ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ : ಚುನಾವಣೆಗೆ ಶಾಮನೂರು ಕುಟುಂಬದವರು ಸ್ಪರ್ಧಿಸಲ್ಲ!

|
Google Oneindia Kannada News

ದಾವಣಗೆರೆ, ಮಾರ್ಚ್ 29 : 'ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಶಾಮನೂರು ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ನಮ್ಮ ಕುಟುಂಬಕ್ಕೆ ಟಿಕೆಟ್ ಬೇಡ' ಎಂಬ ಸಂದೇಶವನ್ನು ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನಾಯಕರಿಗೆ ರವಾನೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬೆಂಬಲಿಗರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು. ಆದರೆ, ಶಾಮನೂರು ಕುಟುಂಬದ ಯಾರೂ ಸಹ ಕಣಕ್ಕಿಳಿಯುವುದಿಲ್ಲ.

ಶಾಮನೂರು ಕುಟುಂಬಕ್ಕಿಲ್ಲ ದಾವಣಗೆರೆ ಟಿಕೆಟ್, 'ಕೈ' ಅಭ್ಯರ್ಥಿ ಯಾರು?ಶಾಮನೂರು ಕುಟುಂಬಕ್ಕಿಲ್ಲ ದಾವಣಗೆರೆ ಟಿಕೆಟ್, 'ಕೈ' ಅಭ್ಯರ್ಥಿ ಯಾರು?

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರನ್ನು ಅಭ್ಯರ್ಥಿಯಾಗಿ ಮಾಡಬಹುದು ಎಂದು ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಎಚ್.ಬಿ.ಮಂಜಪ್ಪ ಅವರು ಶಾಮನೂರು ಕುಟುಂಬಕ್ಕೆ ಆಪ್ತರಾಗಿದ್ದಾರೆ.

ದಾವಣಗೆರೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ?ದಾವಣಗೆರೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ?

ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಅಭ್ಯರ್ಥಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಬಾರಿಸಿರುವ ಅವರು, 4 ಬಾರಿಗೆ ಕಣಕ್ಕಿಳಿದಿದ್ದಾರೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಯಾರೂ ಸ್ಪರ್ಧೆ ಮಾಡುವುದಿಲ್ಲ

ಯಾರೂ ಸ್ಪರ್ಧೆ ಮಾಡುವುದಿಲ್ಲ

ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, 'ವಯಸ್ಸಾಗಿದೆ ಓಡಾಡಲು ಆಗುವುದಿಲ್ಲ ಎಂಬ ಕಾರಣದಿಂದ ಸ್ಪರ್ಧಿಸುವುದರಿಂದ ಹಿಂದೆ ಸರಿದೆ. ಎಸ್.ಎಸ್.ಮಲ್ಲಿಕಾರ್ಜುನ ಸಹ ಸ್ಪರ್ಧಿಸುವುದಿಲ್ಲ' ಎಂದು ಹೇಳಿದರು.

ಹೈಕಮಾಂಡ್ ಟಿಕೆಟ್ ನೀಡಿತ್ತು

ಹೈಕಮಾಂಡ್ ಟಿಕೆಟ್ ನೀಡಿತ್ತು

ಎಐಸಿಸಿ ದಾವಣಗೆರೆ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆದರೆ, ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ, ಪುತ್ರನಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದರು. ಆದರೆ ಈಗ ಎಸ್.ಎಸ್.ಮಲ್ಲಿಕಾರ್ಜುನ ಅವರು ಸಹ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ತೇಜಸ್ವಿ ಪಟೇಲ್ ಅಭ್ಯರ್ಥಿ

ತೇಜಸ್ವಿ ಪಟೇಲ್ ಅಭ್ಯರ್ಥಿ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ದಾವಣಗೆರೆ ಜಿಲ್ಲಾ ಪಂಚಾಯಿತಿ ಪಕ್ಷೇತರ ಸದದ್ಯ ತೇಜಸ್ವಿ ಪಟೇಲ್‌ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. 'ಶಾಮನೂರು ಕುಟುಂಬ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಒಪ್ಪಿದರೆ ಮಾತೆ ಸ್ಪರ್ಧಿಸುವೆ' ಎಂದು ತೇಜಸ್ವಿ ಪಟೇಲ್ ಸ್ಪಷ್ಟಪಡಿಸಿದ್ದಾರೆ.

ಯಾರಾಗಲಿದ್ದಾರೆ ಅಭ್ಯರ್ಥಿ

ಯಾರಾಗಲಿದ್ದಾರೆ ಅಭ್ಯರ್ಥಿ

ದಾವಣಗೆರೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ನಿಖಿಲ್ ಕೊಂಡಜ್ಜಿ, ತೇಜಸ್ವಿ ಪಟೇಲ್ ಅವರ ಹೆಸರು ಕೇಳಿಬರುತ್ತಿದೆ. ಯಾರು ಅಭ್ಯರ್ಥಿಯಾಗಲಿದ್ದಾರೆ ಎಂದು ಕಾದು ನೋಡಬೇಕು. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ.

English summary
Former minister and Senior Congress leader Shamanur Shivashankarappa clarified that family members will not contest for Lok sabha elections 2019 from Davanagere lok sabha seat. District Congress president H.B.Manjappa may get Congress ticket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X