ಮುಗಿನಗುಂದಿಯಲ್ಲಿ ಕುರಿಗಳ್ಳನ ರುಂಡವನ್ನು ಕೊಡಲಿಯಿಂದ ಕಡಿದ ಕುರಿಗಾಹಿಗಳು
ದಾವಣಗೆರೆ, ಸೆಪ್ಟೆಂಬರ್ 22: ಕುರಿ ಕದಿಯುತ್ತಿದ್ದ ಕಳ್ಳನ ರುಂಡವನ್ನು ಕೊಡಲಿಯಲ್ಲಿ ಕತ್ತರಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಬಳಿ ಇರುವ ಮುಗಿನಗುಂದಿ ಗ್ರಾಮದಲ್ಲಿ ನಡೆದಿದೆ. ಐವತ್ತಾರು ವರ್ಷದ ಚಮನ್ ಸಾಬ್ ಮೃತ ವ್ಯಕ್ತಿ. ಆತ ಈ ಭಾಗದಲ್ಲಿನ ಕುಖ್ಯಾತ ಕುರಿಗಳ್ಳ ಎನ್ನಲಾಗಿದೆ.
ಮುಗಿನಗೊಂದಿ ಗ್ರಾಮದ ಜಮೀನಿನಲ್ಲಿ ಕುರಿಗಾಹಿಗಳು ಕುರಿಗಳನ್ನು ಬಿಟ್ಟಿದ್ದರು. ಭಾನುವಾರ ಬೆಳಗ್ಗೆ ಕುರಿಗಳನ್ನು ಕದಿಯುವುದಕ್ಕೆ ಚಮನ್ ಸಾಬ್ ಯತ್ನಿಸಿದ್ದಾನೆ. ಇದನ್ನು ಕಂಡು ಕುರಿಗಾಹಿಗಳು ಕೂಗಾಡಿದ್ದಾರೆ. ದಿಢೀರನೇ ಹೀಗೆ ತನ್ನನ್ನು ನೋಡಿದರಲ್ಲಾ ಎಂದು ಚಮನ್ ಸಾಬ್ ಅಲ್ಲಿಂದ ಓಡಿದ್ದಾನೆ. ಆಗ ಕುರಿಗಾಹಿಗಳು ಕೊಡಲಿ ಬೀಸಿದ್ದಾರೆ.

ಹಾಗೆ ಬೀಸಿದ ಕೊಡಲಿ ಚಮನ್ ಸಾಬ್ ನ ರುಂಡವನ್ನು ಕಡಿದಿದೆ. ಮುಂಡ ಹಾಗೂ ರುಂಡ ಬೇರೆ ಬೇರೆಯಾಗಿದೆ. ಸ್ಥಳಕ್ಕೆ ಮಲೇಬೆನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಮನ್ ಸಾಬ್ ವಿರುದ್ಧ ಹತ್ತು ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications