ಆಗ್ನೇಯ ಪದವೀಧರರ ಚುನಾವಣೆ: ದಾವಣಗೆರೆಯಲ್ಲಿ ಅ. 26ರಿಂದ ನಿಷೇಧಾಜ್ಞೆ
ದಾವಣಗೆರೆ, ಅಕ್ಟೋಬರ್ 23: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಇದೇ ಅ.28ರಂದು ಮತದಾನ ನಡೆಯಲಿದ್ದು, ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ. ಅ.28 ರಂದು ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ ಮತ ಕೇಂದ್ರದ ಬಳಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವಂತಿಲ್ಲ.

ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.
Recommended Video
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications