಿ ಹದಡಿ ರಸ್ತೆ ತಲುಪುವುದು ನಂತರ ಎಡ ತಿರುವು ಪಡೆದುಕೊಂಡು ಜಿಲ್ಲಾ ಕ್ರೀಡಾಂಗಣದ ಹದಡಿ ರಸ್ತೆಯ ಭಾಗದ ಮುಖ್ಯದ್ವಾರದ ಒಳಗಡೆ ಬರುವುದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications