ಗಣರಾಜ್ಯೋತ್ಸವ ವಿಶೇಷ: ಜ.23ರಿಂದ ನಾಲ್ಕು ದಿನಗಳ ಕಾಲ ದಾವಣಗೆರೆಯಲ್ಲಿ ಪುಷ್ಪ ಪ್ರದರ್ಶನ
ದಾವಣಗೆರೆ, ಜನವರಿ 22: ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ದಾವಣಗೆರೆ ನಗರದಲ್ಲಿ ಪುಷ್ಪ ಪ್ರದರ್ಶನವನ್ನು ಜ.23 ರಿಂದ 26 ರವರೆಗೆ 4 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಾ.ಲಕ್ಷ್ಮೀಕಾಂತ ಬೊಮ್ಮನರ್ ತಿಳಿಸಿದರು.
ಗಾಜಿನ ಮನೆಯಲ್ಲಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಜಿನ ಮನೆಯ ಆವರಣದಲ್ಲಿ ಸಾರ್ವಜನಿಕರಿಗೆ ಬೆಳಿಗ್ಗೆ 9ರಿಂದ ರಾತ್ರಿ 9 ಗಂಟೆಯವರೆಗೆ ಪುಷ್ಪ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ. ಪ್ರತಿ ದಿನ 10 ರೂ. ಚಿಕ್ಕವರಿಗೆ ಮತ್ತು 20 ರೂ. ವಯಸ್ಕರಿಗೆ ಪ್ರದರ್ಶನದ ಪ್ರವೇಶ ಶುಲ್ಕವಿದೆ.
ಈ ವರ್ಷ ಸರ್ಕಾರದ ಅನುದಾನ ಸಿಗದೇ ಜಿಲ್ಲಾ ಪಂಚಾಯತ್ನಿಂದ 7 ಲಕ್ಷ ರೂ. ಅನುದಾನ ಸೇರಿ ಒಟ್ಟು 10 ಲಕ್ಷ ರೂ. ಅನುದಾನದಲ್ಲಿ ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆಯ ಬಗ್ಗೆ ಅಭಿರುಚಿ ಹೆಚ್ಚಿಸಲು, ಮನೆಗಳಲ್ಲಿ ವಿವಿಧ ಅಲಂಕಾರಿಕ ಗಿಡಗಳು ಹಾಗೂ ಹೂ ಗಿಡಗಳನ್ನು ಬೆಳೆಸಲು ಪ್ರೋತ್ಸಾಹಿಸಲು, ಮಕ್ಕಳಿಗೆ ತೋಟಗಾರಿಕೆ ಬಗ್ಗೆ ಜ್ಞಾನ ಹೆಚ್ಚಿಸಲು, ಮುಖ್ಯವಾಗಿ ಮನೆಮಂದಿಯೆಲ್ಲ ಫಲಪುಷ್ಪ ಪ್ರದರ್ಶನ ವೀಕ್ಷಿಸಿ ತಮ್ಮ ದಿನ ನಿತ್ಯದ ಒತ್ತಡದ ಜೀವನದಿಂದ ಹೊರಬಂದು, ಮನಸ್ಸನ್ನು ಹಗುರಗೊಳಿಸಿ ಉತ್ಸಾಹಗೊಳಿಸಬಹುದು ಎಂದರು.
ಪುಷ್ಪ ಪ್ರದರ್ಶನದ ಮುಖ್ಯ ಆಕರ್ಷಣೆಯಾಗಿ ಗೇಟ್ ವೇ ಆಫ್ ಇಂಡಿಯಾ ಸ್ಮಾರಕವನ್ನು ಹೂವಿನಿಂದ ಅಲಂಕಾರಿತ ಕಲಾಕೃತಿಯನ್ನು 26 ಅಡಿ ಎತ್ತರ ಮತ್ತು 17 ಅಡಿ ಅಗಲದಲ್ಲಿ 2 ಲಕ್ಷದ 10 ಸಾವಿರ ಸಂಖ್ಯೆಯ ಬಿಳಿ, ಕೆಂಪು ಮತ್ತು ಹಳದಿ ಬಣ್ಣದ ಶೇವಂತಿಗೆ ಹೂವುಗಳು ಹಾಗೂ 36 ಸಾವಿರ ಕೆಂಪು ಗುಲಾಬಿ ಹಾಗೂ ಎಲೆಗಳಿಂದ ತಯಾರಿಸಿರುವ ಪ್ರತಿರೂಪವನ್ನು ಪ್ರದರ್ಶನದಲ್ಲಿ ಕಾಣಬಹುದಾಗಿದೆ.

ವಿವಿಧ ಹೂವುಗಳಾದ ಕಾರ್ನೇಷನ್, ಲಿಲಿಯಮ್, ಆಂಥೂರಿಯಮ್, ಆರ್ಕಿಡ್ಸ್, ಗೆರ್ಬೆರಾ ಮತ್ತು ಹಸಿರು ಎಲೆಗಳಿಂದ ಅಲಂಕೃತವಾಗಿರುವ 10 ಅಡಿ ಎತ್ತರದ ಹಾಗೂ 7 ಅಡಿ ಅಗಲದ 4 ಫೋಟೋ ಫ್ರೇಮ್ ಗಳ ಹೂವಿನ ಕಲಾಕೃತಿಯನ್ನು 45 ಸಾವಿರ ಹೂವುಗಳಿಂದ ಅಲಂಕರಿಸಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು.
ಪುಷ್ಪ ಪ್ರದರ್ಶನ ವೀಕ್ಷಣೆ ವೇಳೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಪಾಲಿಸುವುದು ಮತ್ತು ಸ್ಯಾನಿಟರ್ ಬಳಕೆ ಮಾಡುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಸಹಾಯಕ ನಿರ್ದೇಶಕ ಶ್ರೀಕಾಂತ್, ಶಶಿಕಲಾ, ರಾಮಕೃಷ್ಣ, ರೋಹಿತ್, ವೆಂಕಟೇಶಮೂರ್ತಿ, ವೀರಭದ್ರಸ್ವಾಮಿ ಇದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications