ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗ್ನೇಯ ಪದವೀಧರರ ಚುನಾವಣೆ: ದಾವಣಗೆರೆಯಲ್ಲಿ ಅ. 26ರಿಂದ ನಿಷೇಧಾಜ್ಞೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 23: ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಇದೇ ಅ.28ರಂದು ಮತದಾನ ನಡೆಯಲಿದ್ದು, ದಾವಣಗೆರೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದಾವಣಗೆರೆ, ಹರಿಹರ, ಜಗಳೂರು ತಾಲೂಕಿನಾದ್ಯಂತ ಅ.26ರ ಸಂಜೆ 5 ಗಂಟೆಯಿಂದ ಅ.28ರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಆದೇಶ ಹೊರಡಿಸಿದ್ದಾರೆ. ಅ.28 ರಂದು ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ ಮತ ಕೇಂದ್ರದ ಬಳಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವಂತಿಲ್ಲ.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ದೂರಿಗೆ ಇಲ್ಲಿ ಸಂಪರ್ಕಿಸಿ!ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ದೂರಿಗೆ ಇಲ್ಲಿ ಸಂಪರ್ಕಿಸಿ!

Davanagere: Section 144 Imposed In The Wake Of Southeast Graduate Constituency Election

Recommended Video

ಆಂಜಿಯೋಪ್ಲಾಸ್ಟಿ ಚಿಕಿತ್ಸೆ , Kapil ಬೇಗ ಹುಷಾರಾಗಿ | Kapil Dev in Hospital | Oneindia Kannada

ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ, ಪ್ರತಿಭಟನೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಕಾರ್ಯಾಚರಣೆ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.

English summary
Section 144 imposed in davanagere from oct 26 to oct 28 the wake of southeast graduate constituency election,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X