ತೋರಣಗಟ್ಟೆ: ವೇದ ಸಿನಿಮಾದ ಜುಂಜಪ್ಪ ಹಾಡು ಹೇಳುತ್ತಾ ಮಕ್ಕಳ ಜೊತೆ ಹೆಜ್ಜೆ ಹಾಕಿದ ಸಿಂಗರ್ ಮೋಹನ್ ಕುಮಾರ್
ಜಗಳೂರು, ಸೆಪ್ಟೆಂಬರ್, 09: ನಟ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದಲ್ಲಿ ಜುಂಜಪ್ಪ ಹಾಡು ಹಾಡಿದ ಶಿರಾ ತಾಲೂಕಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯದ ಪ್ರತಿಭೆ ಮೋಹನ್ ಕುಮಾರ್ ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು, ಜುಂಜಪ್ಪ ಹಾಡು ಹೇಳುತ್ತಾ ಮಕ್ಕಳ ಜೊತೆಗೆ ವೇದಿಕೆ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದರು.
ಶಿವರಾಜ್ಕುಮಾರ್ ನಟನೆಯ ವೇದ ಸಿನಿಮಾದಲ್ಲಿನ ಜುಂಜಪ್ಪ ಹಾಡು ಬರೀ ರಾಜ್ಯ ಅಲ್ಲದೆ ದೇಶದೆಲ್ಲೆಡೆ ಸದ್ದು ಮಾಡಿತ್ತು. ಅಲ್ಲದೆ ತಾವು ಹಾಡಿದ ಜುಂಜಪ್ಪ ಹಾಡಿಗೆ ಶಿವರಾಜ್ಕುಮಾರ್ ಜೊತೆ ಬುಡಕಟ್ಟು ಸಮುದಾಯದ ಮೋಹನ್ ಕುಮಾರ್ ಹೆಜ್ಜೆ ಕೂಡ ಹಾಕಿದ್ದಾರೆ. ಆಗಿನಿಂದ ಮೋಹನ್ ಕುಮಾರ್ ಅವರನ್ನು ಜೀ ಕನ್ನಡ ಸೇರಿದಂತೆ ಹಲವು ಸುದ್ದಿ ವಾಹಿನಿಗಳು ಸಂದರ್ಶನಕ್ಕೆ ಆಹ್ವಾನಿಸುತ್ತಲೇ ಇವೆ.

ಅದೇ ರೀತಿ ನಿನ್ನೆ (ಸೆಪ್ಟೆಂಬರ್ 08) ಪವಾಡ ಪುರುಷ ಶ್ರೀ ಮೆಲ್ಲೇಶ್ವರ ಹಾಗೂ ಶ್ರೀ ಕಾಟಲಿಂಗೇಶ್ವರ ಬಳಗದವರು ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೋರಣಗಟ್ಟೆಗೆ ಮೋಹನ್ ಕುಮಾರ್ ಅವರನ್ನು ಭರ್ಜರಿ ಸ್ವಾಗತದೊಂದಿದೆ ಬರಮಾಡಿಕೊಳ್ಳಲಾಯಿತು.
ನಂತರ ಮಾತನಾಡಿದ ಮೋಹನ್ ಕುಮಾರ್ ಅವರು, ತೋರಣಗಟ್ಟೆ ಗ್ರಾಮದಲ್ಲಿ ಜಾನಪದ ಕಲೆಗೆ ಬಡತನವಿಲ್ಲ. ಆದರೆ ಮಕ್ಕಳು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದರೆ ಅವರಿಗೆ ಪ್ರಮುಖವಾಗಿ ಪ್ರೋತ್ಸಾಹ ಬೇಕಿದೆ ಅಷ್ಟೇ. ಸಾಮಾನ್ಯವಾಗಿ ಪ್ರತಿಭೆಗಳ ಕಾಲು ಎಳೆಯುವವರು ಇದ್ದೇ ಇರುತ್ತಾರೆ. ಆಗಂತ ಸುಮ್ಮನೆ ಕುಳಿತುಕೊಳ್ಳಬಾರದು. ಯಾವುದೇ ಅಡೆತಡೆಗಳು ಬಂದರೂ ನಮ್ಮ ಒಳ್ಳೆಯದ್ದಕ್ಕೆ ಆಗಿರುತ್ತದೆ ಎನ್ನುವ ಮೌಲ್ಯಯುತವಾದ ಸಂದೇಶವನ್ನು ಸಾರಿದರು.
ನಾವು ಹಳ್ಳಿಗರು, ಬುಡಕಟ್ಟು ಸಮುದಾಯದವರು ಅಂತಾ ಹೀಯಾಳಿಸುವವರು ಇದ್ದೇ ಇರುತ್ತಾರೆ. ಅವುಗಳಿಗೆಲ್ಲ ಬೆಲೆ ಕೊಡದೇ ನಮ್ಮಲ್ಲಿನ ಕಲೆಗೆ ಬೆಲೆ ಕೊಟ್ಟು ಮುಂದೆ ಸಾಗುವುದೇ ಪ್ರತಿಭಾವಂತರ ಲಕ್ಷಣ ಎಂದು ಕಿವಿಮಾತು ಹೇಳಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications