ಮುಗಿನಗುಂದಿಯಲ್ಲಿ ಕುರಿಗಳ್ಳನ ರುಂಡವನ್ನು ಕೊಡಲಿಯಿಂದ ಕಡಿದ ಕುರಿಗಾಹಿಗಳು
ದಾವಣಗೆರೆ, ಸೆಪ್ಟೆಂಬರ್ 22: ಕುರಿ ಕದಿಯುತ್ತಿದ್ದ ಕಳ್ಳನ ರುಂಡವನ್ನು ಕೊಡಲಿಯಲ್ಲಿ ಕತ್ತರಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಬಳಿ ಇರುವ ಮುಗಿನಗುಂದಿ ಗ್ರಾಮದಲ್ಲಿ ನಡೆದಿದೆ. ಐವತ್ತಾರು ವರ್ಷದ ಚಮನ್ ಸಾಬ್ ಮೃತ ವ್ಯಕ್ತಿ. ಆತ ಈ ಭಾಗದಲ್ಲಿನ ಕುಖ್ಯಾತ ಕುರಿಗಳ್ಳ ಎನ್ನಲಾಗಿದೆ.
ಮುಗಿನಗೊಂದಿ ಗ್ರಾಮದ ಜಮೀನಿನಲ್ಲಿ ಕುರಿಗಾಹಿಗಳು ಕುರಿಗಳನ್ನು ಬಿಟ್ಟಿದ್ದರು. ಭಾನುವಾರ ಬೆಳಗ್ಗೆ ಕುರಿಗಳನ್ನು ಕದಿಯುವುದಕ್ಕೆ ಚಮನ್ ಸಾಬ್ ಯತ್ನಿಸಿದ್ದಾನೆ. ಇದನ್ನು ಕಂಡು ಕುರಿಗಾಹಿಗಳು ಕೂಗಾಡಿದ್ದಾರೆ. ದಿಢೀರನೇ ಹೀಗೆ ತನ್ನನ್ನು ನೋಡಿದರಲ್ಲಾ ಎಂದು ಚಮನ್ ಸಾಬ್ ಅಲ್ಲಿಂದ ಓಡಿದ್ದಾನೆ. ಆಗ ಕುರಿಗಾಹಿಗಳು ಕೊಡಲಿ ಬೀಸಿದ್ದಾರೆ.

ಹಾಗೆ ಬೀಸಿದ ಕೊಡಲಿ ಚಮನ್ ಸಾಬ್ ನ ರುಂಡವನ್ನು ಕಡಿದಿದೆ. ಮುಂಡ ಹಾಗೂ ರುಂಡ ಬೇರೆ ಬೇರೆಯಾಗಿದೆ. ಸ್ಥಳಕ್ಕೆ ಮಲೇಬೆನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಮನ್ ಸಾಬ್ ವಿರುದ್ಧ ಹತ್ತು ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications