'ಮುಂದಿನ ಸಿಎಂ ಸಿದ್ದರಾಮಯ್ಯ': ದಾವಣಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ
ದಾವಣಗೆರೆ, ಜು.13: ಇನ್ನು ಚುನಾವಣೆಯೇ ಘೋಷಣೆ ಆಗಿಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದರೂ, ಅಭಿಮಾನಿಗಳು ಮಾತ್ರ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಎಂಬ ಘೋಷಣೆ ಹಾಕುವುದನ್ನು ನಿಲ್ಲಿಸಿಲ್ಲ.
ಬಾಪೂಜಿ ಗೆಸ್ಟ್ ಹೌಸ್ ಗೆ ಬಂದು ವಿಶ್ರಾಂತಿ ಪಡೆದ ಬಳಿಕ ಹೊರಗಡೆ ಬರುವಾಗ ನೆರೆದಿದ್ದ ನೂರಾರು ಸಂಖ್ಯೆಯ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾಲೇ ಪದೇ ಪದೇ ಘೋಷಣೆ ಹಾಕಿದರು. ಇದಕ್ಕೆ ನಗುತ್ತಲೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ವಿಜಯಸಂಕೇತ ತೋರಿ ಕಾರಿನಿಂದ ಹೊರಟರು. ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು ಇನ್ನು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮನೆಗೆ ಬಂದಿದ್ದ ಸಿದ್ದರಾಮಯ್ಯ ಅಲ್ಲಿಯೇ ಊಟ ಮಾಡಿದರು. ಈ ವೇಳೆ ಶಾಮನೂರು ಶಿವಶಂಕರಪ್ಪರ ಜೊತೆ ಸಮಾಲೋಚನೆ ನಡೆಸಿದರು. ಸುಮಾರು ಹತ್ತು ನಿಮಿಷಗಳ ಕಾಲ ಚರ್ಚೆ ನಡೆಸಿದರು. ಈ ವೇಳೆಯೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೆಲ್ಫಿ ತೆಗೆಸಿಕೊಳ್ಳಲು ತಾ ಮುಂದು ನಾ ಮುಂದು ಅಂತಾ ಮುಗಿಬಿದ್ದರು. ಇದಾದ ಬಳಿಕ ಹೊರಗಡೆ ಬಂದ ಸಿದ್ದರಾಮಯ್ಯ ಅವರಿಗೆ ಮುಂದಿನ ಸಿಎಂ ಸಿದ್ದರಾಮಯ್ಯ ಅಂತಾ ಕೂಗಿದರು. ಈ ವೇಳೆ ಕೆಲವರು ಹೌದು ಹುಲಿಯಾ ಅಂತಾಲೂ ಘೋಷಣೆ ಹಾಕಿದರು.
ಬೈರತಿ ಬಸವರಾಜ್ ಖಜಾಂಚಿ...!
ಇನ್ನು ಬಾಯ್ತಪ್ಪಿದ ಸಿದ್ದರಾಮಯ್ಯ ಅವರು 75 ನೇ ಜನುಮದಿನಾಚರಣೆಯ ಸಮಿತಿ ಖಜಾಂಚಿ ಬೈರತಿ ಬಸವರಾಜ ಎಂದು ಎರಡರಿಂದ ಮೂರು ಬಾರಿ ಹೇಳಿದರು. ಈ ವೇಳೆ ಅಲ್ಲಿದ್ದವರು ಗಮನಕ್ಕೆ ತಂದಾಗ ಸಿದ್ದರಾಮಯ್ಯ ಅವರು, ಬೈರತಿ ಬಸವರಾಜ್ ಅಲ್ಲ, ಭೈರತಿ ಸುರೇಶ್ ಎಂದು ಹೇಳಿದರು.

ಸಿಎಂ ಯಾರಾಗಬೇಕೆಂಬುದು ಹೈಕಮಾಂಡ್ ನಿರ್ಧರಿಸುತ್ತೆ:
ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ. ಯಾರು ಸಿಎಂ ಆಗಬೇಕೆಂದು ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲಾಗುತ್ತದೆ. ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರು ನಾನೇ ಸಿಎಂ ಎಂದು ಎಲ್ಲಿಯೂ ಹೇಳಿಲ್ಲ. ನನಗೇನೂ ಗೊತ್ತಿಲ್ಲ. ನಿಮಗೇನಾದರೂ ಹೇಳಿದ್ದರಾ. ನಾವು ಅಧಿಕಾರಕ್ಕೆ ಬರುವ ಬಗ್ಗೆ ಮಾತ್ರ ನಮ್ಮ ಯೋಚನೆ ಎಂದು ಸ್ಪಷ್ಟನೆ ನೀಡಿದರು.

ಶಾಮನೂರು ಶಿವಶಂಕರಪ್ಪರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, "ಚುನಾವಣೆಗೆ ಎಂಟು ತಿಂಗಳಿದೆ. ಚುನಾವಣೆಗೂ ನನ್ನ ಜನುಮ ದಿನದ ಆಚರಣೆಗೂ ಸಂಬಂಧ ಇಲ್ಲ. ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ 2023ರ ವಿಧಾನಸಭಾ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ. 150 ಸ್ಥಾನ ಗೆಲ್ಲಬೇಕೆಂಬ ಗುರಿ ಇದೆ," ಎಂದು ತಿಳಿಸಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications