ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ : ನಡು ರಾತ್ರಿ ರೌಡಿ ಶೀಟರ್ ಕೊಚ್ಚಿ ಕೊಲೆ

|
Google Oneindia Kannada News

ದಾವಣಗೆರೆ, ಮೇ 12 : ದಾವಣಗೆರೆ ನಗರದಲ್ಲಿ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಎಸ್‌ಪಿ ಆರ್.ಚೇತನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬುಳ್ ನಾಗ ಅಲಿಯಾಸ್ ನಾಗರಾಜ್ (30) ಹತ್ಯೆಯಾದ ರೌಡಿ ಶೀಟರ್. ದಾವಣಗೆರೆ ನಗರದ ಕೆಎಸ್ಆರ್‌ಟಿಸಿ ಬಸ್ ಡಿಪೋ ಸಮೀಪ ಶನಿವಾರ ರಾತ್ರಿ ಈ ಹತ್ಯೆ ನಡೆದಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ: ವಿಮೆ ಹಣ ಲಪಟಾಯಿಸಲು ಸಿನಿಮಾ ಮಾದರಿ ಕೊಲೆದಾವಣಗೆರೆ: ವಿಮೆ ಹಣ ಲಪಟಾಯಿಸಲು ಸಿನಿಮಾ ಮಾದರಿ ಕೊಲೆ

ಡಿಸೆಂಬರ್ 9, 2017ರಂದು ಹಾವೇರಿಯ ರಾಣೆಬೆನ್ನೂರಿನಲ್ಲಿ ಗ್ಯಾಂಗ್‌ವೊಂದು ಬುಳ್ ನಾಗನ ಮೇಲೆ ದಾಳಿ ಮಾಡಿತ್ತು. ಆದರೆ, ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಮೂರು ಬಾರಿ ನಾಗರಾಜ್ ಹತ್ಯೆ ಯತ್ನ ನಡೆದಿತ್ತು.

ಶೀಘ್ರದಲ್ಲೇ ದಾವಣಗೆರೆಯಲ್ಲಿ ಬೈಸಿಕಲ್ ಶೇರಿಂಗ್ ಸೇವೆ ಆರಂಭಶೀಘ್ರದಲ್ಲೇ ದಾವಣಗೆರೆಯಲ್ಲಿ ಬೈಸಿಕಲ್ ಶೇರಿಂಗ್ ಸೇವೆ ಆರಂಭ

Rowdy sheeter hacked to death in Davanagere

ಶನಿವಾರ ರಾತ್ರಿ ತನ್ನ ಸಹಚರರ ಜೊತೆ ಬೈಕ್‌ನಲ್ಲಿ ಬುಳ್ ನಾಗ ಬುರುವಾಗ ದುಷ್ಕರ್ಮಿಗಳು ನಾಗನ ಮೇಲೆ ದಾಳಿ ಮಾಡಿದ್ದಾರೆ. ಮಚ್ಚಿನ ಏಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಬುಳ್ ನಾಗ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗ ಕಾಮಗಾರಿ ಆರಂಭಿಸಿತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗ ಕಾಮಗಾರಿ ಆರಂಭಿಸಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬುಳ್ ನಾಗ ಕೊಲೆ, ಜೀವ ಬೆದರಿಕೆ, ಹಲ್ಲೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

English summary
The rowdy sheeter Nagaraj (30) hacked to death in Davanagere city on May 11, 2019 night. Superintendent of Police R.Chethan visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X