ದಾವಣಗೆರೆಯಲ್ಲಿ ಮುಂದಿನ 5 ದಿನ ವಿದ್ಯುತ್ ಕಡಿತ: ಯಾವ ಪ್ರದೇಶಗಳಿಗೆ ಎಫೆಕ್ಟ್‌?

ದಾವಣಗೆರೆ, ಅಕ್ಟೋಬರ್ 27: ಬೆಣ್ಣೆ ನಗರಿ ದಾವಣಗೆರೆಯಲ್ಲಿ ವಿದ್ಯುತ್ ಕಡಿತ ಪ್ರಕ್ರಿಯೆ ಮತ್ತೆ ಮುಂದುವರಿದಿದೆ. ಈ ಬಾರಿ ಒಟ್ಟು ಐದು ದಿನ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ವಿವಿದ್ಯು ವಿದ್ಯುತ್ ಸರಬರಾಜು ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿದೆ. ಈ ಕಾರಣದಿಂದ ಅಕ್ಟೋಬರ್ 27 ರಿಂದ 31 ರವರೆಗೆ ದಾವಣಗೆರೆಯ ಕೆಲವು ಭಾಗಗಳಲ್ಲಿ ನಿತ್ಯ ಬೆಳಗ್ಗೆ 10ಗಂಟೆಯಿಂದ ಸಂಜೆ 4ರವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಪ್ರಕಟಣೆ ನೀಡಿದೆ.

ಅ.27ರಂದು ವಿದ್ಯುತ್‌ ಕಡಿತದ ಸ್ಥಳಗಳು

ದಾವಣಗೆರೆ ಪಟ್ಟಣದ ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್‌ಲುಕ್ಕಾಸ್, ಮಹಾನಗರ ಪಾಲಿಕೆ, ಪಿಡಬ್ಲ್ಯುಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ವಿಸ್ತರಣೆ 1 ಮತ್ತು 2ನೇ ಮುಖ್ಯರಸ್ತೆ, ರಾಮ್ ಮತ್ತು ಕೊ ವೃತ್ತ,ಪೊಲೀಸ್ ಕ್ವಾರ್ಟರ್ಸ್, ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

Several Places of Davangere city face Power cut Problem on Oct 27 to Oct 31

ಅಕ್ಟೋಬರ್ 28 ರಂದು ಶುಕ್ರವಾರ ನಗರದ ಡಿಸಿಎಂ ಟೌನ್‌ಶಿಪ್ ಮತ್ತು ಎಂಸಿಸಿಬಿ ಬ್ಲಾಕ್ 2ನೇ ಮುಖ್ಯಗಳಲ್ಲಿ ಮಾತ್ರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅ.29ರಂದು ವಿದ್ಯುತ್ ಕೊರತೆ ಪ್ರದೇಶಗಳು

ಶನಿವಾರ ಅಕ್ಟೋಬರ್ 28ರಂದು ನಗರದ ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್‌ಲುಕ್ಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ವಿಸ್ತರಣೆ 1ನೇ ಮತ್ತು 2ನೇ ಮುಖ್ಯರಸ್ತೆ, ರಾಮ್ ಮತ್ತು ಕೋ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶು ವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳು, ಶಂಕರ್ ವಿಹಾರ್ ಬಡಾವಣೆ, ಪಿ.ಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ.

Several Places of Davangere city face Power cut Problem on Oct 27 to Oct 31

ಜೊತೆಗೆ ಬಿಎಸ್ಎನ್ಎಲ್ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಷನಲ್ ಹೋಟೆಲ್, ದೇವರಾಜ್ಅರಸ್ ಲೇಔಟ್ ಬಿ.ಬ್ಲಾಕ್, ಗಿರಿಯಪ್ಪ ಬಡಾವಣೆ, ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್ಎಸ್ ಬಡಾವಣೆ ಎ ಬ್ಲಾಕ್, ಎಸ್ಎಸ್ ಮಹಲ್, ಮಾವಿಂಟಾಪ್ ಆಸ್ಪತ್ರೆ, ಸುತ್ತಮುತ್ತಲಿನ ಪ್ರದೇಶಗಳು, ಕರ್ನಾಟಕ ಬ್ಯಾಂಕ್ ಸುತ್ತಲಿನ ಪ್ರದೇಶ, ಅಂಗವಿಕಲರ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು.

ಅಕ್ಟೋಬರ್ 30 ರಂದು ದಾವಣಗೆರೆಯ ಬೆಸ್ಕಾಂ ವೃತ್ತ ಹಾಗೂ ಕೈಗಾರಿಕೆ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

ಅಕ್ಟೋಬರ್ 31ರಂದು ಸೋಮವಾರ ಬೆಂಗಳೂರಿನ ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಷನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ,ಬ್ಲಾಕ್, ಗಿರಿಯಪ್ಪ ಬಡಾವಣೆ ಹಾಗೂ ಜಿಎಂಐಟಿ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+