ನೂತನ ಸರ್ಕಾರ ಅಸ್ತಿತ್ವಕ್ಕೆ: ದಾವಣಗೆರೆಯಲ್ಲಿ 5 ಸಾವಿರ ಜನರಿಗೆ ನಾಳೆ ಅನ್ನದಾನ
ದಾವಣಗೆರೆ, ಮೇ 19: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಮೇ. 20ರಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೇ. 20ರಂದು ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶೇಖರಪ್ಪ ನಗರ ಹಾಗೂ ಭಾರತ್ ಕಾಲೋನಿಯ ಕಾಂಗ್ರೆಸ್ ಅಭಿಮಾನಿಗಳು ತಿಳಿಸಿದರು.
ಈ ಕಾರ್ಯಕ್ರಮದ ಸಂಚಾಲಕ ಕೆ. ಎ. ಪಾಪಣ್ಣ ಮಾತನಾಡಿ, ದಾವಣಗೆರೆಯ 19 ಹಾಗೂ 20 ನೇ ವಾರ್ಡ್ನ ಶೇಖರಪ್ಪ ನಗರ, ಭಾರತ್ ಕಾಲೋನಿ ಎ ಬ್ಲಾಕ್ನ ಕಾಂಗ್ರೆಸ್ ಅಭಿಮಾನಿಗಳು ಆಎಂರ್ಸಿ ರಸ್ತೆಯಲ್ಲಿರುವ ಗಣೇಶ ಹೋಟೆಲ್ ಸರ್ಕಲ್ ಬಳಿ ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರ ಸೊಸೆ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು 5ರಿಂದ 10 ಸಾವಿರ ಜನರು ಅನ್ನ ಸಂತರ್ಪಣೆ.
ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ. ಕಾಂಗ್ರೆಸ್ಗೆ ಮತ್ತೆ ಅಧಿಕಾರ ದೊರೆತ ಹಿನ್ನೆಲೆಯಲ್ಲಿ ಅನ್ನ, ಸಾಂಬಾರು, ಗೋಧಿ ಹುಗ್ಗಿ ಸಿಹಿಯೊಂದಿಗೆ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜವಾಹರ್ ಬಾಲ್ ಮಂಚ್ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ
ದಾವಣಗೆರೆ: ನಗರದ ದುಗ್ಗಮ್ಮ ದೇವಸ್ಥಾನ ಮತ್ತು ಕಡಕ್ ಷಾ ವಲಿ ದರ್ಗಾದಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್, ಕಾಂಗ್ರೆಸ್ ಕಾರ್ಯಕರ್ತರಿಂದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಶುಭ ಕೋರಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ, ಕಾಂಗ್ರೆಸ್ ಪಕ್ಷವು ಈ ಬಾರಿ ಚುನಾವಣೆಯಲ್ಲಿ ಹಿಂದೆಂದೂ ಕಾಣದ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ವಿಶೇಷವಾಗಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ನೂತನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಿದರು.
ಮುಂದಿನ 5 ವರ್ಷ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿ. ಬಡಪರ ಯೋಜನೆಗಳನ್ನು ನೀಡಲಿ. ರಾಜ್ಯದಲ್ಲಿ ಶಾಂತಿ ಸಮೃದ್ಧಿ, ಸಹೋದರತ್ವ ನೆಲೆಸಲಿ ಎಂದು ಸಿಹಿ ಹಂಚಿ ಶುಭ ಕೋರಿದರು.
ದಾವಣಗೆರೆಯಲ್ಲಿ ನಡೆದ ಐತಿಹಾಸಿಕ ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಕಾರಣವಾಗಿದ್ದು ಈ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಜಯ ಸಾಧಿಸಿದ ಎಲ್ಲಾ ನೂತನ ಶಾಸಕರಿಗೆ ಅಭಿನಂದಿಸಿ ಮಧ್ಯಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಶ್ರಮವಹಿಸಿದ ಹಿರಿಯರಾದ ಡಾ.ಶಾಮನೂರು ಶಿವಶಂಕರಪ್ಪ ಇಲ್ಲವೇ ಎಸ್.ಎಸ್.ಮಲ್ಲಿಕಾರ್ಜುನ್ ರವರಿಗೆ ಪ್ರಭಾವಿ ಖಾತೆಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದರು.
ಈ ವೇಳೆ ಹಿರಿಯ ಮುಖಂಡರಾದ ರಾಜು ಭಂಡಾರಿ, ಕಿಸಾನ್ ಕಾಂಗ್ರೆಸ್ ಮುಖಂಡ ಎಂ. ಹಾಲೇಶ್, ಮಂಜುಸ್ವಾಮಿ ಕತ್ತಲಗೇರಿ, ಸುರೇಶ್.ಎಂ.ಜಾಧವ್, ಹರೀಶ್.ಹೆಚ್, ಹಾಲೇಶ್. ಬಿ,ಶಿಲ್ಪಾ ಪರಶುರಾಮ್, ಪ್ರೇಮಾ, ರಿಯಾಜುದ್ದೀನ್, ಧನಂಜಯ್
ಮತ್ತಿತರ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್












Click it and Unblock the Notifications