"ನಿವೃತ್ತ ಕಾರ್ಮಿಕರಿಗೂ ನೆರವು ನೀಡಿ"; ಸರ್ಕಾರಕ್ಕೆ ಮನವಿ
ದಾವಣಗೆರೆ, ಮೇ 12: ಕೊರೊನಾ ಕರಿನೆರಳು ನಿವೃತ್ತ ಕಾರ್ಮಿಕರ ಮೇಲೂ ಬಿದ್ದಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷದಷ್ಟು ನಿವೃತ್ತ ಕಾರ್ಮಿಕರಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 10 ಸಾವಿರ ನಿವೃತ್ತ ಕಾರ್ಮಿಕರಿದ್ದಾರೆ. ಇವರಲ್ಲಿ ಬಹುತೇಕರ ಬದುಕು ಇದೀಗ ಚಿಂತಾಜನಕವಾಗಿಯೇ ಇದೆ.
ಹೀಗಾಗಿ ದಾವಣಗೆರೆಯ ಗಣೇಶ್ ಕಾಟನ್ ಮಿಲ್ ನಿವೃತ್ತ ಕಾರ್ಮಿಕರು ತಮ್ಮ ಸಂಕಷ್ಟವನ್ನು ಸರ್ಕಾರಕ್ಕೆ ಹೇಳಿಕೊಂಡಿದ್ದಾರೆ. ನಿವೃತ್ತ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿನ ಕಾರ್ಮಿಕರೆಲ್ಲಾ 70 ವರ್ಷದ ಗಡಿಯಲ್ಲಿದ್ದು, ಎಲ್ಲರೂ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದಾರೆ. 800 ರಿಂದ 1 ಸಾವಿರ ಪೆನ್ಷನ್ ಪಡೆಯುವ ಇವರು ಜೀವನ ನಡೆಸುವುದೇ ಕಷ್ಟವಾಗಿದೆ ಎನ್ನುತ್ತಾರೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಸ್ ಚಂದ್ರಶೇಖರಪ್ಪ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರು, ಕಾರ್ಮಿಕರು ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದೆ. ಅದರಂತೆ ನಿವೃತ್ತ ಕಾರ್ಮಿಕರ ಬಗ್ಗೆಯೂ ಚಿಂತನೆ ನಡೆಸಬೇಕಿದೆ. ಆರ್ಥಿಕ ಸಂಕಷ್ಟದಲ್ಲಿರುವ ನಮಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಇತರೆ ಬಡ ವರ್ಗಕ್ಕೆ ಸರ್ಕಾರ ನೆರವಿಗೆ ನಿಂತಿದೆ. ಅದರಂತೆ ನಮಗೂ ಆರ್ಥಿಕ ಸಹಾಯ ಮಾಡಬೇಕೆಂದು ನಿವೃತ್ತ ಕಾರ್ಮಿಕರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ನಮಗೆ ಜೀವನ ಭದ್ರತೆ ಇಲ್ಲ. ಬಹುತೇಕ ಎಲ್ಲಾ ನಿವೃತ್ತ ಕಾರ್ಮಿಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಔಷಧಗಳಿಗೂ ಹಣವಿಲ್ಲದಂತಾಗಿದೆ. ಇಂಥ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿವೃತ್ತ ಕಾರ್ಮಿಕರ ಬಗ್ಗೆ ಗಮನ ಹರಿಸಿ ಅವರ ನೆರವಿಗೆ ಮುಂದಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಕಾರ್ಮಿಕ ಮುಖಂಡ ಬಿ.ಎಸ್ ಚಂದ್ರಶೇಖರಪ್ಪ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications