ಸಿದ್ದರಾಮಯ್ಯ ಎಚ್ಚರಿಕೆಯಿಂದ ಇರಬೇಕು: ರಮೇಶ್ ಕುಮಾರ್
ದಾವಣಗೆರೆ, ಆಗಸ್ಟ್ 3: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮ ನಿರೀಕ್ಷೆಗಿಂತ ಮೀರಿ ಯಶಸ್ಸನ್ನು ಪಡೆದುಕೊಂಡಿದೆ. ರಾಜ್ಯದ ಇತಿಹಾಸದಲ್ಲೇ ಅಪರೂಪ ಎನ್ನುವಂತೆ ಲಕ್ಷೋಪಾದಿಯಲ್ಲಿ ಜನರು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.
"ನನ್ನಂತಹ ಮಾಜಿ ಸಚಿವನಿಗೇ ವೇದಿಕೆ ಬರಲು ಎರಡೂವರೆ ತಾಸು ತೆಗೆದುಕೊಂಡಿತು, ಎಲ್ಲಿ ನೋಡಿದರಲ್ಲಿ ಜನವೋ ಜನ" ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆದರೆ, ವೇದಿಕೆಯಲ್ಲಿ ಎಲ್ಲೂ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಲು ಜಮೀರ್ ಹೋಗಲಿಲ್ಲ.
ಅಕ್ಷರಶಃ ಸಿದ್ದರಾಮಯ್ಯನವರ ಕೊಡುಗೆಯನ್ನು ಹೊಗಳುವಂತಾಗಿದ್ದ ಈ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ಮತ್ತು ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಕಾಣಿಸಿಕೊಳ್ಳುವ ರಮೇಶ್ ಕುಮಾರ್, ಅವರ ಜೊತೆಗಿನ ಒಡನಾಟ ನೆನೆಪಿಸಿಕೊಂಡರು, ಜೊತೆಗೆ ಅವರಿಗೆ ಎಚ್ಚರಿಕೆಯನ್ನೂ ನೀಡಿದರು.

ವೇದಿಕೆಯ ಭಾಷಣಕ್ಕೆ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ್ ಕುಮಾರ್, "ಇಲ್ಲಿ ಮಳೆ ಬೀಳುವ ವಾತಾವರಣವಿದೆ, ಊಟ ಸಿಗುತ್ತೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ಆದರೂ ಇಷ್ಟು ಜನ ಇಲ್ಲಿ ಸೇರಿದ್ದಾರೆ. ಇಷ್ಟು ಜನರನ್ನು ದುಡ್ಡು ಕೊಟ್ಟು ಕರೆಸಿಕೊಳ್ಳಲು ಸಾಧ್ಯವೇ"ಎಂದು ಪ್ರಶ್ನಿಸಿದರು.
"ಸಿದ್ದರಾಮಯ್ಯನವರು ಅವರ ಕುಟುಂಬ, ಗೆಳೆಯರು, ಹಿತೈಷಿಗಳಿಗೆ ಮಾತ್ರ ಮೀಸಲಾದವರಲ್ಲ, ಅವರು ಇಡೀ ರಾಜ್ಯದ ಆಸ್ತಿ, ನಮಗೆಲ್ಲರಿಗೂ ಸೇರಿದವರು. ಅವರು ಕಾಲಿಗೆ ಬೀಳುವವರು, ನಮಸ್ಕಾರ ಹೊಡೆಯುತ್ತಾ ಹಿಂದೆ ಮುಂದೆ ಸುತ್ತುತ್ತಿರುವವರ ಬಗ್ಗೆ ಅವರು ಜಾಗ್ರತೆಯಿಂದ ಇರಬೇಕು"ಎಂದು ರಮೇಶ್ ಕುಮಾರ್ ವೇದಿಕೆಯಲ್ಲಿ ಸಿದ್ದರಾಮಯ್ಯನವರನ್ನು ಎಚ್ಚರಿಸಿದರು.

"ನಾನು ಬಹಳ ಹತ್ತಿರದಿಂದ ಅವರನ್ನು ಬಲ್ಲೆ, ಅವರ ಜೊತೆಗಿನ ಒಡನಾಟ ಎಂದೂ ಮರೆಯಲಾಗದು. ಅವರು ತಮ್ಮ ಸಾರ್ವಜನಿಕ ಜೀವನದಲ್ಲಿ ಗಳಿಸಿದ್ದು ಏನು ಎನ್ನುವುದಕ್ಕೆ ಈ ಕಾರ್ಯಕ್ರಮ ಉದಾಹರಣೆಯಾಗಬಲ್ಲದು. ಅವರು ನೂರು ಕಾಲ ಬಾಳಿ ನಮಗೆಲ್ಲರಿಗೂ ಮಾರ್ಗದರ್ಶಕರಾಗಿರಲಿ"ಎಂದು ರಮೇಶ್ ಕುಮಾರ್ ಆಶಯ ವ್ಯಕ್ತ ಪಡಿಸಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications