"ನಿವೃತ್ತ ಕಾರ್ಮಿಕರಿಗೂ ನೆರವು ನೀಡಿ"; ಸರ್ಕಾರಕ್ಕೆ ಮನವಿ
ದಾವಣಗೆರೆ, ಮೇ 12: ಕೊರೊನಾ ಕರಿನೆರಳು ನಿವೃತ್ತ ಕಾರ್ಮಿಕರ ಮೇಲೂ ಬಿದ್ದಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷದಷ್ಟು ನಿವೃತ್ತ ಕಾರ್ಮಿಕರಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 10 ಸಾವಿರ ನಿವೃತ್ತ ಕಾರ್ಮಿಕರಿದ್ದಾರೆ. ಇವರಲ್ಲಿ ಬಹುತೇಕರ ಬದುಕು ಇದೀಗ ಚಿಂತಾಜನಕವಾಗಿಯೇ ಇದೆ.
ಹೀಗಾಗಿ ದಾವಣಗೆರೆಯ ಗಣೇಶ್ ಕಾಟನ್ ಮಿಲ್ ನಿವೃತ್ತ ಕಾರ್ಮಿಕರು ತಮ್ಮ ಸಂಕಷ್ಟವನ್ನು ಸರ್ಕಾರಕ್ಕೆ ಹೇಳಿಕೊಂಡಿದ್ದಾರೆ. ನಿವೃತ್ತ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿನ ಕಾರ್ಮಿಕರೆಲ್ಲಾ 70 ವರ್ಷದ ಗಡಿಯಲ್ಲಿದ್ದು, ಎಲ್ಲರೂ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದಾರೆ. 800 ರಿಂದ 1 ಸಾವಿರ ಪೆನ್ಷನ್ ಪಡೆಯುವ ಇವರು ಜೀವನ ನಡೆಸುವುದೇ ಕಷ್ಟವಾಗಿದೆ ಎನ್ನುತ್ತಾರೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಸ್ ಚಂದ್ರಶೇಖರಪ್ಪ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರು, ಕಾರ್ಮಿಕರು ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದೆ. ಅದರಂತೆ ನಿವೃತ್ತ ಕಾರ್ಮಿಕರ ಬಗ್ಗೆಯೂ ಚಿಂತನೆ ನಡೆಸಬೇಕಿದೆ. ಆರ್ಥಿಕ ಸಂಕಷ್ಟದಲ್ಲಿರುವ ನಮಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಇತರೆ ಬಡ ವರ್ಗಕ್ಕೆ ಸರ್ಕಾರ ನೆರವಿಗೆ ನಿಂತಿದೆ. ಅದರಂತೆ ನಮಗೂ ಆರ್ಥಿಕ ಸಹಾಯ ಮಾಡಬೇಕೆಂದು ನಿವೃತ್ತ ಕಾರ್ಮಿಕರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ನಮಗೆ ಜೀವನ ಭದ್ರತೆ ಇಲ್ಲ. ಬಹುತೇಕ ಎಲ್ಲಾ ನಿವೃತ್ತ ಕಾರ್ಮಿಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಔಷಧಗಳಿಗೂ ಹಣವಿಲ್ಲದಂತಾಗಿದೆ. ಇಂಥ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿವೃತ್ತ ಕಾರ್ಮಿಕರ ಬಗ್ಗೆ ಗಮನ ಹರಿಸಿ ಅವರ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಕಾರ್ಮಿಕ ಮುಖಂಡ ಬಿ.ಎಸ್ ಚಂದ್ರಶೇಖರಪ್ಪ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications