Get Updates
Get notified of breaking news, exclusive insights, and must-see stories!

ಆಗ್ನೇಯ ಪದವೀಧರರ ಚುನಾವಣೆ: ದಾವಣಗೆರೆಯಲ್ಲಿ ಅ. 26ರಿಂದ ನಿಷೇಧಾಜ್ಞೆ

ದಾವಣಗೆರೆ, ಅಕ್ಟೋಬರ್ 23: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಇದೇ ಅ.28ರಂದು ಮತದಾನ ನಡೆಯಲಿದ್ದು, ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ. ಅ.28 ರಂದು ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ ಮತ ಕೇಂದ್ರದ ಬಳಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವಂತಿಲ್ಲ.

Davanagere: Section 144 Imposed In The Wake Of Southeast Graduate Constituency Election

ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.

Recommended Video

      ಆಂಜಿಯೋಪ್ಲಾಸ್ಟಿ ಚಿಕಿತ್ಸೆ , Kapil ಬೇಗ ಹುಷಾರಾಗಿ | Kapil Dev in Hospital | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+