"ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿ ಮಾಡಿಲ್ಲ?"; ಶಾಮನೂರು ಶಿವಶಂಕರಪ್ಪ
Recommended Video
ದಾವಣಗೆರೆ, ಸೆಪ್ಟೆಂಬರ್ 4: "ಬಿಜೆಪಿ ಇಡಿ ಮತ್ತು ಐಟಿಯನ್ನು ಇಟ್ಟುಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ" ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದರು.
ದಾವಣಗೆರೆಯ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು "ಇಡಿ ಮತ್ತು ಐಟಿ ಅಧಿಕಾರಿಗಳು ಕೇವಲ ಕಾಂಗ್ರೆಸ್ ನವರ ಮನೆ ಮೇಲೆ ಮಾತ್ರ ದಾಳಿ ಮಾಡುತ್ತಿದ್ದಾರೆ. ಈ ಸೇಡಿನ ರಾಜಕಾರಣದಿಂದ ರಾಜ್ಯಾದ್ಯಂತ ಗಲಾಟೆ ಆಗುತ್ತಿದೆ. ಬಿಜೆಪಿ ಈ ದ್ವೇಷದ ರಾಜಕಾರಣ ಬಿಡಬೇಕು. ಗುಜರಾತಿನ ಶಾಸಕರನ್ನು ಡಿಕೆಶಿ ಕರೆತಂದಿದ್ದಕ್ಕೆ ಈ ರೀತಿ ಮಾಡುತ್ತಿದ್ದಾರೆ. ಇಡಿ ಮತ್ತು ಐಟಿ ಅಧಿಕಾರಿಗಳು ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿ ಮಾಡಿಲ್ಲ" ಎಂದು ಪ್ರಶ್ನಿಸಿದರು.

"ಇಡಿ, ಐಟಿ, ಸಿಬಿಐನಂತಹ ಸರ್ಕಾರಿ ಕಚೇರಿಗಳನ್ನು ಬಿಜೆಪಿಯವರು ದುರ್ಬಳಕೆ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ನವರ ಮನೆ ಮೇಲೆ ಐಟಿ ದಾಳಿ ನಡೆಸಿದರು, ರೇವಣ್ಣನ ಸಂಬಂಧಿಕರ ಮನೆ ಮೇಲೆ ಕೂಡ ದಾಳಿ ನಡೆಸಿದರು. ಇದು ಸೇಡಿನ ರಾಜಕಾರಣವಲ್ಲದೇ ಮತ್ತೇನು?" ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications